Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಲಂಕಾ ಬಾಂಬ್ ಸ್ಫೋಟ: ಕೂದಲೆಳೆಯ ಅಂತರದಲ್ಲಿ ಪಾರಾದ 'ದಿ ವಿಲನ್' ನಿರ್ಮಾಪಕ
ಶ್ರೀಲಂಕಾದಲ್ಲಿ ನಡೆದಿರುವ ಬಾಂಬ್ ಸ್ಫೋಟದಿಂದ ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಸಿ.ಆರ್. ಮನೋಹರ್ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ ಎಂಬುದು ತಡವಾಗಿ ಬೆಳಕಿದೆ ಬಂದಿದೆ.
ಭಾನುವಾರ ಬೆಳಿಗ್ಗೆ ಶ್ರೀಲಂಕಾದ ಕೊಲೊಂಬೋದಲ್ಲಿ ಸರಣಿ ಬಾಂಬ್ ಸ್ಫೋಟವಾಗಿತ್ತು. ಇದರಲ್ಲಿ ಇಬ್ಬರು ಭಾರತೀಯರು ಸೇರಿ ಸುಮಾರು 290ಕ್ಕೂ ಅಧಿಕ ಜನರ ಸಾವನ್ನಪ್ಪಿದ್ದಾರೆ.
ಶ್ರೀಲಂಕಾ ಬಾಂಬ್ ಸ್ಫೋಟ: 5 ಮಂದಿ ಭಾರತೀಯರು ಸೇರಿ ಮೃತರ ಸಂಖ್ಯೆ 290ಕ್ಕೆ ಏರಿಕೆ
ಈ ವೇಳೆ ಶ್ರೀಲಂಕಾಗೆ ತೆರಳಿದ್ದ ಸಿ.ಆರ್ ಮನೋಹರ್ ತಾಜ್ ಹೋಟೆಲ್ ನಲ್ಲಿ ತಂಗಿದ್ದರು. ಅದೇ ಹೋಟೆಲ್ ಪಕ್ಕಾ ಬಾಂಬ್ ಬ್ಲಾಸ್ ಆಗಿದೆ. ಇದರಿಂದ ಸಹಜವಾಗಿ ಆತಂಕಗೊಂಡ ಸಿ.ಆರ್ ಮನೋಹರ್ ಅವರು ನಿನ್ನೆ ಸಂಜೆ ಭಾರತಕ್ಕೆ ವಾಪಸ್ ಆಗಿದ್ದಾರೆ.
ಮತ್ತೊಂದೆಡೆ ಬಾಂಬ್ ಸ್ಫೋಟದಿಂದ ತಮಿಳು ನಟಿ ರಾಧಿಕಾ ಶರತ್ ಕುಮಾರ್ ಕೂಡ ಕೂದಲೆಳೆಯ ಅಂತರದಿಂದ ಪಾರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಸಿನ್ನಮೋನ್ ಹೋಟೆಲ್ ನಲ್ಲಿದ್ದ ರಾಧಿಕಾ, ಅಲ್ಲಿಂದ ಹೊರಗೆ ಹೋದ ಕೆಲವೇ ಸಮಯದಲ್ಲಿ ಬಾಂಬ್ ಸ್ಪೋಟವಾಗಿದೆ. ಅದೃಷ್ಟವಶಾತ್ ರಾಧಿಕಾ ಪಾರಾಗಿದ್ದಾರೆ.
ಶ್ರೀಲಂಕಾ ಬಾಂಬ್ ಸ್ಫೋಟದಿಂದ ನಟಿ ರಾಧಿಕಾ ಗ್ರೇಟ್ ಎಸ್ಕೇಪ್
ಸಿ ಆರ್ ಮನೋಹರ್ ಅವರು ವಿಧಾನಪರಿಷತ್ ಸದಸ್ಯ ಹಾಗೂ ಸಿನಿಮಾ ನಿರ್ಮಾಪಕ. ಸುದೀಪ್ ಮತ್ತು ಶಿವರಾಜ್ ಕುಮಾರ್ ಅಭಿನಯಿಸಿದ್ದ 'ದಿ ವಿಲನ್' ಸಿನಿಮಾವನ್ನ ಕೊನೆಯದಾಗಿ ನಿರ್ಮಾಣ ಮಾಡಿದ್ದರು.