Don't Miss!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜೋಡಿ ಎತ್ತು'ಗಳ ಅಬ್ಬರದ ಪ್ರಚಾರ: ಮಂಡ್ಯದಲ್ಲಿ ಅಂಬಿ ಪತ್ನಿ ಶಕ್ತಿ ಪ್ರದರ್ಶನ
Recommended Video
'ನಾನು ಒಬ್ಬನೇ ಅಲ್ಲ, ನನ್ನ ಜೊತೆ ನಮ್ಮ ಹೀರೋ (ಯಶ್) ಇದ್ದಾರೆ. ನಾವು ಜೋಡಿ ಎತ್ತುಗಳು' ಎಂದು ನಟ ದರ್ಶನ್ ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ಆ ಮಾತಿನ ಮೂಲಕ ಮಂಡ್ಯ ಅಖಾಡದಲ್ಲಿ ಈ ಜೋಡಿ ಎತ್ತುಗಳು ಸುಮಲತಾ ಪರ ಅಬ್ಬರದ ಪ್ರಚಾರ ಮಾಡ್ತಾರೆ ಎಂಬ ಸುಳಿವು ಸಿಕ್ಕಿತ್ತು.
ಅದರಂತೆ ಇಂದು ಮಂಡ್ಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ರಸ್ತೆಗಿಳಿದಿದ್ದಾರೆ. ಮಂಡ್ಯದ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ನಟಿ ಸುಮಲತಾ ಅಂಬರೀಶ್, ಅಲ್ಲಿಂದ ಸಿಲ್ವರ್ ಜ್ಯುಬ್ಲಿ ಪಾರ್ಕ್ ಗೆ ರೋಡ್ ಶೋ ಮೂಲಕ ಆಗಮಿಸುತ್ತಿದ್ದು, ಅಂಬಿ ಪತ್ನಿಗೆ ಜೋಡಿ ಎತ್ತುಗಳಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ.
'ಸುಮ್ಮನೆ ಮನೆಯಲ್ಲಿರಿ' ಸ್ಟಾರ್ ನಟರಿಗೆ ಎಚ್ಚರಿಕೆ ನೀಡಿದ ಕೆ.ಆರ್ ಪೇಟೆ ಶಾಸಕ
ಎಡಕ್ಕೆ ದರ್ಶನ್ ಮತ್ತು ಬಲಕ್ಕೆ ನಟ ಯಶ್ ನಿಂತು ಸುಮಲತಾ ಅವರನ್ನ ಮೆರವಣಿಗೆಯ ಮೂಲಕ ಸಾರ್ವಜನಿಕ ಸಭೆಗೆ ಕರೆದುಕೊಂಡು ಬರ್ತಿದ್ದಾರೆ. ಈ ರೋಡ್ ಶೋ ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಮಂಡ್ಯ ಅಖಾಡ ನಿಜಕ್ಕೂ ರಂಗೇರಿದೆ.
ಅಂದು ಸುದೀಪ್ ತೆಗೆದುಕೊಂಡ ನಿರ್ಧಾರ ಸುಮಲತಾ ಪರ ಪ್ರಚಾರಕ್ಕೆ ಹೋಗದಂತೆ ಕೈ ಕಟ್ಟಿಹಾಕಿದ್ಯಾ?
ಅಂದ್ಹಾಗೆ, ಸುಮಲತಾ ಅವರ ಪರ ದರ್ಶನ್ ಮತ್ತು ಯಶ್ ಅವರ ಮೊದಲ ಪ್ರಚಾರ ಇದಾಗಿದ್ದು, ಆರಂಭದಲ್ಲೇ ತಮ್ಮ ಶಕ್ತಿ ಪ್ರದರ್ಶನ ಮಾಡ್ತಿದ್ದಾರೆ. ಇನ್ನು ಸುಮಲತಾ ಅವರ ಪರ ಸಂಪೂರ್ಣ ಬೆಂಬಲ ನೀಡಿರುವ ಯಶ್ ಮತ್ತು ದರ್ಶನ್ ಎಲ್ಲ ದಿನವೂ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ.