'ರಣಂ' ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟ, ಇಬ್ಬರು ಸಾವು?
ಚಿರಂಜೀವಿ ಸರ್ಜಾ ಮತ್ತು ಆ ದಿನಗಳು ಚೇತನ್ ಅಭಿನಯಿಸುತ್ತಿರುವ ರಣಂ ಸಿನಿಮಾ ಚಿತ್ರೀಕರಣದ ವೇಳೆ ಸಿಲಿಂಡರ್ ಸ್ಫೋಟವಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ಮಾಡುವ ವೇಳೆ ಸ್ಫೋಟ ಆಗಿದೆ ಎನ್ನಲಾಗಿದೆ.
ಈ ದುರ್ಘಟನೆಯಲ್ಲಿ ಸುಮೈರಾ (28) ಎಂಬ ಮಹಿಳೆ ಮತ್ತು ಆಯಿತಾ (8) ಎಂಬ ಮಗು ಸಾವನ್ನಪಿದ್ದಾರೆ. ಇನ್ನೊಂದು ಮಗುವನ್ನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟಕ್ಕೆ ಸ್ಥಳದಲ್ಲೇ ದೇಹಗಳು ಛಿದ್ರ ಛಿದ್ರವಾಗಿದೆ ಎಂದು ಸ್ಥಳಿಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಳೆದ ಮೂರು ದಿನದಿಂದ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ವಿಜಯನ್ ಎಂಬ ಸಾಹಸ ನಿರ್ದೇಶಕ ಕೆಲಸ ಮಾಡುತ್ತಿದ್ದರಂತೆ. ಶೆಲ್ ಕಂಪನಿ ಬಳಿ ಕಾರ್ ಬ್ಲಾಸ್ಟ್ ಮಾಡುವ ದೃಶ್ಯದ ಚಿತ್ರೀಕರಣ ಆಗಬೇಕಿತ್ತಂತೆ. ಬಾಗಲೂರಿನಿಂದ ಸೂಲಿಬೆಲೆಗೆ ಹೋಗುತ್ತಿದ್ದ ಸಂಧರ್ಭದಲ್ಲಿ ಚಿತ್ರೀಕರಣ ನಡೆಯುತ್ತಿದ್ದನ್ನ ಗಮನಿಸಿ ಆ ತಾಯಿ ಮತ್ತು ಮಕ್ಕಳು ಶೂಟಿಂಗ್ ನೋಡಲು ನಿಂತರು. ಅದೇ ವೇಳೆಯಲ್ಲಿ ಸಿಲಿಂಡರ್ ಸ್ಫೋಟವಾಗಿದೆ.
ಈ ಸ್ಫೋಟ ಸಂಭವಿಸದಾಗ ನಟ ಚೇತನ್ ಇರಲಿಲ್ಲ ಎಂದು ತಿಳಿದು ಬಂದಿದೆ. ಈ ವಿಷ್ಯ ತಿಳಿದ ಕೂಡಲೇ ಚೇತನ್ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರಂತೆ. ಚಿರಂಜೀವಿ ಸರ್ಜಾ ಅವರು ಭಾಗದ ಶೂಟಿಂಗ್ ಮುಗಿದು ಹೋಗಿದ್ದು, ಇಂದಿನ ಚಿತ್ರೀಕರಣದ ಬಗ್ಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಕನಕಪುರ ಶ್ರೀನಿವಾಸ್ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದು, ವಿ ಸಮುದ್ರ ನಿರ್ದೇಶನ ಮಾಡುತ್ತಿದ್ದಾರೆ.
ಸಿನಿಮಾ ಚಿತ್ರೀಕರಣದ ಸಂದರ್ಭಗಳಲ್ಲಿ ಈ ರೀತಿ ದುರ್ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ನವೆಂಬರ್ 8, 2016ರಲ್ಲಿ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಖಳನಟರಾದ ಅನಿಲ್ ಮತ್ತು ಉದಯ್ ಚಿತ್ರೀಕರಣ ನಡೆಯಬೇಕಾದರೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.


Click it and Unblock the Notifications











