Don't Miss!
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಂಡತಿ, ಮಗನ ಜೊತೆಗೆ 'ಕುರುಕ್ಷೇತ್ರ' ವೀಕ್ಷಿಸಿದ ದರ್ಶನ್
Recommended Video
'ನಾನಿನ್ನು ಸಿನಿಮಾ ನೋಡಿಲ್ಲ...' ಎಂದು ಇತ್ತೀಚಿಗೆ ನಡೆದ 'ಕುರುಕ್ಷೇತ್ರ' ಪ್ರೆಸ್ ಮೀಟ್ ನಲ್ಲಿ ನಟ ದರ್ಶನ್ ಹೇಳಿದ್ದರು. ಆದರೆ, ಅಂತೂ ಇದೀಗ ಆ ಕಾಲ ಕೂಡಿ ಬಂದಿದೆ.
ಇದೇ ಶುಕ್ರವಾರ ದರ್ಶನ್ ಅಭಿನಯದ 'ಕುರುಕ್ಷೇತ್ರ' ಸಿನಿಮಾ ಬಿಡುಗಡೆ ಆಗುತ್ತಿದೆ. ರಿಲೀಸ್ ಗೆ ಮುಂಚೆ ಸಿನಿಮಾವನ್ನು ದರ್ಶನ್ ನೋಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಜೊತೆಗೆ ಸಿನಿಮಾವನ್ನು ವೀಕ್ಷಿಸಿದ್ದಾರೆ.
ಮೊಟ್ಟ ಮೊದಲ ಸಲ 'ಅಭಿಮನ್ಯು' ನಿಖಿಲ್ ಬಗ್ಗೆ ಮಾತನಾಡಿದ ಡಿ-ಬಾಸ್
ಬೆಂಗಳೂರಿನ Carnivaal Cenimas ನಲ್ಲಿ ನಿನ್ನೆ (ಸೋಮವಾರ) ರಾತ್ರಿ 'ಕುರುಕ್ಷೇತ್ರ' ಚಿತ್ರದ ವಿಶೇಷ ಪ್ರದರ್ಶನವನ್ನು ದರ್ಶನ್ ಕುಟುಂಬಕ್ಕಾಗಿ ಏರ್ಪಡಿಸಲಾಗಿತ್ತು. ನಿರ್ಮಾಪಕ ಮುನಿರತ್ನ ಸಹ ಈ ವೇಳೆ ಹಾಜರಿದ್ದರು.
ಅಂದಹಾಗೆ, ಮೊದಲ ಬಾರಿಗೆ ದರ್ಶನ್ ಪೌರಾಣಿಕ ಸಿನಿಮಾ ಮಾಡುತ್ತಿದ್ದು, ದುರ್ಯೋಧನ ಪಾತ್ರವನ್ನು ನೋಡಿ ದರ್ಶನ್ ಕುಟುಂಬ ಖುಷಿಯಾಗಿದೆಯಂತೆ. ಅಲ್ಲದೆ, ದರ್ಶನ್ ಪುತ್ರ ವಿನೀಶ್ ದುರ್ಯೋಧನ ಪೋಸ್ಟರ್ ಮುಂದೆ ನಿಂತು ಫೋಟೋ ತೆಗೆದುಕೊಂಡಿದ್ದಾರೆ.
'ಬಾಹುಬಲಿ' ಸಿನಿಮಾವನ್ನು ಸೈಡಿಗಿಡಿ ಎಂದ ಡಿ ಬಾಸ್!
ಆಗಸ್ಟ್ 9 ರಂದು 'ಕುರುಕ್ಷೇತ್ರ' ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗುತ್ತಿದೆ. ಬೆಂಗಳೂರಿನ ಕೆಲವು ಚಿತ್ರಮಂದಿರಗಳಲ್ಲಿ ಈಗಾಗಲೇ ಬುಕ್ಕಿಂಗ್ ಓಪನ್ ಆಗಿದೆ. ಸಿನಿಮಾಗೆ ದೊಡ್ಡ ಕ್ರೇಜ್ ಇದ್ದು, ಒಳ್ಳೆಯ ಓಪನಿಂಗ್ ಪಡೆಯುವ ಲಕ್ಷಣಗಳು ಕಾಣುತ್ತಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಚಿತ್ರ ಬಿಡುಗಡೆ ಆಗುತ್ತಿದೆ.
'ಕುರುಕ್ಷೇತ್ರ' ಚಿತ್ರದಲ್ಲಿ ದರ್ಶನ್, ಅಂಬರೀಶ್, ರವಿಚಂದ್ರನ್, ಭಾರತಿ ವಿಷ್ಣುವರ್ಧನ್, ಅರ್ಜುನ್ ಸರ್ಜಾ, ರವಿಶಂಕರ್, ನಿಖಿಲ್ ಕುಮಾರ್, ಸ್ನೇಹ ಸೇರಿದಂತೆ ಅನೇಕ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ. ನಾಗಣ್ಣ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಮುನಿರತ್ನ ಸಿನಿಮಾದ ನಿರ್ಮಾಣ ಮಾಡಿದ್ದಾರೆ.