Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೆಡಿಎಸ್ ಕಾರ್ಯಕ್ರಮದಲ್ಲಿ ದರ್ಶನ್-ಯಶ್ ಸಿನಿಮಾ ಹಾಡುಗಳು ಬ್ಯಾನ್
Recommended Video
ಮಂಡ್ಯ ಲೋಕಸಭಾ ಚುನಾವಣೆಯ ಸೋಲಿನ ಸಿಟ್ಟು ಜೆಡಿಎಸ್ ಗೆ ಇನ್ನೂ ಕಮ್ಮಿ ಆದಂತೆ ಕಾಣುತ್ತಿಲ್ಲ. ಮಂಡ್ಯದಲ್ಲಿ ಸುಮಲತಾ ಪರವಾಗಿ ಜೋಡೆತ್ತುಗಳು ನಡೆದ ಪ್ರಚಾರದ ಬಿಸಿ ಇನ್ನು ಆರಿಲ್ಲ. ನಿಖಿಲ್ ಕುಮಾರ್ ನನ್ನು ಸೋಲಿಸಿದ ಸೇಡನ್ನು ಜೆಡಿಎಸ್ ಬೇರೆ ಬೇರೆ ವಿಧಾನದ ಮೂಲಕ ತೀರಿಸಿಕೊಳ್ಳುತ್ತಿದೆ.
ಇತ್ತೀಚಿಗೆ ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯಾ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಇದು ಹೆಚ್ ಡಿ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ನಡೆದ ಕಾರ್ಯಕ್ರವಾದ್ದರಿಂದ ಇಲ್ಲಿ ದರ್ಶನ್ ಮತ್ತು ಯಶ್ ಚಿತ್ರಗಳ ಹಾಡುಗಳನ್ನು ಬ್ಯಾನ್ ಮಾಡಲಾಗಿತ್ತು.
ದರ್ಶನ್ ಚಿತ್ರಕ್ಕೆ 'ಬಾಹುಬಲಿ' ಸಂಗೀತ ನಿರ್ದೇಶಕ ಸಾಥ್
ಆಯೋಜಕರು ಮೊದಲೇ ಯಶ್ ಮತ್ತು ದರ್ಶನ್ ಚಿತ್ರಗಳ ಹಾಡುಗಳನ್ನು ಹಾಡಬಾರದೆಂದು ಗಾಯಕರಿಗೆ ತಾಕೀತು ಮಾಡಿದ್ದರಂತೆ. ಹಾಗಾಗಿ ಗಾಯಕರು ಜೋಡೆತ್ತುಗಳ ಚಿತ್ರಗಳ ಹಾಡನ್ನು ಬಿಟ್ಟು ಉಳಿದೆಲ್ಲ ಹಾಡುಗಳನ್ನು ಹಾಡುತ್ತಿದ್ದರು. ದರ್ಶನ್ ಮತ್ತು ಯಶ್ ಚಿತ್ರಗಳ ಹಾಡು ಈಗ ಬರಹುದು, ಕೆಲವೇ ಕ್ಷಣದಲ್ಲಿ ಹಾಡಬಹುದು ಎಂದು ಕಾದು ಕಾದು ಸುಸ್ತಾದ ಅಭಿಮಾನಿಗಳು ಡಿ ಬಾಸ್ ಮತ್ತು ಯಶ್ ಹಾಡುಗಳು ಎಂದು ಕೂಗಲು ಪ್ರಾರಂಭಿಸಿದರು.
ಅಭಿಮಾನಿಗಳ ಕೂಗು ಮುಗಿಲು ಮುಟ್ಟಿತ್ತು. ಆದ್ರೂ ಕೂಡ ಸಂಗೀತ ರಸ ಸಂಜೆ ಕಾರ್ಯಕ್ರಮದಲ್ಲಿ ಜೋಡೆತ್ತುಗಳ ಹಾಡು ಕೇಳಿಸಲೇ ಇಲ್ಲ. ಇದರಿಂದ ಬೇಸರಗೊಂಡಂತಹ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ಹೊರಹಾಕುತ್ತಿದ್ದಾರೆ. ನಟರಿಬ್ಬರ ವಿರುದ್ಧ ಪದೇ ಪದೇ ಅಸಮಾಧಾನ ಹೊರಹಾಕುತ್ತಿರುವುದು ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿದೆ.