Just In
Don't Miss!
- Lifestyle
ದಿನ ಭವಿಷ್ಯ: ನಿಮ್ಮ ರಾಶಿಗೆ ಶನಿವಾರ ದಿನ ಹೇಗಿರಲಿದೆ ನೋಡಿ
- News
ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್
- Education
KSCCF Recruitment 2021: 45 ಲೆಕ್ಕಿಗರು, ಎಫ್ಡಿಎ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Automobiles
ಮಾರ್ಚ್ ತಿಂಗಳಿನಲ್ಲಿ ಹ್ಯುಂಡೈ ವಿವಿಧ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ
- Sports
ಐಎಸ್ಎಲ್: ಸಮಬಲ ಸಾಧಿಸಿದ ಗೋವಾ ಎಫ್ಸಿ, ಮುಂಬೈ ಎಫ್ಸಿ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 05ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಹಸೆಮಣೆ ಏರುವ ತಯಾರಿಯಲ್ಲಿದ್ದಾರೆ. ಈಗಾಗಲೇ ಮದುವೆ ಆಮಂತ್ರಣ ನೀಡುತ್ತಿರುವ ಈ ಜೋಡಿ ಸ್ಯಾಂಡಲ್ ವುಡ್ ಅನೇಕ ಕಲಾವಿದರಿಗೆ ಮದುವೆಯ ಮಮತೆಯ ಕರೆಯೋಲೆ ಮಾಡಿದ್ದಾರೆ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸುದೀಪ್ ಸೇರಿದಂತೆ ಅನೇಕರಿಗೆ ಮದುವೆ ಆಮಂತ್ರಣ ಹೋಗಿದೆ. ಇದೀಗ ಕೃಷ್ಣ ಮತ್ತು ಮಿಲನಾ ಮದುವೆಯ ಆಮಂತ್ರಣ ರಾಕಿಂಗ್ ಯಶ್ ಕೈ ಸೇರಿದೆ. ಹೌದು, ನಿನ್ನೆ ಜನವರಿ 18ರಂದು ಕೃಷ್ಣ ಮತ್ತು ಮಿಲನಾ ಜೋಡಿ ಯಶ್ ಮನೆಗೆ ತೆರಳಿ ಮದುವೆಯ ಕರೆಯೋಲೆ ಮಾಡಿದ್ದಾರೆ.
ತೆಲುಗು 'ಲವ್ ಮಾಕ್ಟೈಲ್' ಜೋಡಿಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನ
ವಿವಾಹ ಆಮಂತ್ರಣ ನೀಡಿ, ಯಶ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಶೇರ್ ಮಾಡಿರುವ ಕೃಷ್ಣ, ವಿಭಿನ್ನವಾಗಿ ಬರೆದುಕೊಂಡಿದ್ದಾರೆ. ಸಿದ್ಧಾರ್ಥ ಲೇಔಟ್ ಪಡುವಾರಳ್ಳಿಯನ್ನು ಭೇಟಿ ಮಾಡಿದೆ. ನಾವು ಮೈಸೂರು ಹುಡುಗರು' ಎಂದು ಬರೆದುಕೊಂಡು ಗಮನ ಸೆಳೆದಿದ್ದಾರೆ.
ಇತ್ತೀಚಿಗಷ್ಟೆ ಕೃಷ್ಣ ಮತ್ತು ಮಿಲನಾ ಜೋಡಿ ಇಬ್ಬರು ಟಾಲಿವುಡ್ ಸ್ಟಾರ್ ನಟಿ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ. ಸೂಪರ್ ಹಿಟ್ ಲವ್ ಮಾಕ್ಟೇಲ್ ಸಿನಿಮಾದ ರಿಮೇಕ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತಮನ್ನಾ ಚಿತ್ರೀಕರಣದಲ್ಲಿದ್ದರು. ಚಿತ್ರಕ್ಕೆ ಕನ್ನಡದ ನಿರ್ದೇಶಕ ನಾಗಶೇಖರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರೀಕರಣ ಸೆಟ್ ಗೆ ಭೇಟಿ ನೀಡಿದ್ದ ಕೃಷ್ಣ ಮತ್ತು ಮಿಲನಾ ತಮನ್ನಾ ಭೇಟಿಯಾಗಿ ಮದುವೆ ಆಮಂತ್ರಣ ನೀಡಿದ್ದಾರೆ.
ಅಂದಹಾಗೆ ಕೃಷ್ಣ ಮತ್ತು ಮಿಲನಾ ಜೋಡಿ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆ ದಿನ ಹಸಮಣೆ ಏರುತ್ತಿದ್ದಾರೆ. ಈಗಾಗಲೇ ಮದುವೆಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಈ ಜೋಡಿ ಸದ್ಯ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಲವ್ ಮಾಕ್ ಟೇಲ್-2 ಸಿನಿಮಾದ ಚಿತ್ರೀಕರಣ ಸಹ ನಡೆಯತ್ತಿದೆ. ಸಿನಿಮಾ ಕೆಲಸಗಳ ನಡುವೆಯೂ ವಿವಾಹ ಆಮಂತ್ರಣ ನೀಡುತ್ತಿದ್ದಾರೆ. ಚಂದನವನದ ಈ ಸುಂದರ ಜೋಡಿಯ ಮದುವೆ ನೋಡಲು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.