Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಬ್ಬಳ್ಳಿಯಲ್ಲಿ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು, ಪೊಲೀಸರಿಂದ ಲಾಠಿಚಾರ್ಜ್
ಭಾನುವಾರ ಸಂಜೆ 6 ಗಂಟೆಗೆ ಹುಬ್ಬಳ್ಳಿಯಲ್ಲಿ ರಾಬರ್ಟ್ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ (ಪ್ರಿ-ರಿಲೀಸ್ ಕಾರ್ಯಕ್ರಮ) ಆಯೋಜನೆಯಾಗಿದ್ದು, ಈ ಹಿನ್ನೆಲೆ ನಟ ದರ್ಶನ್ ಶನಿವಾರ ರಾತ್ರಿ ಗಂಡುಮೆಟ್ಟಿದ ನಾಡಿಗೆ ಬಂದಿಳಿದಿದ್ದಾರೆ.
ನಗರದ ಖಾಸಗಿ ಹೋಟೆಲ್ವೊಂದರಲ್ಲಿ ನಟ ದರ್ಶನ್ ರಾತ್ರಿ ಉಳಿದುಕೊಳ್ಳಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಡಿ ಫ್ಯಾನ್ಸ್ ಹೋಟೆಲ್ ಬಳಿ ಜಮಾಯಿಸಿದರು.
ಡಿ ಬಾಸ್ ಆಗಮನಕ್ಕೆ ಸಜ್ಜಾದ ಹುಬ್ಬಳ್ಳಿ; 'ರಾಬರ್ಟ್' ಕಾರ್ಯಕ್ರಮದ ತಯಾರಿ ಹೇಗಿದೆ?
ಶನಿವಾರ ಸುಮಾರು 11.30 ಗಂಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸೇರಿದಂತೆ ರಾಬರ್ಟ್ ತಂಡ ಹುಬ್ಬಳ್ಳಿಗೆ ಬಂದು ತಲುಪಿದೆ. ಹೋಟೆಲ್ ಬಳಿ ಡಿ ಬಾಸ್ ಕಾರು ಬರುತ್ತಿದ್ದಂತೆ ಕಾರು ಸುತ್ತುವರಿದ ಅಭಿಮಾನಿಗಳು ಕಾರಿನ ಮೇಲೆ ಹೂವು ಎಸೆದು ಸ್ವಾಗತಿಸಿದರು.
ಹೋಟಲ್ ಗೇಟ್ನಿಂದ ಬಾಗಿಲವರೆಗೂ ದರ್ಶನ್ ಕಾರು ಹಿಂಬಾಲಿಸಿದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ದರ್ಶನ್ ಅವರನ್ನು ಕಾರಿನಿಂದ ಇಳಿಯಲು ಸಹ ಸಾಧ್ಯವಾಗದ ರೀತಿ ಫ್ಯಾನ್ಸ್ ಸೇರಿದ್ದರು. ಕೊನೆಯದಾಗಿ ಅಭಿಮಾನಿಗಳು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಬೇಕಾಯಿತು.
ದರ್ಶನ್ ದೊಡ್ಡತನದ ಬಗ್ಗೆ ಉದಾಹರಣೆ ಕೊಟ್ಟ ನಟ ಜಗಪತಿ ಬಾಬು
ಬಳಿಕ ಕಾರಿನಿಂದ ಕೆಳಗೆ ಇಳಿದ ದರ್ಶನ್ ಅಭಿಮಾನಿಗಳನ್ನು ಒಡೆಯದಂತೆ ಪೊಲೀಸರಿಗೆ ಕೇಳಿಕೊಂಡಿದ್ದು ಕಂಡು ಬಂತು. ಇದಕ್ಕೂ ಮುಂಚೆ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರಿನಲ್ಲಿ ಡಿ ಬಾಸ್ ಬಂದರು. ಈ ಹಿನ್ನೆಲೆ ಹೆದ್ದಾರಿಯುದ್ದಕ್ಕೂ ದರ್ಶನ್ ಅಭಿಮಾನಿಗಳು ನಿಂತು ಸ್ವಾಗತಿಸಿದರು.
Recommended Video
ಹುಬ್ಬಳ್ಳಿಯ ದೇಸಾಯಿ ಸರ್ಕಲ್ ಕೇಶ್ವಾಪುರ ರೋಡ್ ನ ರೈಲ್ವೆ ಮೈದಾನದಲ್ಲಿ ಸಂಜೆ 6 ಗಂಟೆಗೆ ರಾಬರ್ಟ್ ಕಾರ್ಯಕ್ರಮ ಆರಂಭವಾಗಲಿದೆ. ಹಿರಿಯ ನಟ ದೇವರಾಜ್, ತೆಲುಗು ನಟ ಜಗಪತಿ ಬಾಬು, ಚಿಕ್ಕಣ್ಣ, ನಟಿ ಆಶಾ ಭಟ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.