Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊಡಗು ಜನತೆಯ ನೆರವಿಗೆ ನಿಂತ 'ಡಿ-ಬಾಸ್' ಮತ್ತು 'ಕಿಚ್ಚ ಸುದೀಪ್'
Recommended Video
ಧಾರಾಕಾರ ಮಳೆ ಹಾಗೂ ಜಲಾಶಯಗಳು ಭರ್ತಿಯಾಗಿರುವುದರ ಪರಿಣಾಮ ಕೊಡಗು ಜಿಲ್ಲೆ ಸಂಪೂರ್ಣವಾಗಿ ಜಲಾವೃತವಾಗುತ್ತಿದೆ. ಮನೆಗಳು ಕುಸಿಯುತ್ತಿದೆ. ಗುಡ್ಡಗಳು ಉರುಳುತ್ತಿದೆ.
ಕೊಡಗಿನ ಜನರು ಮನೆ ಮಠ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಜನರ ಪ್ರಾಣಹಾನಿ ಕೂಡ ಆಗಿದೆ. ಈಗ ಕೊಡಗಿನ ಜನರ ನೆರವಿಗೆ ಕರ್ನಾಟಕದ ವಿವಿಧ ಭಾಗದಲ್ಲಿರುವ ಜನರು ನೆರವಾಗುತ್ತಿದ್ದಾರೆ.
ಆಹಾರ, ಬಟ್ಟೆ, ಹಣಕಾಸು ಹೀಗೆ ಎಲ್ಲವನ್ನು ಸೇರಿಸಿ ಕೊಡಗಿನವರಿಗೆ ತಲುಪಿಸುವಂತಹ ಕೆಲಸವನ್ನ ಮಾಡುತ್ತಿದ್ದಾರೆ. ಇಂತಹ ಒಳ್ಳೆಯ ಕೆಲಸಕ್ಕೆ ಸ್ಯಾಂಡಲ್ ವುಡ್ ಚಕ್ರವರ್ತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಕೈ ಜೋಡಿಸಿರುವುದು ನಿಜಕ್ಕೂ ವಿಶೇಷ. ಮುಂದೆ ಓದಿ.....
ಕೊಡಗಿನ ಜನತೆಗೆ ಬೆಂಬಲ ನೀಡಿದ ಸ್ಟಾರ್ಸ್
ಕೊಡಗು ಜಿಲ್ಲೆ ಪೂರ್ತಿ ಮಳೆಯಿಂದಾಗಿ ಜಲಾವೃತವಾಗಿದೆ. ದಿನನಿತ್ಯ ಜೀವನ ಕಷ್ಟಕರವಾಗಿದೆ. ಹೀಗಾಗಿ, ಅವರಿಗೆ ನೆರವಾಗಿ, ಸಹಾಯ ಮಾಡಿ ಎಂದು ತಮ್ಮ ಅಭಿಮಾನಿಗಳನ್ನ ಮನವಿ ಮಾಡಿಕೊಂಡಿದ್ದಾರೆ ಕನ್ನಡ ಸ್ಟಾರ್ ನಟರು. ದರ್ಶನ್ ಮತ್ತು ಸುದೀಪ್ ಇಬ್ಬರು ಕೊಡಗಿನ ಜನತೆಗೆ ನೆರವು ನೀಡಿ ಎಂದು ಟ್ವಿಟ್ಟರ್ ನಲ್ಲಿ ಕೇಳಿಕೊಂಡಿದ್ದಾರೆ.
ಕೊಡಗಿನಲ್ಲಿ ಜಲಪ್ರಳಯ, ಕಣ್ಣೆದುರೇ ಕುಸಿಯುತ್ತಿವೆ ಮನೆ, ಗುಡ್ಡ, ಕಾಫಿತೋಟ
ಡಿ ಬಾಸ್ ದರ್ಶನ್ ಮನವಿ
''ಕೊಡಗಿನ ಎಲ್ಲ ಜನರಿಗೆ ನಮ್ಮ ಸಹಾಯ ಮತ್ತು ಬೆಂಬಲ ಅಗತ್ಯವಿದೆ. ನಮ್ಮಿಂದ ಸಾಧ್ಯವಾದಷ್ಟು ಅವರಿಗೆ ನೆರವಾಗೋಣ. ನನ್ನ ಸಂಪೂರ್ಣ ಬೆಂಬಲ ಕೊಡಗಿನ ಜನರಿಗೆ ಇದೆ'' ಎಂದು ಟ್ವೀಟ್ ಮಾಡಿರುವ ದರ್ಶನ್ ಬೆಂಗಳೂರು ಮತ್ತು ಗೋಣಿಕೊಪ್ಪಲ್ ಪ್ರದೇಶದಲ್ಲಿರುವ ಸಹಾಯ ಕೇಂದ್ರಗಳ ವಿಳಾಸ ಹಂಚಿಕೊಂಡಿದ್ದಾರೆ. ಸಹಾಯ ಮಾಡಲು ಬಯಸುವವರು ದಯವಿಟ್ಟು ನೆರವು ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಮಡಿಕೇರಿ ಮಳೆಯಲ್ಲಿ ಸಿಲುಕಿದವರ ಕರುಣಾಜನಕ ಕಥೆ
ಅಭಿಮಾನಿಗಳಲ್ಲಿ ಸುದೀಪ್ ಮನವಿ
''ನನ್ನ ಎಲ್ಲ ಅಭಿಮಾನಿ ಸಂಘಟನೆಗಳಿಗೂ ನನ್ನದೊಂದು ಕೋರಿಕೆ. ಮಳೆಯಲ್ಲಿ ಸಿಲುಕಿರುವ ಜನರಿಗೆ ಎಷ್ಟು ಸಾಧ್ಯವೋ ಅಷ್ಟು ಸಹಾಯ ಮಾಡಿ. ಇದು ನೀವು ನನಗೆ ನೀಡುವ ಬಹುದೊಡ್ಡ ಉಡುಗೊರೆ ಎಂದುಕೊಳ್ಳುತ್ತೇನೆ. ಅವರೆಲ್ಲರೂ ನಮ್ಮ ಜನ. ದಯವಿಟ್ಟು ನಿಮ್ಮಿಂದ ಆದಷ್ಟು ಸಹಾಯ ಮಾಡಿ. ಸರ್ಕಾರ ಕೂಡ ಈ ಬಗ್ಗೆ ಗಮನಿಸಿ ನೆರವು ನೀಡಿ'' ಎಂದು ಕಿಚ್ಚ ಸುದೀಪ್ ಮನವಿ ಮಾಡಿಕೊಂಡಿದ್ದಾರೆ.
ಸಂಘಟನೆಗಳು ಮನಸ್ಸು ಮಾಡಿದ್ರೆ ಸಾಧ್ಯ
ದರ್ಶನ್ ಮತ್ತು ಸುದೀಪ್ ಇಬ್ಬರು ಕರ್ನಾಟಕದಲ್ಲಿ ಅತಿ ದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟರು. ಸ್ವತಃ ನಟರೇ ಮನವಿ ಮಾಡಿಕೊಂಡಿರುವುದರಿಂದ ಖಂಡಿತವಾಗಿಯೂ ಅವರ ಅಭಿಮಾನಿ ಸಂಘಟನೆಗಳು ಕೊಡಗಿನ ಜನತೆಗೆ ನೆರವಾಗಲಿದ್ದಾರೆ. ದರ್ಶನ್ ಮತ್ತು ಸುದೀಪ್ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಫ್ಯಾನ್ಸ್ ''ನೀವು ಹೇಳಿದ ಪಕ್ಕಾ ಮಾಡ್ತೀವಿ'' ಎಂದು ಖುಷಿ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಯಾವ ನಟರ ಅಭಿಮಾನಿಗಳು ಎನ್ನದೇ ಚಿತ್ರರಂಗದ ಎಲ್ಲ ನಟರು ಅಭಿಮಾನಿಗಳು ಕೊಡಗು ಜನರ ನೆರವಿಗೆ ಬರಬೇಕಿದೆ.