Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಅಂತ್ಯಕ್ರಿಯೆಗೆ ಗೈರು : ಡಿಕೆಶಿ ಬಳಿ ಕಾರಣ ಹೇಳಿಕೊಂಡಿದ್ದ ರಮ್ಯಾ
ಕರುನಾಡ ಜನ ತಮ್ಮ ಪ್ರೀತಿಯ ನಾಯಕನನ್ನ ಕಳೆದುಕೊಂಡ ನೋವಿನಲ್ಲಿ ಇದ್ದಾರೆ. ಬೇಸರ, ಕಣ್ಣೀರು, ದುಃಖದ ನಡುವೆ ಅಭಿಮಾನಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸದ್ಯ, ಅಂಬರೀಶ್ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣ ಆಗಿರುವುದು ನಟಿ ರಮ್ಯಾ. ಅಂಬರೀಶ್ ಅವರ ಅಂತಿಮ ದರ್ಶನ ಪಡೆಯದ ರಮ್ಯಾ ವಿರುದ್ಧ ಅಭಿಮಾನಿಗಳು ಕೋಪಗೊಂಡಿದ್ದಾರೆ. ಮಂಡ್ಯ ಪಾಲಿಗೆ ರಮ್ಯಾ ಸತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.
ಅಂಬರೀಶ್ ಅಂತ್ಯಕ್ರಿಯೆ: ರಮ್ಯಾಗೆ ನಾನೇ ಕಾಲ್ ಮಾಡಿ ಕರೆದಿದ್ದೆ ಎಂದ ಡಿಕೆಶಿ
ಇದಕ್ಕೆ ಉತ್ತರವಾಗಿ ರಮ್ಯಾ ಅಭಿಮಾನಿಗಳು ರಮ್ಯಾ ಗೈರಿನ ಬಗ್ಗೆ ಕಾರಣ ನೀಡಿದ್ದರು. ಆದರೆ, ಈಗ ಸಚಿವ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿದ್ದಾರೆ. ಮುಂದೆ ಓದಿ...
ಡಿಕೆಶಿ ನೀಡಿದ ಪ್ರತಿಕ್ರಿಯೆ
''ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಕಾಲು ಮೂಳೆಯ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ನಡೆದಾಡದಂತಹ ಸ್ಥಿತಿಯಲ್ಲಿದ್ದಾರೆ ಹೀಗಾಗಿ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ'' ಎಂದು ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲು ನೋವು ಇರುವ ಕಾರಣ
''ರಮ್ಯಾ ಅವರಿಗೆ ನಾನೇ ಖುದ್ದಾಗಿ ದೂರವಾಣಿ ಕರೆ ಮಾಡಿದ್ದೆ, ನನಗೆ ಬರಲು ಆಗುವುದಿಲ್ಲ ಎಂದು ಅವರೇ ತಿಳಿಸಿದ್ದರು. ಕಳೆದ ಕೆಲವು ದಿನಗಳ ಹಿಂದೆ ರಮ್ಯಾ ಅವರು ಕಾಲು ಮುರಿದುಕೊಂಡಿದ್ದು ನಡೆದಾಡದಂತಹ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಬರಲು ಆಗಿಲಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.
ಅಂಬಿಯನ್ನ ಮರೆತ ರಮ್ಯಾಗೆ ತಕ್ಕ ಉತ್ತರ ನೀಡಿದ ಜಗ್ಗೇಶ್!
ವೈದ್ಯರ ಸಲಹೆ ಪಾಲಿಸಿದ್ದಾರೆ
''ರಮ್ಯಾ ಅವರು ವೈದ್ಯರ ಸಲಹೆ ಮೇರೆಗೆ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಚಿಕಿತ್ಸೆಯ ನಂತರ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಈ ವಿಚಾರದಲ್ಲಿ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಸಚಿವ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಅಂಬಿ ದರ್ಶನಕ್ಕೆ ರಮ್ಯಾ ಬರ್ಲಿಲ್ಲ: ಕಾರಣ ವಿಚಿತ್ರ ಕಾಯಿಲೆ.! ಏನದು.?
ರಮ್ಯಾ ಅಭಿಮಾನಿಗಳು ನೀಡಿರುವ ಕಾರಣ
ರಮ್ಯಾ ಅವರು ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ಬಳಲುತ್ತಿದ್ದು, ಈ ಕಾರಣದಿಂದಲೇ ಅಂಬರೀಶ್ ಅವರ ಅಂತಿಮ ದರ್ಶನದಲ್ಲಿ ಪಾಲ್ಗೊಂಡಿಲ್ಲ ಎಂದು ಖಾಸಗಿ ವಾಹಿನಿಯೊಂದರ ವರದಿ ಆಧರಿಸಿ ದಿವ್ಯ ಸ್ಪಂದನ/ರಮ್ಯಾ ಅಭಿಮಾನಿಗಳ ಕ್ಲಬ್ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಲಾಗಿತ್ತು.
ರಮ್ಯಾಗೆ ಮಾತ್ರವಲ್ಲ ಶ್ರುತಿಗೂ ಪ್ರಶ್ನೆ ಮಾಡಿದ ಅಂಬಿ ಫ್ಯಾನ್ಸ್
|
ರಮ್ಯಾ ಬಗ್ಗೆ ಜಗ್ಗೇಶ್ ಟ್ವೀಟ್
ಅಂಬಿ ಅಂತ್ಯಕ್ರಿಯೆ ರಮ್ಯಾ ಬರದೇ ಇರುವ ಬಗ್ಗೆ ಜಗ್ಗೇಶ್ ಕೂಡ ಟ್ವೀಟ್ ಮಾಡಿದ್ದಾರೆ. ''ಸಾವಿನಲ್ಲಿ ಗೌರವಿಸದವರು ಮನುರೂಪದ ರಾಕ್ಷಸ ಗುಣದವರು..! ಕ್ರೂರತ್ವದ ಮಗ್ಗಲು ಪ್ರಕಟಿಸಿದ ಮಹನೀಯರು.! ದೇವನೊಬ್ಬ ಇರುವ ಅವ ಎಲ್ಲ ನೋಡುತಿರುವ! ದೋಸೆ ಮೊಗಚಿ ತಳಸೀಯುತ್ತದೆ ತಪ್ಪದೆ ಒಂದು ದಿನ! ಯತಃಮನಃತಥಃಜೀವನ!'' ಎಂದು ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.