Don't Miss!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- News Agniveer: 'ಅಗ್ನಿವೀರ್' ಯೋಜನೆಗೆ ಬದಲಾವಣೆ ತರಲು ಕೇಂದ್ರ ಮುಕ್ತ: ರಕ್ಷಣಾ ಸಚಿವ
- Automobiles ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ಹೋರಾಟಕ್ಕೆ ಧುಮುಕಿದ ಕ್ರೇಜಿಸ್ಟಾರ್
ಕನ್ನಡ ಚಿತ್ರೋದ್ಯಮ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದೆ. ಅಕ್ಟೋಬರ್ 6ರಂದು ಕನ್ನಡ ಚಿತ್ರೋದ್ಯಮ ಬಂದ್ ಗೆ ಕರೆನೀಡಿದೆ. (ಸಂಪೂರ್ಣ ವರದಿ ಓದಿ)
ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಕಾವೇರಿ ಹೋರಾಟಕ್ಕೆ ಧುಮುಕಿದ್ದಾರೆ. ನಮಗೇ ಕುಡಿಯಲು ನೀರಿಲ್ಲ. ಇನ್ನು ತಮಿಳುನಾಡಿಗೆ ಬಿಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಮೊದಲು ನಮಗೆ ನೀರು ಬೇಕು. ಆಮೇಲೆ ಬೇರೆಯವರ ಬಗ್ಗೆ ವಿಚಾರ ಮಾಡೋಣ ಎಂದಿದ್ದಾರೆ. ಕಾವೇರಿ ಹೋರಾಟದಲ್ಲಿ ತಾವು ಸಕ್ರಿಯವಾಗಿ ಭಾಗವಹಿಸಲಿದ್ದು ಕನ್ನಡ ಚಿತ್ರೋದ್ಯಮದ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದ್ದಾರೆ.
ಅವರು ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾತನಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಅವರು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡುತ್ತಾ, ತಮಗೆ ರಾಜಕೀಯ ಗೊತ್ತಿಲ್ಲ ಎಂದರು.
ಕನ್ನಡ ಚಿತ್ರೋದ್ಯಮ ಹಾಗೂ ಕನ್ನಡಿಗರಿಗೆ ಅನ್ಯಾಯವಾದಾಗಲೆಲ್ಲಾ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಬೀದಿಗಿಳಿದು ಪ್ರತಿಭಟಿಸುತ್ತಿರುವುದು ಗೊತ್ತೇ ಇದೆ. (ಒನ್ಇಂಡಿಯಾ ಕನ್ನಡ)