Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಣಂ' ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ, ಇಬ್ಬರು ಸಾವು?
ಚಿರಂಜೀವಿ ಸರ್ಜಾ ಮತ್ತು ಆ ದಿನಗಳು ಚೇತನ್ ಅಭಿನಯಿಸುತ್ತಿರುವ ರಣಂ ಸಿನಿಮಾ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟವಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ಮಾಡುವ ವೇಳೆ ಸ್ಫೋಟ ಆಗಿದೆ ಎನ್ನಲಾಗಿದೆ.
ಈ ದುರ್ಘಟನೆಯಲ್ಲಿ ಸುಮೈರಾ (28) ಎಂಬ ಮಹಿಳೆ ಮತ್ತು ಆಯಿತಾ (8) ಎಂಬ ಮಗು ಸಾವನ್ನಪಿದ್ದಾರೆ. ಇನ್ನೊಂದು ಮಗುವನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟಕ್ಕೆ ಸ್ಥಳದಲ್ಲೇ ದೇಹಗಳು ಛಿದ್ರ ಛಿದ್ರವಾಗಿದೆ ಎಂದು ಸ್ಥಳಿಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಕಳೆದ ಮೂರು ದಿನದಿಂದ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ವಿಜಯನ್ ಎಂಬ ಸಾಹಸ ನಿರ್ದೇಶಕ ಕೆಲಸ ಮಾಡುತ್ತಿದ್ದರಂತೆ. ಶೆಲ್ ಕಂಪನಿ ಬಳಿ ಕಾರ್ ಬ್ಲಾಸ್ಟ್ ಮಾಡುವ ದೃಶ್ಯದ ಚಿತ್ರೀಕರಣ ಆಗಬೇಕಿತ್ತಂತೆ. ಬಾಗಲೂರಿನಿಂದ ಸೂಲಿಬೆಲೆಗೆ ಹೋಗುತ್ತಿದ್ದ ಸಂಧರ್ಭದಲ್ಲಿ ಚಿತ್ರೀಕರಣ ನಡೆಯುತ್ತಿದ್ದನ್ನ ಗಮನಿಸಿ ಆ ತಾಯಿ ಮತ್ತು ಮಕ್ಕಳು ಶೂಟಿಂಗ್ ನೋಡಲು ನಿಂತರು. ಅದೇ ವೇಳೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ.
ಈ ಸ್ಫೋಟ ಸಂಭವಿಸದಾಗ ನಟ ಚೇತನ್ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ವಿಷ್ಯ ತಿಳಿದ ಕೂಡಲೇ ಚೇತನ್ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರಂತೆ. ಚಿರಂಜೀವಿ ಸರ್ಜಾ ಅವರು ಭಾಗದ ಶೂಟಿಂಗ್ ಮುಗಿದು ಹೋಗಿದ್ದು, ಇಂದಿನ ಚಿತ್ರೀಕರಣದ ಬಗ್ಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಕನಕಪುರ ಶ್ರೀನಿವಾಸ್ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದು, ವಿ ಸಮುದ್ರ ನಿರ್ದೇಶನ ಮಾಡುತ್ತಿದ್ದಾರೆ.
ಸಿನಿಮಾ ಚಿತ್ರೀಕರಣದ ಸಂದರ್ಭಗಳಲ್ಲಿ ಈ ರೀತಿ ದುರ್ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ನವೆಂಬರ್ 8, 2016ರಲ್ಲಿ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಚಿತ್ರೀಕರಣ ನಡೆಯಬೇಕಾದರೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.