Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
21 ಗಂಟೆಯೊಳಗೆ ಕಾಣೆಯಾದ ಹುಡುಗಿ ಹುಡುಕುತ್ತಾರಾ ಡಾಲಿ ಧನಂಜಯ್?
ಸ್ಯಾಂಡಲ್ವುಡ್ನಲ್ಲಿ ಬ್ಯುಸಿ ಇರುವ ನಟರಲ್ಲಿ ಡಾಲಿ ಧನಂಜಯ್ ಕೂಡ ಒಬ್ಬರು. ಪ್ಯಾನ್ ಇಂಡಿಯಾ ಸಿನಿಮಾ 'ಪುಷ್ಪ' ಬಳಿಕವಂತೂ ಡಾಲಿ ಭಯಂಕರ ಬ್ಯುಸಿಯಾಗಿದ್ದಾರೆ. ಇನ್ನು ಅವರೇ ನಿರ್ಮಿಸಿ, ನಟಿಸಿದ್ದ 'ಬಡವ ರಾಸ್ಕಲ್' ಬಾಕ್ಸಾಫೀಸ್ನಲ್ಲಿ ಬೇಜಾನ್ ಸದ್ದು ಮಾಡಿತ್ತು. ಅದಕ್ಕೆ ಈಗ ಸದ್ದಿಲ್ಲದೆ ಸಿನಿಮಾವೊಂದರಲ್ಲಿ ನಟಿಸಿ ಮುಗಿಸಿದ್ದಾರೆ.
ಹೌದು.. ಧನಂಜಯ್ 'ಟ್ವೆಂಟಿ ಒನ್ ಅವರ್ಸ್' ಎಂಬ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅದ್ಯಾವಾಗ ಶುರು ಮಾಡಿದರು? ಅದ್ಯಾವಾಗ ಮುಗಿಸಿದರೋ ಗೊತ್ತಿಲ್ಲ. "ಟ್ವೆಂಟಿ ಒನ್ ಅವರ್ಸ್" ಎಂಬ ಸಿನಿಮಾ ಮುಗಿದಿದ್ದು ಬಿಡುಗಡೆಗೆ ಸಜ್ಜಾಗಿದೆ. ಜೈಶಂಕರ್ ಪಂಡಿತ್ ನಿರ್ದೇಶಿಸಿದ್ದು, ಈ ಚಿತ್ರ ಇದೇ ತಿಂಗಳ 20ಕ್ಕೆ ರಿಲೀಸ್ ಕೂಡ ಆಗುತ್ತೆ.
'ಹೆಡ್ ಬುಷ್' ಸಿನಿಮಾ ವಿರುದ್ಧ ತಿರುಗಿಬಿದ್ದ ಜಯರಾಜ್ ಪುತ್ರ: ಫಿಲ್ಮ್ ಚೇಂಬರ್ಗೆ ದೂರು
'ಟ್ವೆಂಟಿ ಒನ್ ಅವರ್ಸ್' ಬಗ್ಗೆ ಏನಂತಾರೆ ಡಾಲಿ?
ಧನಂಜಯ್ ಪಕ್ಕಾ ಸಸ್ಪೆನ್ಸ್ ಸಿನಿಮಾ ಮಾಡಿ ಮುಗಿಸಿದ್ದಾರೆ. ಇದೇ ವೇಳೆ ಸಿನಿಮಾ ಬಗ್ಗೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ನಿನ್ನೆ ಈ ಸಿನಿಮಾ ಬಗ್ಗೆ ಪೋಸ್ಟ್ ಹಾಕಿದಾಗ, ಗೆಳೆಯರು ಯಾವ ಗ್ಯಾಪ್ ನಲ್ಲಿ ಈ ಸಿನಿಮಾ ಮಾಡಿದ್ರಿ ಅಂತ ಕೇಳಿದರು. ಮೊದಲ ಲಾಕ್ಡೌನ್ ಆದ ಬಳಿಕ ಮಾಡಿದ ಸಿನಿಮಾವಿದು." ಎಂದು ಸೀಕ್ರೆಟ್ ರಿವೀಲ್ ಮಾಡಿದ್ದಾರೆ.
"ಮಲೆಯಾಳಿ ಹುಡುಗಿಯೊಬ್ಬಳು ಬೆಂಗಳೂರಿನಲ್ಲಿ ಕಾಣೆಯಾಗುತ್ತಾಳೆ. ಆಕೆಯ ಹುಡುಕಾಟದ ಸುತ್ತ ನಡೆಯುವ ಕಥೆಯಿದು. ನಾನು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತೇನೆ. ಕರ್ನಾಟಕ ಹಾಗೂ ಕೇರಳದಲ್ಲಿ ನಡೆಯುವ ಕಥೆಯಾಗಿದ್ದರಿಂದ ಸಂಭಾಷಣೆ ಎರಡೂ ಭಾಷೆಯಲ್ಲೂ ಇರುತ್ತೆ. ಮೊದಲ ಕರ್ನಾಟಕದಲ್ಲಿ ರಿಲೀಸ್ ಆಗುತ್ತೆ. ಆಮೇಲೆ ಕೇರಳದಲ್ಲಿ ರಿಲೀಸ್ ಆಗುತ್ತೆ. ಆದರೆ ಕರ್ನಾಟಕದಲ್ಲಿ ಇಡೀ ಸಿನಿಮಾ ಕನ್ನಡದಲ್ಲಿಯೇ ಸಂಭಾಷಣೆ ಇರುತ್ತೆ." ಎನ್ನುತ್ತಾರೆ ಧನಂಜಯ್.
ಅಮಿತಾಬ್ ಬಚ್ಚನ್, ಐಶ್ವರ್ಯಾ ರೈಗೆ ನಿರ್ದೇಶನ
ಈ ಸಿನಿಮಾದ ನಿರ್ದೇಶಕ ಜೈ ಶಂಕರ್ ಜಾಹೀರಾತುಗಳಿಗೆ ನಿರ್ದೇಶನ ಮಾಡಿದ್ದಾರೆ. ಬಾಲಿವುಡ್ ನಟರಿಂದ ಹಿಡಿದೆ ಅನೇಕ ಗಣ್ಯರಿಗೆ ನಿರ್ದೇಶನ ಮಾಡಿದ್ದಾರೆ. " ನಾನು ಮೂಲತಃ ಕರ್ನಾಟದವನು. ಆದರೆ ಕೇರಳದಲ್ಲಿದ್ದೀನಿ. ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಸೇರಿದಂತೆ ಖ್ಯಾತ ನಟರು ಅಭಿನಯಿಸಿರುವ ಜಾಹೀರಾತುಗಳನ್ನು ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಇಪ್ಪತ್ತೊಂದು ಗಂಟೆಗಳಲ್ಲಿ ನಡೆಯುವ ವಿಶೇಷ ಕಥೆಯಿದು." ಎನ್ನುತ್ತಾರೆ ಧನಂಜಯ್.
ಕಿಚ್ಚನ ಅಡುಗೆ ಸವಿದ ಧನಂಜಯ್, ನಂದಕಿಶೋರ್, ವಾಸುಕಿ ವೈಭವ್: ಸ್ಪೆಷಲ್ ಏನು?
ಇನ್ನು ಧನಂಜಯ್ ಜೊತೆ 'ಓಲ್ಡ್ ಮಾಂಕ್' ಸಿನಿಮಾದಲ್ಲಿ ನಟಿಸಿದ್ದ ನಟ ಸುದೇವ್ ನಾಯರ್, ಹಾಗೂ ಟಿ.ಎನ್.ಸೀತಾರಾಮ್ ನಿರ್ದೇಶಿಸಿದ್ದ 'ಕಾಫಿತೋಟ'ದಲ್ಲಿ ಅಭಿನಯಿಸಿದ್ದ ರಾಹುಲ್ ಮಾಧವ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶಿವಣ್ಣ ಫ್ಯಾನ್ಸ್ ಆಕ್ರೋಶದ ಬಳಿಕ 'ಡಾಲಿ' ಧನಂಜಯ್ ಹೇಳಿದ್ದೇನು.?
ಬಾಲಕೃಷ್ಣ ಹಾಗೂ ಎನ್.ಎಸ್, ಅಭಿಷೇಕ್, ರುದ್ರಮೂರ್ತಿ, ಸುನೀಲ್ ಗೌಡ, ಹಾಗೂ ಪ್ರವೀಣ್ ಮಹದೇವ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ರುಪರ್ಟ್ ಫರ್ನಾಂಡಿಸ್ ಸಂಗೀತ ನೀಡಿದ್ರೆ, ತಿರುನವುಕ್ಕರಸು ಛಾಯಾಗ್ರಹಣ, ರಿಚರ್ಡ್ ಕೆವಿನ್ ಎಡಿಟಿಂಗ್ ಮಾಡಿದ್ದಾರೆ. ಬಹಳ ದಿನಗಳ ಬಳಿಕ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ.