Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ವೀಟ್ ಡಿಲೀಟ್ ಮಾಡಿದ ಸುದೀಪ್: ಭಯಬಿದ್ದು ಡಿಲೀಟ್ ಮಾಡಿದ್ದಾರೆ ಎಂದ ದರ್ಶನ್ ಫ್ಯಾನ್ಸ್
ಟ್ವೀಟ್ ಡಿಲೀಟ್ ಮಾಡಿದ ಸುದೀಪ್: ಭಯಬಿದ್ದು ಡಿಲೀಟ್ ಮಾಡಿದ್ದಾರೆ ಎಂದ ದರ್ಶನ್ ಫ್ಯಾನ್ಸ್
Recommended Video
ಸ್ಯಾಂಡಲ್ ವುಡ್ ನಲ್ಲಿ ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ಕಾಳಗ ನಿನ್ನೆಮೊನ್ನೆಯದಲ್ಲ. ಇಬ್ಬರು ಸ್ಟಾರ್ ನಟರ ಅಭಿಮಾನಿಗಳು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಕೆಲವೊಮ್ಮೆ ಇಬ್ಬರ ಕಿತ್ತಾಟ ತಾರಕ್ಕೇರಿದ ಉದಾಹರಣೆಯು ಇದೆ.
ಕೆಲವು ದಿನಗಳಿಂದ ಸೈಲೆಂಟ್ ಆಗಿದ್ದ ಇಬ್ಬರು ಸ್ಟಾರ್ ನಟರ ಅಭಿಮಾನಿಗಳೀಗ ಮತ್ತೆ ರೊಚ್ಚಿಗೆದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರ ಮೇಲೊಬ್ಬರು ಕೆಸರೆರಚಾಟ ನಡೆಸುತ್ತಿದ್ದಾರೆ. ಅಷ್ಟಕ್ಕೂ ಅಭಿಮಾನಿಗಳ ಕಿತ್ತಾಟಕ್ಕೆ ಕಾರಣವಾಗಿದ್ದು, ಸುದೀಪ್ ಟ್ವೀಟ್. ಅಂದ್ಹಾಗೆ ಸುದೀಪ್ ಮಾಡಿರುವ ಟ್ವೀಟ್ ನಲ್ಲಿದೆ ಏನಿದೆ? ಟ್ವೀಟ್ ಮಾಡಿ ಕಿಚ್ಚ ಡಿಲೀಟ್ ಮಾಡಿದ್ದೇಕೆ? ಮುಂದೆ ಓದಿ...
ನಿತ್ಯೋತ್ಸವ ಕವಿಗೆ ಸಂತಾಪ ಸೂಚಿಸಿ ಸುದೀಪ್ ಟ್ವೀಟ್
ನಿತ್ಯೋತ್ಸವ ಕವಿ ನಿಸಾರ್ ಅಹಮದ್ ನಿಧನಕ್ಕೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಸುದೀಪ್ ಕೂಡ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು. ಕಿಚ್ಚ ಮಾಡಿರುವ ಟ್ವೀಟ್ ನಲ್ಲಿ "ನಿತ್ಯೋತ್ಸವ" ಪದ ತಪ್ಪಾಗಿತ್ತು. ಈ ತಪ್ಪನ್ನೆ ಬಳಸಿಕೊಂಡು ದರ್ಶನ್ ಅಭಿಮಾನಿಗಳು ಸುದೀಪ್ ಕಾಲೆಳೆಯಲು ಪ್ರಾರಂಭಿಸಿದ್ದಾರೆ.
'ಕನ್ನಡ ಸರಿಯಾಗಿ ಬರೆ' ಎಂದ ದರ್ಶನ್ ಅಭಿಮಾನಿ
ಸುದೀಪ್ ಟ್ವೀಟ್ ಮಾಡುತ್ತಿದ್ದಂತೆ, ನಿತ್ಯೋತ್ಸವ ಪದ ತಪ್ಪಾಗಿರುವುದನ್ನು ಗಮನಿಸಿದ ದರ್ಶನ್ ಅಭಿಮಾನಿಗಳು ಸುದೀಪ್ ಮಾಡಿರುವ ಟ್ವೀಟ್ ಕೆಳಗೆ ಕಾಮೆಂಟ್ ಮಾಡಲು ಪ್ರಾರಂಭಿಸಿದ್ದರು. ಡಿ ಬಾಸ್ ಅಭಿಮಾನಿಯೊಬ್ಬ "ನಿತ್ಯೋತ್ಸವ ಅದು ಮರಾಯ, ಕನ್ನಡ ಸರಿಯಾಗಿ ಬರೆ" ಎಂದು ಕಾಮೆಂಟ್ ಮಾಡಿದ್ದಾರೆ.
ಟ್ವೀಟ್ ಡಿಲೀಟ್ ಮಾಡಿದ ಸುದೀಪ್
"ನಿತ್ಯೋತ್ಸವ" ಪದ ತಪ್ಪಾಗಿ ಬರೆದ ಕಾರಣ ಕಿಚ್ಚ ಸುದೀಪ್ ಟ್ವೀಟ್ ಡಿಲೀಟ್ ಮಾಡಿ, ಮತ್ತೆ ಸರಿಯಾಗಿ ಬರೆದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಕಿಚ್ಚ ತಪ್ಪಾದ ಪದವನ್ನು ತಿದ್ದಿ ಮತ್ತೆ ಟ್ವೀಟ್ಟ್ ಮಾಡುತ್ತಿದ್ದಂತೆ ಡಿ ಬಾಸ್ ಅಭಿಮಾನಿಗಳು ಸುದೀಪ್ ಗೆ ಕನ್ನಡ ಬರಲ್ಲ, ಮೊದಲು ಸರಿಯಾಗಿ ಕನ್ನಡ ಕಲಿಯಿರಿ ಎಂದು ಅಣಕಿಸುತ್ತಿದ್ದಾರೆ.
ದರ್ಶನ್ ಅಭಿಮಾನಿಗಳಿಗೆ ಭಯಬಿದ್ದು ಟ್ವೀಟ್ ಡಿಲೀಟ್
ಸುದೀಪ್ ಟ್ವೀಟ್ ಡಿಲೀಟ್ ಮಾಡಿ ಮತ್ತೆ ಟ್ವೀಟ್ ಮಾಡುತ್ತಿದ್ದಂತೆ ದರ್ಶನ್ ಅಭಿಮಾನಿಗಳು "ನಮಗೆ ಭಯಬಿದ್ದು ಸುದೀಪ್ ಟ್ವೀಟ್ ಡಿಲೀಟ್ ಮಾಡಿದ್ದಾರೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಕೇಕೆ ಹಾಕುತ್ತಿದ್ದಾರೆ. 'ಡಿ ಬಾಸ್ ಅಭಿಮಾನಿಗಳಿಗೆ ತಲೆ ಬಾಗಿಸಿದ ಸುದೀಪ್', 'ಕಿಚ್ಚನನ್ನು ತಿದ್ದಿದ ಡಿ ಬಾಸ್ ಅಭಿಮಾನಿಗಳು' ಎಂದು ಟ್ವೀಟ್ ಮಾಡಿ ಕಿಚ್ಚನ ಅಭಿಮಾನಿಗಳನ್ನು ಕಿಚ್ಚಾಯಿಸುತ್ತಿದ್ದಾರೆ.
ಸುದೀಪ್ ಮೊದಲು ಮಾಡಿರುವ ಟ್ವೀಟ್ ಹೀಗಿದೆ
"ನಿತ್ಯೊತ್ಸವ ತಾಯಿ ನಿತ್ಯೊತ್ಸವ ನಿನಗೆ ನಿತ್ಯೊತ್ಸವ.. ಕನ್ನಡ ತಾಯಿ ಪ್ರೀತಿ ಕಲಿಸಿದ ನಿಮ್ಮನ್ನ ಪಡೆದ ನಾವು ಕನ್ನಡಿಗರು ಪುಣ್ಯವಂತರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಸುದೀಪ್ ಮೊದಲು ಟ್ವೀಟ್ ಮಾಡಿದ್ದರು. ಆ ನಂತರ ಟ್ವೀಟ್ ಡಿಲೀಟ್ ಮಾಡಿ ನಿತ್ಯೋತ್ಸವ ಪದ ಸರಿಯಾಗಿ ಬರೆದು ಮತ್ತೆ ಟ್ವೀಟ್ ಮಾಡಿದ್ದಾರೆ.
ಟ್ರೋಲ್ ಗಳು ಹರಿದಾಡುತ್ತಿವೆ
ಇಷ್ಟಕ್ಕೆ ಸುಮ್ಮನಾಗದ ಅಭಿಮಾನಿಗಳು ತರಹೇವಾರಿ ಟ್ರೋಲ್ ಗಳನ್ನು ಮಾಡಿ ಪೋಸ್ಟ್ ಮಾಡುತ್ತಿದ್ದಾರೆ. ಅವಾಚ್ಯ ಶಬ್ದಗಳನ್ನು ಬಳಸಿ, ಫೋಟೋಗಳನ್ನು ಎಡಿಟ್ ಮಾಡಿ ಪೋಸ್ಟ್ ಮಾಡುತ್ತಿದ್ದಾರೆ. ಅಭಿಮಾನಿಗಳ ಕಿತ್ತಾಟ ಎಲ್ಲಿಗೆ ಹೋಗಿ ಮುಟ್ಟುತ್ತೊ ಗೊತ್ತಿಲ್ಲ.