Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಹೆಜ್ಜೆಯಲ್ಲಿ ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್
ಅಕಾಡೆಮಿ ನಡೆಸಿಕೊಡುತ್ತಿರುವ ಕಲಾವಿದರೊಂದಿಗಿನ ಮುಖಾಮುಖಿ ಕಾರ್ಯಕ್ರಮ 'ಬೆಳ್ಳಿಹೆಜ್ಜೆ'. ಈಗಾಗಲೆ ಈ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಹಲವಾರು ಸಿನೆಮಾ ತಾರೆಗಳು ತಮ್ಮ ಒಡಲಾಳದ ಕತೆಗಳನ್ನು ಹೇಳಿಕೊಂಡು ಪ್ರೇಕ್ಷಕ ದೊರೆಗಳಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.
ಈಗ ಇದೇ 'ಬೆಳ್ಳಿಹೆಜ್ಜೆ' ಕಾರ್ಯಕ್ರಮಕ್ಕೆ ನಮ್ಮ ಕ್ರೇಜಿಸ್ಟಾರ್ ರವಿಚಂದ್ರನ್ ಆಗಮಿಸುತ್ತಿದ್ದಾರೆ. ಆದರೆ ಈ ಬೆಳ್ಳಿಹೆಜ್ಜೆ ಕಾರ್ಯಕ್ರಮ ನಡೆಯುತ್ತಿರುವುದು ಕರ್ನಾಟಕದಲ್ಲಿ ಅಲ್ಲವೇ ಅಲ್ಲ ಎಂಬುದು ಕ್ರೇಜಿ ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸುತ್ತದೆ.
ಮೂಲಗಳ ಪ್ರಕಾರ ಈ ಬಾರಿಯ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಸಪ್ತಸಾಗರದಾಚೆ ಆಯೋಜಿಸಲಾಗಿದೆ! ಅಟ್ಲಾಂಟಾದಲ್ಲಿ ಬೆಳ್ಳಿಹೆಜ್ಜೆ ಕಾರ್ಯಕ್ರಮ ನಡೆಯಲಿದೆ ಎಂಬ ಸುದ್ದಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಿಂದ ಲೀಕ್ ಆಗಿದೆ.
2012ರ ಅಕ್ಕ ಸಮ್ಮೇಳನ ಅಮೆರಿಕದ ಅಟ್ಲಾಂಟಾದಲ್ಲಿ ನಡೆಯಲಿದೆ. ಆಗಸ್ಟ್ 31ರಿಂದ ಸೆಪ್ಟೆಂಬರ್ 2ರವರೆಗೆ ಮೂರು ದಿನಗಳ ಕಾಲ 7ನೇ 'ಅಕ್ಕ' ವಿಶ್ವ ಕನ್ನಡ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿಯ ಸಮ್ಮೇಳನಕ್ಕೆ ಹಲವಾರು ಸಿನೆಮಾ ತಾರೆಗಳನ್ನು ಆಹ್ವಾನಿಸಿರುವುದು ಗೊತ್ತೇ ಇದೆ.
ಈ ಬಾರಿಯ ಅಟ್ಲಾಂಟಾ ಅಕ್ಕ ಸಮ್ಮೇಳನಲ್ಲೇ ಬೆಳ್ಳಿಹೆಜ್ಜೆ ಕಾರ್ಯಕ್ರಮವನ್ನು ಆಯೋಜಿಸೋಣ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ತೀರ್ಮಾನಿಸಿದೆ. ಅನಿವಾಸಿ ಭಾರತೀಯ ಚಿತ್ರರಸಿಕರಿಗೆ ರವಿಚಂದ್ರನ್ ಬೆಳ್ಳಿಹೆಜ್ಜೆ ಏರ್ಪಡಿಸಿದರೆ ಹೇಗೆ ಎಂಬ ಐಡಿಯಾ ಅಕಾಡೆಮಿ ಅಧ್ಯಕ್ಷೆ ತಾರಾ ಅನುರಾಧಾ ಅವರಿಗೆ ಬಂದಿದೆಯಂತೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗುತ್ತದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. (ಏಜೆನ್ಸೀಸ್)