Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಕಟ್ ಔಟ್ ನಲ್ಲಿ ಸೀನಿಯರ್ ಮತ್ತು ಜೂನಿಯರ್
'ಕುರುಕ್ಷೇತ್ರ' ಮಹಾ ಯುದ್ಧಕ್ಕೆ ಇನ್ನು ಆರು ದಿನಗಳು ಬಾಕಿ ಇದೆ. ವರ್ಷಗಳಿಂದ ಕಾಯುತ್ತಿದ್ದ ಈ ಸಿನಿಮಾ ಇದೇ ಶುಕ್ರವಾರ ಅಂದರೆ, ಆಗಸ್ಟ್ 9 ರಂದು ಬಿಡುಗಡೆ ಆಗುತ್ತಿದೆ.
'ಕುರುಕ್ಷೇತ್ರ' ಸಂಭ್ರಮ ಈಗಾಗಲೇ ಶುರು ಆಗಿದೆ. ಚಿತ್ರಮಂದಿರದ ಮುಂದೆ ಕಟ್ ಔಟ್ ಗಳು ಕಂಗೊಳಿಸುತ್ತಿವೆ. ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರದಲ್ಲಿ ಇಂದೇ ಸಿನಿಮಾದ ಕಟ್ ಔಟ್ ಹಾಕಲಾಗಿದೆ.
ವಿದೇಶದಲ್ಲಿ ಒಂದು ದಿನ ಮುಂಚಿತವಾಗಿ 'ಕುರುಕ್ಷೇತ್ರ' ಯುದ್ಧ
ಕಟ್ ಔಟ್ ನಲ್ಲಿ ದರ್ಶನ್ ಮಾತ್ರವಲ್ಲದೆ ಅಂಬರೀಶ್ ಅವರ ಚಿತ್ರ ಸಹ ಮೂಡಿದೆ. ಅಗಲಿದ ನಾಯಕನಿಗೆ ಈ ರೀತಿ 'ಕುರುಕ್ಷೇತ್ರ' ಚಿತ್ರತಂಡ ನಮನ ಸಲ್ಲಿಸಿದೆ. ಇದೊಂದು ಮಲ್ಟಿಸ್ಟಾರ್ ಸಿನಿಮಾ ಆಗಿದ್ದು, ಉಳಿದ ನಾಯಕರ ಪೋಸ್ಟರ್ ಗಳೂ ಚಿತ್ರಮಂದಿರದಲ್ಲಿ ಇರಲಿದೆ.
ಕರ್ನಾಟಕದಲ್ಲಿ ಸಿನಿಮಾದ ಅಬ್ಬರ ಬಹಳ ಜೋರಾಗಿದೆ. ಬೆಂಗಳೂರಿನಲ್ಲಿ ನರ್ತಕಿ ಮುಖ್ಯ ಚಿತ್ರಮಂದಿರವಾಗಿದೆ. ವಿದೇಶದಲ್ಲಿ ಒಂದು ದಿನ ಮುಂಚಿತವಾಗಿ ಸಿನಿಮಾವನ್ನು ರಿಲೀಸ್ ಮಾಡಲು ವಿತರಕರು ನಿರ್ಧಾರ ಮಾಡಿದ್ದಾರೆ.
ದುರ್ಯೋಧನ ಮತ್ತು ಪೈಲ್ವಾನ ಇಬ್ಬರಲ್ಲಿಯೂ ಒಂದು ಶಕ್ತಿ ಇದೆ- ನಾಗೇಂದ್ರ ಪ್ರಸಾದ್
ದರ್ಶನ್, ಅಂಬರೀಶ್, ರವಿಚಂದ್ರನ್, ಭಾರತಿ ವಿಷ್ಣುವರ್ಧನ್, ಅರ್ಜುನ್ ಸರ್ಜಾ, ರವಿಶಂಕರ್, ನಿಖಿಲ್ ಕುಮಾರ್, ಸ್ನೇಹ ಸೇರಿದಂತೆ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ನಾಗಣ್ಣ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಮುನಿರತ್ನ ಸಿನಿಮಾದ ನಿರ್ಮಾಣ ಮಾಡಿದ್ದಾರೆ. ಬಹಳ ವರ್ಷಗಳ ನಂತರ ಒಂದು ಪೌರಾಣಿಕ ಸಿನಿಮಾ ಕನ್ನಡದಲ್ಲಿ ಬರುತ್ತಿದ್ದು, ಚಿತ್ರದ ಮೇಲೆ ದೊಡ್ಡ ನಿರೀಕ್ಷೆ ಇದೆ.