Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಹೆಲಿಕಾಪ್ಟರ್ ನಲ್ಲೇ ಡಿಶುಂ ಡಿಶುಂ
ಈಗಾಗಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಹಲವಾರು ಚಿತ್ರಗಳಲ್ಲಿ ಗಾಳಿಯಲ್ಲೇ ಹಾರುತ್ತಾ ಶತ್ರುಗಳನ್ನು ಸದೆಬಡಿದಿದ್ದಾರೆ. ಇನ್ನು ಹೆಲಿಕಾಪ್ಟರ್ ಸನ್ನಿವೇಶಗಳು ದರ್ಶನ್ ಅವರ ಅಭಿಮಾನಿಗಳಿಗೆ ಹೊಸದಲ್ಲ. ಗಾಳಿಯಲ್ಲೇ ಹಾರಾಡುತ್ತಾ ಡ್ಯುಯಟ್ ಸಹ ಹಾಡಿದ್ದಾರೆ.
ಈ ಬಾರಿ ಬೃಂದಾವನ ಚಿತ್ರದ ಮೂಲಕ ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡಲು ಬರುತ್ತಿದ್ದಾರೆ. ಈ ಚಿತ್ರದ ಒಂದು ಸಾಹಸ ಸನ್ನಿವೇಶದ ಬಗ್ಗೆ ಮಾತನಾಡಿರುವ ದರ್ಶನ್, "ನನ್ನ ವೃತ್ತಿ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಹೆಲಿಕಾಪ್ಟರ್ ನಲ್ಲಿ ಆಕ್ಷನ್ ಸನ್ನಿವೇಶ ಮಾಡಿದ್ದೇನೆ. ಅದೊಂದು ಮರೆಯಲಾಗದ ಅನುಭವ" ಎಂದು ಹೇಳಿಕೊಂಡಿದ್ದಾರೆ.
ಹೆಲಿಕಾಪ್ಟರ್ ಸಾಹಸ ಸನ್ನಿವೇಶ ಚಿತ್ರೀಕರಣಕ್ಕಾಗಿ ಪೈಲಟ್ ಗೆ ಮುಂಚಿತವಾಗಿಯೇ ತಿಳಿಸಲಾಗಿತ್ತು. ನನಗೆ ಒಂದು ವಾರ ಕಾಲಾವಧಿ ಇತ್ತು. ಭೂಮಿಯಿಂದ ಹತ್ತು ಅಡಿ ಮೇಲೆ ಹೆಲಿಕಾಪ್ಟರ್ ಹಾರುತ್ತದೆ. ಆಗ ಕೆಳಗೆ ಜಿಗಿಯುವ ಸನ್ನಿವೇಶ ಅದು. ಚಿತ್ರೀಕರಣ ಸ್ಪಾಟ್ ನಲ್ಲಿ ಬಹಳಷ್ಟು ಟ್ರಾಫಿಕ್ ಇದ್ದ ಕಾರಣ ಅಪಾಯ ಸ್ವಲ್ಪ ಹೆಚ್ಚಾಗಿಯೇ ಇತ್ತು ಎಂದು ತಮ್ಮ ಅನುಭವಗಳನ್ನು ಹೇಳಿಕೊಂಡಿದ್ದಾರೆ.
ಈ ಚಿತ್ರಕ್ಕೆ ಕೆ.ವಿ.ರಾಜು ಸಂಭಾಷಣೆ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರಮೇಶ್ ಬಾಬು ಅವರ ಛಾಯಾಗ್ರಹಣವಿದೆ. ಪಾತ್ರವರ್ಗದಲ್ಲಿ ಜೈಜಗದೀಶ್, ದೊಡ್ಡಣ್ಣ, ಸಾಧು ಕೋಕಿಲಾ, ಸಂಪತ್, ಕುರಿ ಪ್ರತಾಪ್, ಕೇಡಿ ವೆಂಕಟೇಶ್, ವೀಣಾ ಸುಂದರ್ ಮುಂತಾದ ಕನ್ನಡ ಚಿತ್ರಗಳ ರೆಗ್ಯುಲರ್ ಕಲಾವಿದರಿದ್ದಾರೆ. ಬಿಗ್ ಬಜೆಟ್ ಚಿತ್ರವಾಗಿರುವ 'ಬೃಂದಾವನ' ಚಿತ್ರದ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. (ಏಜೆನ್ಸೀಸ್)