Don't Miss!
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಗಾಂಧಿನಗರದ ಚಿತ್ರಮಂದಿರದಲ್ಲಿ 'ದಾರಿ ತಪ್ಪಿದ ಮಗ'
'ಟಗರು' ಸಿನಿಮಾ ಹೊರತು ಪಡಿಸಿ ಕನ್ನಡದಲ್ಲಿ ಈಗ ಬರುತ್ತಿರುವ ಯಾವ ಸಿನಿಮಾವೂ ಹೆಚ್ಚು ಕಾಲ ಚಿತ್ರಮಂದಿರದಲ್ಲಿ ನಿಲ್ಲುತ್ತಿಲ್ಲ. ಒಂದು ವಾರಕ್ಕೆ ಎಲ್ಲ ಸಿನಿಮಾಗಳು ಸುಸ್ತಾಗುತ್ತಿವೆ. ಅದೇ ರೀತಿ ಕಳೆದ ವಾರ ಬಿಡುಗಡೆಯಾಗಿದ್ದ 'ಕಿಚ್ಚು' ಸಿನಿಮಾ ಒಂದೇ ವಾರಕ್ಕೆ ತ್ರಿವೇಣಿ ಚಿತ್ರಮಂದಿರದಿಂದ ಆಚೆ ಬಂದಿದೆ. ವಿಶೇಷ ಅಂದರೆ ಆ ಜಾಗಕ್ಕೆ 'ದಾರಿ ತಪ್ಪಿದ ಮಗ' ಆಗಮನ ಆಗಿದೆ.
ಡಾ.ರಾಜ್ ಕುಮಾರ್ ಅವರ ಸೂಪರ್ ಹಿಟ್ ಸಿನಿಮಾಗಳ ಪಟ್ಟಿಯಲ್ಲಿ 'ದಾರಿ ತಪ್ಪಿದ ಮಗ' ಕೂಡ ಒಂದು. 1975 ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾ ಆಗ 25 ವಾರಗಳ ಕಾಲ ಅಮೋಘ ಪ್ರದರ್ಶನ ಕಂಡಿತ್ತು. ಈಗಾಗಲೇ ಅನೇಕ ಬಾರಿ ಮರು ಬಿಡುಗಡೆಯಾಗಿರುವ ಈ ಸಿನಿಮಾ ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ರಿ ರಿಲೀಸ್ ಆಗಿತ್ತು.
ಡಾ.ರಾಜ್ ಬಗ್ಗೆ ಗೊತ್ತಿರಬೇಕಾದ ವಿಚಾರ: ನೀವು ತಿಳಿಯಿರಿ, ಬೇರೆಯವರಿಗೂ ಹೇಳಿರಿ
ವರ್ಷಗಳ ಬಳಿಕ ಮತ್ತೆ ಚಿತ್ರಮಂದಿರದಲ್ಲಿ 'ದಾರಿ ತಪ್ಪಿದ ಮಗ' ಸಿನಿಮಾ ಬಂದಿದೆ. ಬೆಂಗಳೂರಿನ ಗಾಂಧಿನಗರದ ತ್ರಿವೇಣಿ ಚಿತ್ರಮಂದಿರದಲ್ಲಿ ನಾಳೆಯಿಂದ ಚಿತ್ರದ ಪ್ರದರ್ಶನ ಶುರು ಆಗಲಿದೆ. ಪ್ರತಿ ದಿನ ನಾಲ್ಕು ಪ್ರದರ್ಶನಗಳು ನಡೆಯಲಿದೆ.
ಅಂದಹಾಗೆ, 'ದಾರಿ ತಪ್ಪಿದ ಮಗ' ಸಿನಿಮಾದಲ್ಲಿ ರಾಜ್ ಕುಮಾರ್ ಜೊತೆಗೆ ಕಲ್ಪನಾ, ಆರತಿ, ಮಂಜುಳಾ ಹಾಗೂ ಜಯಮಾಲ ನಟಿಸಿದ್ದರು. ಪ್ರಶಾಂತ್ ಮತ್ತು ಪ್ರಕಾಶ್ ಎಂಬ ದ್ವಿಪಾತ್ರದಲ್ಲಿ ರಾಜ್ ಮಿಂಚಿದ್ದರು. ಪಿಕೆಟಿ ಶಿವರಾಂ ನಿರ್ದೇಶನ ಮತ್ತು ನಿರ್ಮಾಣದಲ್ಲಿ ಚಿತ್ರ ಮೂಡಿಬಂದಿತ್ತು.