Don't Miss!
- News ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನೇ ಗುರಿಯಾಗಿಸಿ ಐಟಿ ದಾಳಿ : ಡಿ ಕೆ ಶಿವಕುಮಾರ್ ಏನಂದ್ರು?
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೋಟೋ ವೈರಲ್; ಜಾಲಿ ರೈಡ್ ಮುಗಿಸಿ ವಾಪಸ್ ಆದ ದರ್ಶನ್ ಆ್ಯಂಡ್ ಟೀಂ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಸ್ನೇಹಿತರ ಜೊತೆ ಮಸ್ತ್ ಎಂಜಾಯ್ ಮಾಡುತ್ತಿದ್ದಾರೆ. ಲಾಕ್ ಡೌನ್ ಬಳಿಕ ಹೆಚ್ಚಾಗಿ ತಮ್ಮ ಮೈಸೂರಿನ ತೋಟದ ಮನೆಯಲ್ಲೇ ವಾಸಿಸುತ್ತಿರುವ ದಚ್ಚು, ಆಗಾಗ ತನ್ನ ಆಪ್ತ ಗ್ಯಾಂಗ್ ಜೊತೆ ಜಾಲಿ ಟ್ರಿಪ್ ಎಂಜಾಯ್ ಮಾಡುತ್ತಿರುತ್ತಾರೆ.
ಇತ್ತೀಚಿಗಷ್ಟೆ ಕೊಡಗು ಕಡೆ ಬೈಕ್ ರೈಡ್ ಹೊರಟಿದ್ದ ಚಾಲೆಂಜಿಂಗ್ ಸ್ಟಾರ್ ಆಂಡ್ ಗ್ಯಾಂಗ್ ಇದೀಗ ಕೇರಳ ಕಡೆ ಹೊರಟಿದ್ದಾರೆ. ವಿಶೇಷ ಎಂದರೆ ಈಗಾಗಲೇ ಕೇರಳ ರೈಡ್ ಮುಗಿಸಿ ಕರ್ನಾಟಕಕ್ಕೆ ವಾಪಸ್ ಆಗಿದ್ದಾರೆ. ದರ್ಶನ್ ಮತ್ತು ತಂಡ ಜಾಲಿ ರೈಡ್ ಹೋಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮುಂದೆ ಓದಿ...
ಮತ್ತೊಂದು ಜಾಲಿ ರೈಡ್ ಹೊರಟ ದರ್ಶನ್ ಅಂಡ್ ಟೀಂ; 'ಸಾರಥಿ' ಪಯಣ ಯಾವ ಕಡೆಗೆ?
ದರ್ಶನ್ ಆಂಡ್ ಗ್ಯಾಂಗ್ ಜಾಲಿ ರೈಡ್
ಕೇರಳಕಡೆ ಜಾಲಿ ರೈಡ್ ಹೊರಟಿದ್ದ ದರ್ಶನ್ ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಹಾಸ್ಯ ನಟ ಚಿಕ್ಕಣ್ಣ, ಯಶಸ್ ಸೂರ್ಯ, ಪ್ರಜ್ವಲ್ ದೇವರಾಜ್, ಪನ್ನಗಾಭರಣ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ನೇಹಿತರು ಸಾಥ್ ನೀಡಿದ್ದಾರೆ. ಸ್ನೇಹಿತರ ಜೊತೆ ಬೈಕ್ ರೈಡ್ ಹೋಗಿದ್ದ ದರ್ಶನ್ ವೀಕೆಂಡ್ ಸಖತ್ ಎಂಜಾಯ್ ಮಾಡಿದ್ದಾರೆ.
ದರ್ಶನ್ ಜೊತೆ ಫೋಟೋಗಾಗಿ ಮುಗಿಬಿದ್ದ ಅಭಿಮಾನಿಗಳು
ದರ್ಶನ್ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮತ್ತು ಪೊಲೀಸರು ಮುಗಿಬಿದ್ದಿದ್ದರು. ಅಭಿಮಾನಿಗಳ ಜೊತೆ ಸೆಲ್ಫಿಗೆ ಪೋಸ್ ಕೊಟ್ಟು ತನ್ನ ರೈಡ್ ಮುಂದುವರೆಸಿದ್ದಾರೆ. ಪೊಲೀಸರು ಮತ್ತು ಅರಣ್ಯ ಸಿಬ್ಬಂದಿ ಜೊತೆ ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
'ಗ್ರೀನ್ ಇಂಡಿಯಾ ಚಾಲೆಂಜ್' ಪೂರ್ಣಗೊಳಿಸಿದ ನಟ ದರ್ಶನ್
ಫಾರಂ ಹೌಸ್ ಸೇರಿರುವ ಚಾಲೆಂಜಿಂಗ್ ಸ್ಟಾರ್ ಟೀಂ
ಈಗಾಗಲೇ ದರ್ಶನ್ ಮತ್ತು ತಂಡ ನಂಜನಗೂರು ಮಾರ್ಗವಾಗಿ ಬಂದು ಟಿ.ನರಸಿಪುರದಲ್ಲಿರುವ ಫಾರಂ ಹೌಸ್ ಸೇರಿದ್ದಾರೆ. ಲಾಕ್ ಡೌನ್ ಬಳಿಕ ದರ್ಶನ್ ಇನ್ನೂ ಚಿತ್ರೀಕರಣ ಪ್ರಾರಂಭ ಮಾಡಿಲ್ಲ. ಇನ್ನೇನು ಈ ವರ್ಷ ಕಳೆಯುತ್ತಾ ಬಂತು. ಮುಂದಿನ ವರ್ಷದಿಂದ ದರ್ಶನ್ ಚಿತ್ರೀಕರಣದಲ್ಲಿ ಬ್ಯುಸಿಯಾಗಲಿದ್ದಾರೆ.
Recommended Video
ಜನವರಿಯಿಂದ ಚಿತ್ರೀಕರಣ ಪ್ರಾರಂಭ
ಮದಕರಿ ನಾಯಕ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಬೇಕಿದೆ. ಇತ್ತೀಗಷ್ಟೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮತ್ತು ನಟ ದೊಡ್ಡಣ್ಣ ಸಿನಿಮಾ ಚಿತ್ರೀಕರಣಕ್ಕೆ ಲೊಕೇಶನ್ ಹುಡುಕಾಟ ಮಾಡುತ್ತಿದ್ದರು. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವುದಾಗಿ ಹೇಳಿದ್ದರು. ಜನವರಿಯಿಂದ ದರ್ಶನ್ ವೀರ ಮದಕರಿನಾಯಕ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.