Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಗಾಂಧಿನಗರದ ಚಿತ್ರಮಂದಿರದಲ್ಲಿ 'ದಾರಿ ತಪ್ಪಿದ ಮಗ'
'ಟಗರು' ಸಿನಿಮಾ ಹೊರತು ಪಡಿಸಿ ಕನ್ನಡದಲ್ಲಿ ಈಗ ಬರುತ್ತಿರುವ ಯಾವ ಸಿನಿಮಾವೂ ಹೆಚ್ಚು ಕಾಲ ಚಿತ್ರಮಂದಿರದಲ್ಲಿ ನಿಲ್ಲುತ್ತಿಲ್ಲ. ಒಂದು ವಾರಕ್ಕೆ ಎಲ್ಲ ಸಿನಿಮಾಗಳು ಸುಸ್ತಾಗುತ್ತಿವೆ. ಅದೇ ರೀತಿ ಕಳೆದ ವಾರ ಬಿಡುಗಡೆಯಾಗಿದ್ದ 'ಕಿಚ್ಚು' ಸಿನಿಮಾ ಒಂದೇ ವಾರಕ್ಕೆ ತ್ರಿವೇಣಿ ಚಿತ್ರಮಂದಿರದಿಂದ ಆಚೆ ಬಂದಿದೆ. ವಿಶೇಷ ಅಂದರೆ ಆ ಜಾಗಕ್ಕೆ 'ದಾರಿ ತಪ್ಪಿದ ಮಗ' ಆಗಮನ ಆಗಿದೆ.
ಡಾ.ರಾಜ್ ಕುಮಾರ್ ಅವರ ಸೂಪರ್ ಹಿಟ್ ಸಿನಿಮಾಗಳ ಪಟ್ಟಿಯಲ್ಲಿ 'ದಾರಿ ತಪ್ಪಿದ ಮಗ' ಕೂಡ ಒಂದು. 1975 ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಆಗ 25 ವಾರಗಳ ಕಾಲ ಅಮೋಘ ಪ್ರದರ್ಶನ ಕಂಡಿತ್ತು. ಈಗಾಗಲೇ ಅನೇಕ ಬಾರಿ ಮರು ಬಿಡುಗಡೆಯಾಗಿರುವ ಈ ಸಿನಿಮಾ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ರಿ ರಿಲೀಸ್ ಆಗಿತ್ತು.
ಡಾ.ರಾಜ್ ಬಗ್ಗೆ ಗೊತ್ತಿರಬೇಕಾದ ವಿಚಾರ: ನೀವು ತಿಳಿಯಿರಿ, ಬೇರೆಯವರಿಗೂ ಹೇಳಿರಿ
ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರದಲ್ಲಿ 'ದಾರಿ ತಪ್ಪಿದ ಮಗ' ಸಿನಿಮಾ ಬಂದಿದೆ. ಬೆಂಗಳೂರಿನ ಗಾಂಧಿನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ನಾಳೆಯಿಂದ ಚಿತ್ರದ ಪ್ರದರ್ಶನ ಶುರು ಆಗಲಿದೆ. ಪ್ರತಿ ದಿನ ನಾಲ್ಕು ಪ್ರದರ್ಶನಗಳು ನಡೆಯಲಿದೆ.
ಅಂದಹಾಗೆ, 'ದಾರಿ ತಪ್ಪಿದ ಮಗ' ಸಿನಿಮಾದಲ್ಲಿ ರಾಜ್ ಕುಮಾರ್ ಜೊತೆಗೆ ಕಲ್ಪನಾ, ಆರತಿ, ಮಂಜುಳಾ ಹಾಗೂ ಜಯಮಾಲ ನಟಿಸಿದ್ದರು. ಪ್ರಶಾಂತ್ ಮತ್ತು ಪ್ರಕಾಶ್ ಎಂಬ ದ್ವಿಪಾತ್ರದಲ್ಲಿ ರಾಜ್ ಮಿಂಚಿದ್ದರು. ಪಿಕೆಟಿ ಶಿವರಾಂ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿತ್ತು.