ತೆರೆಗೆ ರವಿಚಂದ್ರನ್ 'ದೃಶ್ಯ', ನೋಡುವುದೆಲ್ಲ ನಿಜವಲ್ಲ
ಮಲಯಾಳಂ ಚಿತ್ರರಂಗದಲ್ಲಿ ಆಲ್ ಟೈಮ್ ದಾಖಲೆ ಸೃಷ್ಟಿಸಿದ 'ದೃಶ್ಯಂ' ಚಿತ್ರವನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಅವರು 'ದೃಶ್ಯ' ರೂಪದಲ್ಲಿ ಕನ್ನಡಕ್ಕೆ ತರುತ್ತಿದ್ದಾರೆ. 'ದೃಶ್ಯ' ಚಿತ್ರ ಈ ವಾರ (ಜೂ.20) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇ4 ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಮುಖೇಶ್.ಆರ್.ಮೆಹತಾ ಅವರು ನಿರ್ಮಿಸಿರುವ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪಿ.ವಾಸು ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಮಧು ನೀಲಕಂಠನ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಇಳಯರಾಜ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದರೆ ವಿ.ನಾಗೇಂದ್ರಪ್ರಸಾದ್ ಗೀತರಚನೆ ಮಾಡಿದ್ದಾರೆ. [ರಣಧೀರನಿಗೆ ದರ್ಶನ್, ಸುದೀಪ್, ಪುನೀತ್ ಸಾಥ್]
ರೈತನೊಬ್ಬ ಒಂದು ಅಪಾಯದ ಸನ್ನಿವೇಶದಿಂದ ತನ್ನ ಮಡದಿ ಮಕ್ಕಳನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂಬುದೇ 'ದೃಶ್ಯಂ' ಚಿತ್ರದ ಕಥಾವಸ್ತು. ತೆಲುಗು, ತಮಿಳಿಗೂ ರೀಮೇಕ್ ಆಗುತ್ತಿದೆ. ಮೂಲ ಚಿತ್ರದಲ್ಲಿ ಮೋಹನ್ ಲಾಲ್ ಹಾಗೂ ಮೀನಾ ಮುಖ್ಯಭೂಮಿಕೆಯಲ್ಲಿದ್ದರು. ಸೆನ್ಸಾರ್ ಮಂಡಳಿ ಈ ಚಿತ್ರಕ್ಕೆ ಕ್ಲೀನ್ ಯು ಸರ್ಟಿಫಿಕೇಟ್ ನೀಡಿದೆ.ಸುರೇಶ್ಅರಸ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರವಿಚಂದ್ರನ್, ನವ್ಯನಾಯರ್, ಶ್ರೀನಿವಾಸಮೂರ್ತಿ, ಜೈಜಗದೀಶ್, ಅಚ್ಯುತರಾವ್, ಶಿವಾಜಿಪ್ರಭು, ಸುಚೀಂದ್ರಪ್ರಸಾದ್, ಆಶಾ ಶರತ್, ಸಾಧುಕೋಕಿಲ, ಸ್ವರೂಪಿಣಿ, ಉನ್ನತಿ ಮುಂತಾದವರಿದ್ದಾರೆ. 'ದೃಶ್ಯ' ಚಿತ್ರಕ್ಕೆ "ನೋಡುವುದೆಲ್ಲ ನಿಜವಲ್ಲ" ಎಂಬ ಅಡಿಬರಹವಿದೆ. (ಒನ್ಇಂಡಿಯಾ ಕನ್ನಡ)


Click it and Unblock the Notifications












