Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರಿಕೆಟ್ ಅಂಗಳದಿಂದ ಗಾಂಧಿ ನಗರಕ್ಕೆ ಬಂದ ಪ್ರವೀಣ್
ಕ್ರಿಕೆಟ್ ಅಂಗಳದಲ್ಲಿ ಬ್ಯಾಟು ಬೀಸುತ್ತಿದ್ದ ಕ್ರಿಕೆಟಿಗ ಸಿನಿಮಾ ನಾಯಕನಾಗುವ ಕನಸು ಹೊತ್ತು ಗಾಂಧಿ ನಗರಕ್ಕೆ ಅಡಿಯಿಟ್ಟಿದ್ದಾರೆ. ಕ್ರಿಕೆಟ್ನಲ್ಲಿ ಸಿಕ್ಸರ್ ಹೊಡೆದು ಅಭ್ಯಾಸವಿರುವ ಯುವಕ ಪ್ರವೀಣ್ ಗಾಂಧಿ ನಗರದಲ್ಲಿಯೂ 'ಸಿಕ್ಸರ್' ಹೊಡೆಯುತ್ತಾರಾ ನೋಡಬೇಕಿದೆ.
'ಡಿಯರ್ ಕಣ್ಮಣಿ' ಸಿನಿಮಾದ ಮೂಲಕ ನಾಯಕ ನಟನಾಗಲು ಹೊರಟಿದ್ದಾರೆ ಪ್ರವೀಣ್. ವಿಸ್ಮಯಾ ಗೌಡ ಅವರ ಚೊಚ್ಚಲ ನಿರ್ದೇಶನದ ಸಿನಿಮಾ ಇದಾಗಿದ್ದು, ಆಡಿಷನ್ ಮೂಲಕ ಪ್ರವೀಣ್ ಅನ್ನು ಆಯ್ಕೆ ಮಾಡಿದ್ದರಂತೆ ವಿಸ್ಮಯ.
ಚಿಕ್ಕಂದಿನಿಂದಲೂ ಕ್ರಿಕೆಟ್ನಲ್ಲಿ ಆಸಕ್ತಿವಹಿಸಿದ್ದ ಪ್ರವೀಣ್, ಕರ್ನಾಟಕದ ಅಂಡರ್ 19, ಅಂಡರ್ 22 ಹಾಗೂ ರೈಲ್ವೇಸ್ ತಂಡಗಳಲ್ಲಿ ಆಡಿದ್ದಾರೆ. ಕ್ಲಬ್ ಒಂದಕ್ಕಾಗಿ ಆಡುವಾಗ ಅವರು ಹೊಡೆದಿದ್ದ 188 ರನ್ ಹೊಡೆದಿರುವುದು ಅವರ ಬೆಸ್ಟ್ ಇನಿಂಗ್ಸ್. ಕೆಪಿಎಲ್, ಕೆಸಿಸಿನಲ್ಲೂ ಆಡಿ ಮಿಂಚಿದ್ದಾರೆ.
ಸುದೀಪ್ ಅಭಿಮಾನಿ ಆಗಿರುವ ಪ್ರವೀಣ್, "ನಾನು ಸುದೀಪ್ ಅಣ್ಣ ಅವರ ಅಭಿಮಾನಿ. ಅವರನ್ನೇ ನನ್ನ ರೋಲ್ ಮಾಡೆಲ್ ಎಂದು ನಂಬುತ್ತೇನೆ. ಅವರ ಅಭಿನಯ ನೋಡಿ ನನಗೂ ನಟನೆಯಲ್ಲಿ ಆಸಕ್ತಿ ಬೆಳೆಯಿತು. ಕಳೆದ 5-6 ವರ್ಷಗಳಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಏನಾದರೂ ಸಾಧಿಸಬೇಕು ಎಂದು ಅವಕಾಶದ ಹುಡುಕಾಟದಲ್ಲಿದ್ದೆ, ಈಗ ಅವಕಾಶ ದೊರೆತಿದೆ' ಎಂದಿದ್ದಾರೆ.
'ಕ್ರಿಕೆಟ್ ಆಡುವಾಗ ನನಗೆ ಯಾರೂ ಬೆಂಬಲಿಗರು ಇರಲಿಲ್ಲ. "ಡಿಯರ್ ಕಣ್ಮಣಿ"ಗೆ ಆಡಿಷನ್ ಕೊಟ್ಟ ನಂತರ ವಿಸ್ಮಯಾ ಗೌಡ ಅವರು ನನಗೆ ಬೆಂಬಲ ಕೊಟ್ಟರು. ಮೊದಲೇ ಸ್ನೇಹಿತರಾಗಿದ್ದರು ಆದರೆ ಅವರ ತಂಡದ ಉತ್ಸಾಹ, ಸಿನಿಮಾದ ಕಥೆ, ನನಗೆ ಸಿಕ್ಕ ಪಾತ್ರ, ಅದರಲ್ಲೂ ಮೊದಲ ಸಿನಿಮಾದಲ್ಲೇ "ಹೀರೋ ರೋಲ್' ಇದೆಲ್ಲಾ ನೋಡಿ ನಾನು ನಿಜಕ್ಕೂ ಕನಸು ಕಾಣಲು ಆರಂಭಿಸಿದೆ ಎಂದರು.
ಕ್ರಿಕೆಟ್ ಆಡುವಾಗ ನಾನು ಸಾಕಷ್ಟು ಬೆವರು ಹರಿಸಿದ್ದೆ. ಅದೇ ರೀತಿ ಸಿನಿಮಾಕ್ಕಾಗಿ ಕೂಡ ನಾನು ಶ್ರಮ ಹಾಕಿ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಗೆದ್ದೇ ಗೆಲ್ಲುತ್ತೇನೆ ಅನ್ನುವ ಭರವಸೆ ಇದೆ' ಎಂದಿದ್ದಾರೆ ಪ್ರವೀಣ್.
ಕ್ರಿಕೆಟ್ ಆಟಗಾರನಿಂದ ನಟನಾಗಲಿರುವ ಪ್ರವೀಣ್ ಅವರಿಗೆ ಅವರಿಂದ ಧ್ವನಿ, ನಟನೆ, ಲುಕ್ ಎಲ್ಲಾ ರೀತಿಯಲ್ಲೂ ತರಬೇತಿಯನ್ನು ನೀಡಲಾಗುತ್ತಿದೆ.
Recommended Video
'ಈ ಸಿನಿಮಾದಲ್ಲಿ ನನ್ನ ಪಾತ್ರ ಚೆನ್ನಾಗಿದೆ. ತೆರೆ ಮೇಲೂ ಅದು ಹಾಗೇ ಕಾಣಬೇಕಾದರೆ ತರಬೇತಿ ಬೇಕು ಎನ್ನುವುದು ನಿರ್ದೇಶಕಿ ವಿಸ್ಮಯಾ ಅವರ ಕನಸು. ಅವರ ಶ್ರಮ ಹಾಗೂ ಕನಸಿಗೆ ನಾವು ಬೆಂಬಲ ನೀಡುತ್ತಿದ್ದೇವೆ. ನಮ್ಮ ಎಲ್ಲಾ ಅಗತ್ಯ ಹಾಗೂ ಭರವಸೆಗೂ ವಿಸ್ಮಯಾ ಅವರು ಜೊತೆ ಇದ್ದಾರೆ' ಎಂದು ಪ್ರವೀಣ್ ಹೇಳಿದರು.