twitter
    For Quick Alerts
    ALLOW NOTIFICATIONS  
    For Daily Alerts

    ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆಯ ಅಂತರದಲ್ಲಿ ಪಾರಾದ 'ದಿ ವಿಲನ್' ನಿರ್ಮಾಪಕ

    |

    ಶ್ರೀಲಂಕಾದಲ್ಲಿ ನಡೆದಿರುವ ಬಾಂಬ್ ಸ್ಫೋಟದಿಂದ ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಸಿ.ಆರ್. ಮನೋಹರ್ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ ಎಂಬುದು ತಡವಾಗಿ ಬೆಳಕಿದೆ ಬಂದಿದೆ.

    ಭಾನುವಾರ ಬೆಳಿಗ್ಗೆ ಶ್ರೀಲಂಕಾದ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಇದರಲ್ಲಿ ಇಬ್ಬರು ಭಾರತೀಯರು ಸೇರಿ ಸುಮಾರು 290ಕ್ಕೂ ಅಧಿಕ ಜನರ ಸಾವನ್ನಪ್ಪಿದ್ದಾರೆ.

    ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ

    ಈ ವೇಳೆ ಶ್ರೀಲಂಕಾಗೆ ತೆರಳಿದ್ದ ಸಿ.ಆರ್ ಮನೋಹರ್ ತಾಜ್ ಹೋಟೆಲ್ ನಲ್ಲಿ ತಂಗಿದ್ದರು. ಅದೇ ಹೋಟೆಲ್ ಪಕ್ಕಾ ಬಾಂಬ್ ಬ್ಲಾಸ್ ಆಗಿದೆ. ಇದರಿಂದ ಸಹಜವಾಗಿ ಆತಂಕಗೊಂಡ ಸಿ.ಆರ್ ಮನೋಹರ್ ಅವರು ನಿನ್ನೆ ಸಂಜೆ ಭಾರತಕ್ಕೆ ವಾಪಸ್ ಆಗಿದ್ದಾರೆ.

    Cr manohar escaped in srilanka bomb blast

    ಮತ್ತೊಂದೆಡೆ ಬಾಂಬ್ ಸ್ಫೋಟದಿಂದ ತಮಿಳು ನಟಿ ರಾಧಿಕಾ ಶರತ್ ಕುಮಾರ್ ಕೂಡ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಸಿನ್ನಮೋನ್ ಹೋಟೆಲ್ ನಲ್ಲಿದ್ದ ರಾಧಿಕಾ, ಅಲ್ಲಿಂದ ಹೊರಗೆ ಹೋದ ಕೆಲವೇ ಸಮಯದಲ್ಲಿ ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ರಾಧಿಕಾ ಪಾರಾಗಿದ್ದಾರೆ.

    ಶ್ರೀಲಂಕಾ ಬಾಂಬ್ ಸ್ಫೋಟದಿಂದ ನಟಿ ರಾಧಿಕಾ ಗ್ರೇಟ್ ಎಸ್ಕೇಪ್ ಶ್ರೀಲಂಕಾ ಬಾಂಬ್ ಸ್ಫೋಟದಿಂದ ನಟಿ ರಾಧಿಕಾ ಗ್ರೇಟ್ ಎಸ್ಕೇಪ್

    ಸಿ ಆರ್ ಮನೋಹರ್ ಅವರು ವಿಧಾನಪರಿಷತ್ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕ. ಸುದೀಪ್ ಮತ್ತು ಶಿವರಾಜ್ ಕುಮಾರ್ ಅಭಿನಯಿಸಿದ್ದ 'ದಿ ವಿಲನ್' ಸಿನಿಮಾವನ್ನ ಕೊನೆಯದಾಗಿ ನಿರ್ಮಾಣ ಮಾಡಿದ್ದರು.

    English summary
    Kannada producer Cr manohar has escape in sri lanka bomb blast on sunday.
    Monday, April 22, 2019, 17:14
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X