Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಂತಾರ 2'ಗೆ ಪಂಜುರ್ಲಿಯ ಅನುಮತಿ ಕೇಳಿದ ಚಿತ್ರತಂಡ: ರಿಷಬ್ಗೆ ಎಚ್ಚರಿಕೆ ಕೊಟ್ಟ ದೈವ!
ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಮ್ಸ್ 'ಕಾಂತಾರ' ಸಿನಿಮಾದ ಯಶಸ್ಸಿನಿಂದ ಥ್ರಿಲ್ ಆಗಿದ್ದಾರೆ. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ!
ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ 'ಕಾಂತಾರ' ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ನಿರೀಕ್ಷೆಗಿಂತಲೂ ಬಹುದೊಡ್ಡಮಟ್ಟದ ಗೆಲುವನ್ನು ಸಿನಿಮಾ ಕಂಡಿದೆ. ಇದಕ್ಕೆ ಚಿತ್ರತಂಡದ ಶ್ರಮದ ಜೊತೆಗೆ ದೈವದ ಆಶೀರ್ವಾದವೂ ಕಾರಣ ಎನ್ನಲಾಗುತ್ತಿದೆ.
'ಕಾಂತಾರ' ಚಿತ್ರ ವೀಕ್ಷಿಸಲು ಬಂದ ಮುಸ್ಲಿಂ ಜೋಡಿಯ ಮೇಲೆ ಗುಂಪಿನಿಂದ ಹಲ್ಲೆ
ದೈವವನ್ನು ನಂಬುವ ರಿಷಬ್ ಶೆಟ್ಟಿ, ದೈವದ ಬಗ್ಗೆ ಸಿನಿಮಾ ಮಾಡುವಾದ ನೇಮ, ನಿಷ್ಠೆಗಳಿಂದ ಮಾಡಿದ್ದು, ಅಪಚಾರವಾಗದಂತೆ ನಡೆದುಕೊಂಡಿದ್ದರಿಂದಲೇ ದೈವದ ಆಶೀರ್ವಾದ ಸಿನಿಮಾಕ್ಕೆ ಧಕ್ಕಿ, ದೊಡ್ಡ ಹಿಟ್ ಆಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ 'ಕಾಂತಾರ 2' ಸಿನಿಮಾದ ಮಾತುಕತೆ ಶುರುವಾಗಿದ್ದು, 'ಕಾಂತಾರ 2' ಸಿನಿಮಾ ಮಾಡಬಹುದೇ ಎಂದು ಸ್ವತಃ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ಚಿತ್ರತಂಡದವರು ದೈವದ ಅನುಮತಿಯನ್ನು ಕೇಳಿದ್ದಾರೆ. ಈ ಸಂದರ್ಭದಲ್ಲಿ ದೈವವು ಕೆಲವು ಎಚ್ಚರಿಕೆಗಳನ್ನು ಚಿತ್ರತಂಡಕ್ಕೆ ನೀಡಿದೆ.
'ಕಾಂತಾರ 2'ಗೆ ಅನುಮತಿ ಕೋರಿದ ಚಿತ್ರತಂಡ
ಮಂಗಳೂರು ನಗರ ಹೊರವಲಯದ ಬಂದಲೆಯ ಮನೆಯಲ್ಲಿ ನಡೆದ ಪಂಜುರ್ಲಿ ಕೋಲದಲ್ಲಿ ಕಾಂತಾರ ಚಿತ್ರತಂಡ ಭಾಗವಹಿಸಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಅಡಿಗ ಅವರ ಸಮ್ಮುಖದಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ದೈವದ ಬಳಿ ರಿಷಬ್ ಶೆಟ್ಟಿ ದೈವದ ಬಳಿ ಕಾಂತಾರಾ ಭಾಗ ಎರಡು ನಿರ್ಮಾಣಕ್ಕೆ ಅನುಮತಿ ಕೇಳಿದೆ. ಈ ಸಂದರ್ಭದಲ್ಲಿ ಸಿನಿಮಾದ ನಿರ್ದೇಶಕ, ನಟ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು ಸೇರಿದಂತೆ ಇನ್ನು ಕೆಲವರು ಹಾಜರಿದ್ದರು.
ರಿಷಬ್ ಶೆಟ್ಟಿಗೆ ಎಚ್ಚರಿಕೆ ನೀಡಿದ ದೈವ!
'ಕಾಂತಾರ' ಭಾಗ 2 ಸಿನಿಮಾ ಮಾಡಲು ದೈವವು ಅನುಮತಿಯನ್ನು ನೀಡಿದೆ. ಆದರೆ ಕೆಲವು ಷರತ್ತುಗಳನ್ನು, ಎಚ್ಚರಿಕೆಯನ್ನು ದೈವ ನೀಡಿದೆ. 'ಕಾಂತಾರ' ಚಿತ್ರತಂಡಕ್ಕೆ ಅಭಯ ನೀಡಿರುವ ಅಣ್ಣಪ್ಪ ಪಂಜುರ್ಲಿ 'ಮೊದಲು ಚಿತ್ರ ಮಾಡೋವಾಗ ಹತ್ತು ಬಾರಿ ಯೋಚನೆ ಮಾಡಿದ್ದೀರಿ, ಈ ಬಾರಿ ಮಾತ್ರ ನೂರು ಬಾರಿ ಯೋಚನೆ ಮಾಡಿ. ಮಾಡಿದ ಪ್ರಯತ್ನಕ್ಕೆ ಯಾವತ್ತೂ ಜಯ ಸಿಗುವ ರೀತಿ ಮಾಡುತ್ತೇನೆ. ಈ ಹಿಂದೆ ಇದ್ದ ತಂಡದ ಜೊತೆಗೆ, ಅಷ್ಟೇ ಶುದ್ಧಾಚಾರದಲ್ಲಿ ಮುಂದುವರಿಯಿರಿ' ಅಂತಾ ದೈವ ಅಣ್ಣಪ್ಪ ಪಂಜುರ್ಲಿ ಕಾಂತಾರ ಚಿತ್ರತಂಡಕ್ಕೆ ಅಭಯ ನೀಡಿದೆ.
ಮುಂದಿನ ಮಳೆಗಾಲದಲ್ಲಿ ಚಿತ್ರೀಕರಣ ಆರಂಭ
ದೈವದಿಂದ ಅನುಮತಿ ದೊರೆತೊಡನೆ ರಿಷಬ್ ಶೆಟ್ಟಿ ಸಿನಿಮಾ ನಿರ್ಮಾಣಕ್ಕೆ ಈಗಾಗಲೇ ಮಾಡಿಕೊಂಡಿದ್ದ ಯೋಜನೆಯನ್ನು ಜಾರಿಗೊಳಿಸಲು ಪ್ರಾರಂಭಿಸಿದ್ದಾರೆ. ಚಿತ್ರದಲ್ಲಿ ನಟಿಸುವ ಕೆಲವರಿಗೆ ಉದ್ದ ಕೂದಲು ಬಿಡಲು ಸೂಚಿಸಿದ್ದಾರೆ. ಮುಂದಿನ ಮಳೆಗಾಲದ ಅವಧಿಯಲ್ಲಿ ಕಾಂತಾರಾ ಭಾಗ ಎರಡು ಚಿತ್ರದ ಚಿತ್ರೀಕರಣ ವಾಗುವ ಸಾಧ್ಯತೆಗಳಿವೆ. 'ಕಾಂತಾರ' ಸಿನಿಮಾದಲ್ಲಿ ನಟಿಸಿರುವ ಬಹುತೇಕ ಕಲಾವಿದರು 'ಕಾಂತಾರ 2' ಸಿನಿಮಾದಲ್ಲಿಯೂ ನಟಿಸುವ ಸಾಧ್ಯತೆ ದಟ್ಟವಾಗಿದೆ. ಮತ್ತು ಈ ಕತೆ 'ಕಾಂತಾರ' ಮೊದಲ ಭಾಗ ನಡೆದ ಕತೆಗಿಂತಲೂ ಹಿಂದಿನ ಸಮಯದ ಕತೆ ಹೊಂದಿರಲಿದೆ ಎನ್ನಲಾಗುತ್ತಿದೆ.
'ಕಾಂತಾರ' ಚಿತ್ರತಂಡ ಭಾಗಿ
ಹೊಂಬಾಳೆ ಪ್ರೊಡಕ್ಷನ್ ನ ವಿಜಯ್ ಕಿರಂಗದೂರು, ನಟ, ನಿರ್ದೇಶಕ ರಿಷಬ್ ಶೆಟ್ಟಿ, ನಟಿ ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ದೀಪಕ್ ರೈ ಪಾಣಾಜೆ, ನವೀಬ್ ಬೋಂದೆಲ್ ರಿಷಬ್ ಪತ್ನಿ ಪ್ರಗತಿ ಶೆಟ್ಟಿ ಸೇರಿದಂತೆ ರಿಷಬ್ ಕುಟುಂಬಸ್ಥರು,ಕಾಂತಾರಾ ಚಿತ್ರ ತಂಡದ ಕಲಾವಿದರು ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಭಾಗವಹಿಸಿದ್ದಾರೆ. ಇದಕ್ಕೂ ಮುನ್ನ ರಿಷಬ್ ಶೆಟ್ಟಿ ಹಾಗೂ ಇತರರು ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.