Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆಗೆ ರವಿಚಂದ್ರನ್ 'ದೃಶ್ಯ', ನೋಡುವುದೆಲ್ಲ ನಿಜವಲ್ಲ
ಮಲಯಾಳಂ ಚಿತ್ರರಂಗದಲ್ಲಿ ಆಲ್ ಟೈಮ್ ದಾಖಲೆ ಸೃಷ್ಟಿಸಿದ 'ದೃಶ್ಯಂ' ಚಿತ್ರವನ್ನು ಕ್ರೇಜಿಸ್ಟಾರ್ ರವಿಚಂದ್ರನ್ ಅವರು 'ದೃಶ್ಯ' ರೂಪದಲ್ಲಿ ಕನ್ನಡಕ್ಕೆ ತರುತ್ತಿದ್ದಾರೆ. 'ದೃಶ್ಯ' ಚಿತ್ರ ಈ ವಾರ (ಜೂ.20) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಇ4 ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಮುಖೇಶ್.ಆರ್.ಮೆಹತಾ ಅವರು ನಿರ್ಮಿಸಿರುವ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪಿ.ವಾಸು ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ಮಧು ನೀಲಕಂಠನ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಇಳಯರಾಜ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದರೆ ವಿ.ನಾಗೇಂದ್ರಪ್ರಸಾದ್ ಗೀತರಚನೆ ಮಾಡಿದ್ದಾರೆ. [ರಣಧೀರನಿಗೆ ದರ್ಶನ್, ಸುದೀಪ್, ಪುನೀತ್ ಸಾಥ್]
ಸುರೇಶ್ಅರಸ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರವಿಚಂದ್ರನ್, ನವ್ಯನಾಯರ್, ಶ್ರೀನಿವಾಸಮೂರ್ತಿ, ಜೈಜಗದೀಶ್, ಅಚ್ಯುತರಾವ್, ಶಿವಾಜಿಪ್ರಭು, ಸುಚೀಂದ್ರಪ್ರಸಾದ್, ಆಶಾ ಶರತ್, ಸಾಧುಕೋಕಿಲ, ಸ್ವರೂಪಿಣಿ, ಉನ್ನತಿ ಮುಂತಾದವರಿದ್ದಾರೆ. 'ದೃಶ್ಯ' ಚಿತ್ರಕ್ಕೆ "ನೋಡುವುದೆಲ್ಲ ನಿಜವಲ್ಲ" ಎಂಬ ಅಡಿಬರಹವಿದೆ. (ಒನ್ಇಂಡಿಯಾ ಕನ್ನಡ)