Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಸಾರ್ವಭೌಮನಿಗೆ ನಮನ ಸಲ್ಲಿಸಿದ ದರ್ಶನ್, ಸುದೀಪ್
ಡಾ.ರಾಜ್ ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಕನ್ನಡದ ಸಾಕಷ್ಟು ನಟ, ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಕೋರಿದಾರೆ. ಇನ್ನು ನಟ ದರ್ಶನ್ ಮತ್ತು ಸುದೀಪ್ ಕೂಡ ತಮ್ಮ ಟ್ವಿಟ್ಟರ್ ಖಾತೆಗಳ ಮೂಲಕ ಅಣ್ಣಾವ್ರಿಗೆ ನಮನ ಸಲ್ಲಿಸಿದ್ದಾರೆ.
ನಲ್ಮೆಯ ನಟಸಾರ್ವಭೌಮ ಡಾ|| ರಾಜಣ್ಣ ನವರಿಗೆ ಹುಟ್ಟುಹಬ್ಬದ ದಿನದಂದು ಹೃದಯಪೂರ್ವಕ ನಮನಗಳು. ಅವರ ಚಿತ್ರಗಳು, ನಡೆ-ನುಡಿ, ಆದರ್ಶಗಳು ಸದಾ ಜೀವಂತ 😊 pic.twitter.com/w3VYGdMhEM
— Darshan Thoogudeepa (@dasadarshan) April 24, 2018
ನಟ ದರ್ಶನ್ ''ನಲ್ಮೆಯ ನಟಸಾರ್ವಭೌಮ ಡಾ|| ರಾಜಣ್ಣ ನವರಿಗೆ ಹುಟ್ಟುಹಬ್ಬದ ದಿನದಂದು ಹೃದಯಪೂರ್ವಕ ನಮನಗಳು. ಅವರ ಚಿತ್ರಗಳು, ನಡೆ-ನುಡಿ, ಆದರ್ಶಗಳು ಸದಾ ಜೀವಂತ '' ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಸುದೀಪ್ ''ದೇಶದ ಶ್ರೇಷ್ಠ ನಟರಲ್ಲಿ ಒಬ್ಬರಾದ ಡಾ.ರಾಜ್ ಕುಮಾರ್ ಅವರು ನಮ್ಮನ್ನು ರಂಜಿಸಿದ್ದು ನಿಜಕ್ಕೂ ನಮ್ಮ ಅದೃಷ್ಟ. ಈ ನೆಲ ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದೆ'' ಎಂದು ಸುದೀಪ್ ಟ್ವೀಟಿಸಿದ್ದಾರೆ.
We were truly blessed to have been entertained by one of the greatest actors of th country & the master blaster himself.
— Kichcha Sudeepa (@KicchaSudeep) April 24, 2018
True Legends.
24th has it's reasons to be one of the great days of the year.
Happy returns @sachin_rt have a blessed year.
This land misses u Dr.RajKumar Sir
ಅಂದಹಾಗೆ, ಸುದೀಪ್, ದರ್ಶನ್ ಜೊತೆಗೆ ನಟ ಉಪೇಂದ್ರ, ಜಗ್ಗೇಶ್, ಧನಂಜಯ್, ರವಿಶಂಕರ್, ಶರಣ್, ರಾಗಿಣಿ ದ್ವಿವೇದಿ, ಶಾನ್ವಿ, ನಿರ್ದೇಶಕ ಪವನ್ ಒಡೆಯರ್ ಸೇರಿದಂತೆ ಹಲವು ಸಿನಿ ಗಣ್ಯರು ಟ್ವಿಟ್ಟರ್ ಖಾತೆಯಲ್ಲಿ ಶುಭಕೋರಿದ್ದಾರೆ.
ಅಣ್ಣಾವ್ರ ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ಸಮಾಧಿ ಇರುವ ಕಂಠೀರವ ಸ್ಟುಡಿಯೋದಲ್ಲಿ ರಕ್ತದಾನ ಹಾಗೂ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. 'ನಟ ಸಾರ್ವಭೌಮ'ನ ಜನ್ಮದಿನವನ್ನು ಅಭಿಮಾನಿಗಳು ಇಂದು ಅರ್ಥಪೂರ್ಣವಾಗಿ ಆಚರಿಸಿದರು.
ಡಾ.ರಾಜ್ ಕುಮಾರ್ ಇಂದು ನಮ್ಮೊಂದಿಗೆ ಇಲ್ಲದೇ ಇದ್ದರೂ, ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಇನ್ನೂ ಅಜರಾಮರ ಅನ್ನೋದಕ್ಕೆ ಇದೇ ಸಾಕ್ಷಿ.