Don't Miss!
- News ಜನ ಸೇವಕನಾಗಿ ದುಡಿಯಲು ನನಗೊಂದು ಅವಕಾಶ ಕೊಡಿ: ವಿನೋದ್ ಅಸೂಟಿ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧರಣಿ ನಿರತ ನಿರ್ಮಾಪಕರ ಭವಿಷ್ಯ ಇಂದು ಅಂಬರೀಷ್ ಕೈಯಲ್ಲಿ!
ನಿರ್ಮಾಪಕರು ಬೀದಿಗಿಳಿದು ನಾಳೆಗೆ ಒಂದು ವಾರ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಕಳೆದ ಸೋಮವಾರದಿಂದ ಹಲವು ನಿರ್ಮಾಪಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಿರ್ಮಾಪಕರ ಧರಣಿಗೆ ಮಣಿದಿರುವ ಕಲಾವಿದರ ಸಂಘ ಇಂದು ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಸಲಿದೆ.
ರೆಬೆಲ್ ಸ್ಟಾರ್ ಅಂಬರೀಷ್ ನೇತೃತ್ವದಲ್ಲಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಥಾಮಸ್ ಡಿಸೋಜ ಮತ್ತು ನಿರ್ಮಾಪಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ಕಲಾವಿದರ ಸಂಘದ ಸಭೆ ನಡೆಯಲಿದೆ. [ನಿರ್ಮಾಪಕರ ಧರಣಿ ; ಅಂಬರೀಶ್ ನಿಲುವೇನು?]
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನವರಸ ನಾಯಕ ಜಗ್ಗೇಶ್, ನಟಿ ತಾರಾ, ಸುದೀಪ್, ದರ್ಶನ್, ಗಣೇಶ್ ಸೇರಿದಂತೆ ಪ್ರಮುಖ ಕಲಾವಿದರು ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಸ್ಟಾರ್ ನಟರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸುವ ಕುರಿತು ಸಿಡಿದೆದ್ದಿರುವ ನಿರ್ಮಾಪಕರ ಪರ ಕಲಾವಿದರ ನಿಲುವೇನು ಅನ್ನೋದು ಇಂದು ನಡೆಯುವ ಸಭೆಯಲ್ಲಿ ನಿರ್ಣಯವಾಗಲಿದೆ. [ನಿರ್ಮಾಪಕರು ರೊಚ್ಚಿಗೇಳುವುದಕ್ಕೆ 'ಇವರುಗಳೇ' ಕಾರಣ.!]
ನಿರ್ಮಾಪಕರ ಸಂಕಷ್ಟಕ್ಕೆ ಕಲಾವಿದರು ಸ್ಪಂದಿಸುವುದಿಲ್ಲ ಅಂತ ಬೀದಿಗೆ ಬಂದಿರುವ ನಿರ್ಮಾಪಕರಿಗೆ ಒಳಿತಾಗಲಿ ಅಂತ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಷ್ ಮನಸ್ಸು ಮಾಡಿ ಸಭೆ ಕರೆದಿದ್ದಾರೆ. ಅವರ ನಿರ್ಧಾರದ ಮೇಲೆ ಈಗೆಲ್ಲಾ ನಿರ್ಮಾಪಕರ ಕಣ್ಣಿದೆ. (ಫಿಲ್ಮಿಬೀಟ್ ಕನ್ನಡ)