Don't Miss!
- Automobiles 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- News India Weather: ಮುಂದಿನ ಮೂರು ದಿನ ದೇಶದ ಈ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ, ಎಲ್ಲಿಲ್ಲಿ?-ಮಾಹಿತಿ
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಬ್ಬಳ್ಳಿಯಲ್ಲಿ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು, ಪೊಲೀಸರಿಂದ ಲಾಠಿಚಾರ್ಜ್
ಭಾನುವಾರ ಸಂಜೆ 6 ಗಂಟೆಗೆ ಹುಬ್ಬಳ್ಳಿಯಲ್ಲಿ ರಾಬರ್ಟ್ ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ (ಪ್ರಿ-ರಿಲೀಸ್ ಕಾರ್ಯಕ್ರಮ) ಆಯೋಜನೆಯಾಗಿದ್ದು, ಈ ಹಿನ್ನೆಲೆ ನಟ ದರ್ಶನ್ ಶನಿವಾರ ರಾತ್ರಿ ಗಂಡುಮೆಟ್ಟಿದ ನಾಡಿಗೆ ಬಂದಿಳಿದಿದ್ದಾರೆ.
ನಗರದ ಖಾಸಗಿ ಹೋಟೆಲ್ವೊಂದರಲ್ಲಿ ನಟ ದರ್ಶನ್ ರಾತ್ರಿ ಉಳಿದುಕೊಳ್ಳಲಿದ್ದಾರೆ ಎಂದು ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಡಿ ಫ್ಯಾನ್ಸ್ ಹೋಟೆಲ್ ಬಳಿ ಜಮಾಯಿಸಿದರು.
ಡಿ ಬಾಸ್ ಆಗಮನಕ್ಕೆ ಸಜ್ಜಾದ ಹುಬ್ಬಳ್ಳಿ; 'ರಾಬರ್ಟ್' ಕಾರ್ಯಕ್ರಮದ ತಯಾರಿ ಹೇಗಿದೆ?
ಶನಿವಾರ ಸುಮಾರು 11.30 ಗಂಟೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸೇರಿದಂತೆ ರಾಬರ್ಟ್ ತಂಡ ಹುಬ್ಬಳ್ಳಿಗೆ ಬಂದು ತಲುಪಿದೆ. ಹೋಟೆಲ್ ಬಳಿ ಡಿ ಬಾಸ್ ಕಾರು ಬರುತ್ತಿದ್ದಂತೆ ಕಾರು ಸುತ್ತುವರಿದ ಅಭಿಮಾನಿಗಳು ಕಾರಿನ ಮೇಲೆ ಹೂವು ಎಸೆದು ಸ್ವಾಗತಿಸಿದರು.
ಹೋಟಲ್ ಗೇಟ್ನಿಂದ ಬಾಗಿಲವರೆಗೂ ದರ್ಶನ್ ಕಾರು ಹಿಂಬಾಲಿಸಿದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ದರ್ಶನ್ ಅವರನ್ನು ಕಾರಿನಿಂದ ಇಳಿಯಲು ಸಹ ಸಾಧ್ಯವಾಗದ ರೀತಿ ಫ್ಯಾನ್ಸ್ ಸೇರಿದ್ದರು. ಕೊನೆಯದಾಗಿ ಅಭಿಮಾನಿಗಳು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಬೇಕಾಯಿತು.
ದರ್ಶನ್ ದೊಡ್ಡತನದ ಬಗ್ಗೆ ಉದಾಹರಣೆ ಕೊಟ್ಟ ನಟ ಜಗಪತಿ ಬಾಬು
ಬಳಿಕ ಕಾರಿನಿಂದ ಕೆಳಗೆ ಇಳಿದ ದರ್ಶನ್ ಅಭಿಮಾನಿಗಳನ್ನು ಒಡೆಯದಂತೆ ಪೊಲೀಸರಿಗೆ ಕೇಳಿಕೊಂಡಿದ್ದು ಕಂಡು ಬಂತು. ಇದಕ್ಕೂ ಮುಂಚೆ ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಕಾರಿನಲ್ಲಿ ಡಿ ಬಾಸ್ ಬಂದರು. ಈ ಹಿನ್ನೆಲೆ ಹೆದ್ದಾರಿಯುದ್ದಕ್ಕೂ ದರ್ಶನ್ ಅಭಿಮಾನಿಗಳು ನಿಂತು ಸ್ವಾಗತಿಸಿದರು.
Recommended Video
ಹುಬ್ಬಳ್ಳಿಯ ದೇಸಾಯಿ ಸರ್ಕಲ್ ಕೇಶ್ವಾಪುರ ರೋಡ್ ನ ರೈಲ್ವೆ ಮೈದಾನದಲ್ಲಿ ಸಂಜೆ 6 ಗಂಟೆಗೆ ರಾಬರ್ಟ್ ಕಾರ್ಯಕ್ರಮ ಆರಂಭವಾಗಲಿದೆ. ಹಿರಿಯ ನಟ ದೇವರಾಜ್, ತೆಲುಗು ನಟ ಜಗಪತಿ ಬಾಬು, ಚಿಕ್ಕಣ್ಣ, ನಟಿ ಆಶಾ ಭಟ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.