Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ನೂತನ ಚಿತ್ರ 'ದೃಶ್ಯಂ' ರೆಡಿ
'ಕ್ರೇಜಿಸ್ಟಾರ್' ಚಿತ್ರದ ಬಳಿಕ ರವಿಚಂದ್ರನ್ ಅವರು ಮತ್ತೆ ಫಾರ್ಮ್ ಗೆ ಮರಳಿದ್ದಾರೆ. 'ಮಾಣಿಕ್ಯ' ಚಿತ್ರದಲ್ಲಿನ ಅಭಿನಯ ಅವರ ಅಭಿಮಾನಿಗಳಿಗೆ ಹಿಡಿಸಿದೆ. ಈಗ ಅವರು ಮತ್ತೊಮ್ಮೆ ಪೂರ್ಣ ಪ್ರಮಾಣದಲ್ಲಿ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ.
ರೈತನೊಬ್ಬ
ಒಂದು
ಅಪಾಯದ
ಸನ್ನಿವೇಶದಿಂದ
ತನ್ನ
ಮಡದಿ
ಮಕ್ಕಳನ್ನು
ಹೇಗೆ
ಕಾಪಾಡಿಕೊಳ್ಳುತ್ತಾನೆ
ಎಂಬುದೇ
'ದೃಶ್ಯಂ'
ಚಿತ್ರದ
ಕಥಾವಸ್ತು.
ಈಗಾಗಲೆ
ಈ
ಚಿತ್ರ
ಮಲಯಾಳಂನಲ್ಲಿ
ಆಲ್
ಟೈಮ್
ದಾಖಲೆ
ಸೃಷ್ಟಿಸಿದೆ.
ತೆಲುಗು,
ತಮಿಳಿಗೂ
ರೀಮೇಕ್
ಆಗುತ್ತಿದೆ.
ಮೂಲ
ಚಿತ್ರದಲ್ಲಿ
ಮೋಹನ್
ಲಾಲ್
ಹಾಗೂ
ಮೀನಾ
ಮುಖ್ಯಭೂಮಿಕೆಯಲ್ಲಿದ್ದರು.
ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವ ಪಿ ವಾಸು ಅವರ ಹಿಂದಿನ ಚಿತ್ರ ಆರಕ್ಷಕ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಸಾಧಿಸಲಿಲ್ಲ. ಅದಕ್ಕೂ ಮುಂಚಿನ ಆಪ್ತರಕ್ಷಕ ಹಾಗೂ ಆಪ್ತಮಿತ್ರ ಚಿತ್ರಗಳು ಮಾತ್ರ ಭರ್ಜರಿ ಗೆಲುವು ತಂದುಕೊಟ್ಟಿದ್ದವು. ಕನ್ನಡ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ.
ಈ4 ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಮುಖೇಶ್.ಆರ್.ಮೆಹತಾ ಅವರು ನಿರ್ಮಿಸುತ್ತಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ಮಡಿಕೇರಿಯಲ್ಲಿ ಮೂವತ್ತು ದಿನಗಳ ಚಿತ್ರೀಕರಣ ನಡೆದಿದೆ. ಇದರೊಂದಿಗೆ ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ.
ರವಿಚಂದ್ರನ್, ನವ್ಯಾನಾಯರ್, ಶಿವಾಜಿ ಪ್ರಭು, ಆಶಾ ಶರತ್, ಶ್ರೀನಿವಾಸಮೂರ್ತಿ, ಅಚ್ಯುತಕುಮಾರ್, ಸುಚೇಂದ್ರಪ್ರಸಾದ್, ಶಿವರಾಂ, ಜೈಜಗದೀಶ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಖ್ಯಾತ ನಿರ್ದೇಶಕ ಪಿ.ವಾಸು ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರ 'ದೃಶ್ಯಂ' ಚಿತ್ರದ ರಿಮೇಕ್. ಮಧು ನೀಲಕಂಠನ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಇಳಯರಾಜ ಸಂಗೀತ ನೀಡಿದ್ದಾರೆ. ಎಂ.ಎಸ್.ರಮೇಶ್ ಈ ಚಿತ್ರಕ್ಕೆ ಸಂಭಾಷಣೆ ಬರೆದರೆ ವಿ.ನಾಗೇಂದ್ರಪ್ರಸಾದ್ ಗೀತರಚನೆ ಮಾಡಿದ್ದಾರೆ.
ರವಿಚಂದ್ರನ್, ನವ್ಯನಾಯರ್, ಶ್ರೀನಿವಾಸಮೂರ್ತಿ, ಜೈಜಗದೀಶ್, ಶಿವಾಜಿಪ್ರಭು ಅಚ್ಯುತರಾವ್, ಸುಚೀಂದ್ರಪ್ರಸಾದ್, ಆಶಾಶರತ್, ಸಾಧುಕೋಕಿಲ, ಸ್ವರೂಪಿಣಿ, ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. (ಒನ್ಇಂಡಿಯಾ ಕನ್ನಡ)