Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೇಜಿಸ್ಟಾರ್ ರವಿಚಂದ್ರನ್ ಈಗ ಶೃಂಗಾರ ರಾಮ
ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೂ ಶೃಂಗಾರಕ್ಕೂ ದ್ರಾಕ್ಷಿಗೂ ಬಳ್ಳಿಗೂ ಇರುವ ಸಂಬಂಧ. ತೆರೆಯ ಮೇಲೆ ಅವರು ಅದೆಷ್ಟೋ ಹೆಂಗೆಳೆಯರ ಹೃದಯ ಕದ್ದ ಶೃಂಗಾರ ಪುರುಷ. ಅವರ ಚಿತ್ರಗಳಲ್ಲಿ ಶೃಂಗಾರಕ್ಕೆ ವಿಶೇಷ ಆದ್ಯತೆ ಇರುವುದು ಗೊತ್ತೇ ಇದೆ. ಇದೀಗ ಅವರು 'ಶೃಂಗಾರ ರಾಮ'ನಾಗಿ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗುತ್ತಿದ್ದಾರೆ.
ಸತತ ಸೋಲುಗಳಿಂದ ಕಂಗೆಟ್ಟಿ ರವಿಚಂದ್ರನ್ ಅವರು 'ಕ್ರೇಜಿಸ್ಟಾರ್' ಚಿತ್ರದ ಮೂಲಕ ಮತ್ತೆ ಫೀನಿಕ್ಸ್ ಪಕ್ಷಿಯಂತೆ ಎದ್ದು ಬಂದಿದ್ದಾರೆ. ಈ ಚಿತ್ರದ ಗೆಲುವು ಅವರನಲ್ಲಿ ಇನ್ನಷ್ಟು ಹೊಸ ಚೈತನ್ಯ ತುಂಬಿದೆ. ಈಗವರು ಸಾಕಷ್ಟು ಚಿತ್ರಗಳಲ್ಲಿ ಬಿಜಿಯಾಗಿದ್ದಾರೆ. ಮಲಯಾಳಂನ 'ದೃಶ್ಯಂ' ಚಿತ್ರವನ್ನು ಕನ್ನಡಕ್ಕೆ ತರುತ್ತಿದ್ದಾರೆ. ಪಿ.ವಾಸು ಆಕ್ಷನ್ ಕಟ್ ಹೇಳಿತ್ತಿರುವ ಚಿತ್ರ ಇದಾಗಿದೆ. [ಕ್ರೇಜಿಸ್ಟಾರ್ ಚಿತ್ರವಿಮರ್ಶೆ]
'ಕ್ರೇಜಿಸ್ಟಾರ್' ಚಿತ್ರ ರವಿಚಂದ್ರನ್ ಅವರನ್ನು ಮತ್ತೆ ಟ್ರ್ಯಾಕ್ ಗೆ ಬರುವಂತೆ ಮಾಡಿದೆ. ಇದೀಗ ಅವರು ನಲ್ಲ ಸುದೀಪ್ ಜೊತೆಗಿನ 'ಮಾಣಿಕ್ಯ' ಚಿತ್ರದಲ್ಲಿ ತಂದೆಯ ಪಾತ್ರವನ್ನು ಪೋಷಿಸುತ್ತಿದ್ದಾರೆ. ಇದೀಗ ಶೃಂಗಾರ ರಾಮನಾಗುತ್ತಿದ್ದಾರೆ. ಚಿತ್ರ ಏಪ್ರಿಲ್ ನಲ್ಲಿ ಸೆಟ್ಟೇರಲಿದೆ ಎಂಬುದು ಸದ್ಯದ ಮಾಹಿತಿ. (ಏಜೆನ್ಸೀಸ್)