TRENDING ON ONEINDIA
-
ಸಾಕ್ಷ್ಯಾಧಾರ ಇಲ್ಲದೆ ಪಾಕಿಸ್ತಾನವನ್ನು ದೂಷಿಸಬೇಡಿ ಎಂದ ಚೀನಾ
-
7 ಸೀಟರ್ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ ಕಿಯಾ ಕಾರ್ನಿವಾಲ್
-
ಯಾವುದೇ ಆಪ್ಗಳ ಕ್ಯಾಶೆ ಕ್ಲಿಯರ್ ಮಾಡುತ್ತಿರಬೇಕು ಏಕೆ ಮತ್ತು ಹೇಗೆ?
-
'ಬೆಲ್ ಬಾಟಮ್' ಪಾಸು, 'ಕೆಮಿಸ್ಟ್ರಿ ಆಫ್ ಕರಿಯಪ್ಪ'ನ ಫಾರ್ಮೂಲಾ ವರ್ಕೌಟ್
-
ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
-
ಮುಖಮೈಥುನ ನಡೆಸುವ ಪುರುಷರಿಗೆ 'ಬಾಯಿ-ಗಂಟಲ ಕ್ಯಾನ್ಸರ್' ಬರಬಹುದು!
-
ಅಭಿಮಾನಿಗಳಿಂದ ಕೊಹ್ಲಿ-ಎಬಿಡಿ ಪೋಸ್ಟರ್ಗೆ ಹಾಲಭಿಷೇಕ: ವಿಡಿಯೋ
-
ಐಟಿಐ ಲಿಮಿಟೆಡ್ ನಲ್ಲಿ ಕಾನೂನು ಪದವಿ ಅಭ್ಯರ್ಥಿಗೆ ಉದ್ಯೋಗಾವಕಾಶ
ಪತ್ನಿ ಮೇಲೆ ಹಲ್ಲೆ ಪ್ರಕರಣ; ದರ್ಶನ್ ಗೆ ಕ್ಲೀನ್ ಚಿಟ್
ಸೆಪ್ಟೆಂಬರ್ 8, 2011ರಲ್ಲಿ ದರ್ಶನ್ ಅವರು ಪತ್ನಿಯ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದರು. ಪತ್ನಿಯನ್ನು ಸಿಗರೇಟ್ ನಿಂದ ಗಾಯಗೊಳಿಸಿದ್ದರು. ತಮ್ಮ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದರು ಎಂದು ಆರೋಪಿಸಿ ವಿಜಯನಗರ ಪೊಲೀಸ್ ಠಾಣೆಗೆ ಸೆಪ್ಟಂಬರ್ 9, 2011ರಲ್ಲಿ ದೂರು ನೀಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷ್ಮಿಗಳನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿತ್ತು. ದರ್ಶನ್ ಪತ್ನಿ ವಿಜಯಲಕ್ಷ್ಮಿ, ಅವರ ಅತ್ತೆ ಸುಮತಿ ಹಾಗೂ ಕಾರಿನ ಚಾಲಕ ಲಕ್ಷ್ಮಣ್ ಈ ಪ್ರಕರಣ ಪ್ರಮುಖ ಸಾಕ್ಷಿಗಳಾಗಿದ್ದರು.
ವಿಚಾರಣೆ ವೇಳೆಯಲ್ಲಿ ವಿಜಲಕ್ಷ್ಮಿ ಅವರು, "ತಮ್ಮ ಪತಿ ಸಿಗರೇಟ್ ಸೇದುತ್ತಿರಬೇಕಾದರೆ ಆಕಸ್ಮಿಕವಾಗಿ ಅದು ತಮ್ಮ ಮುಖಕ್ಕೆ ತಗುಲಿ ಸುಟ್ಟ ಗಾಯವಾಯಿತು. ಹಾಗೆಯೇ ಅವರು ಕಾರಿನ ಬಾಗಿಲು ತೆಗೆಯಬೇಕಾದರೆ ಆಕಸ್ಮಿಕವಾಗಿ ಅದರ ಬಾಗಿಲು ಮಗುವಿಗೆ ತಗುಲಿತು" ಎಂದು ಹೇಳಿದ್ದಾರೆ.
ಇನ್ನು ದರ್ಶನ್ ಅವರ ಅತ್ತೆ ಸುಮತಿ ಅವರು, "ನಾನು ಪೊಲೀಸರ ಮುಂದೆ ಯಾವುದೇ ಹೇಳಿಕೆ ಕೊಟ್ಟಿಲ್ಲ. ದರ್ಶನ್ ಅವರು ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ" ಎಂದಿದ್ದಾರೆ.
ದರ್ಶನ್ ಅವರ ಕಾರು ಚಾಲಕ ಲಕ್ಷ್ಮಣ್, "ಆ ದಿನ ಏನು ನಡೆಯಿತೋ ನನಗೆ ಗೊತ್ತಾಗಲಿಲ್ಲ. ಯಾಕೆಂದರೆ ನಾನು ಕಾರಿನಿಂದ ಹೊರಗಿದ್ದೆ. ಕಾರಿನ ಒಳಗಡೆ ಏನು ನಡೆಯಿತು ಎಂದು ತಿಳಿಯಲಿಲ್ಲ" ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರು ಕೊಟ್ಟಂತಹ ಹೇಳಿಕೆಗಳನ್ನು ಆಧರಿಸಿ ಕೋರ್ಟ್ ದರ್ಶನ್ ಅವರನ್ನು ಖುಲಾಸೆಗೊಳಿಸಿದೆ. ಮೊನ್ನೆಯಷ್ಟೇ (ಫೆ.16) 36ನೇ ಹುಟ್ಟುಹಬ್ಬ ಆಚರಿಸಿಕೊಂಡ ದರ್ಶನ್ ಅವರಿಗೆ ಬರ್ತ್ ಡೇ ಗಿಫ್ಟ್ ಸಿಕ್ಕಂತಾಗಿದೆ. ಮುಟ್ಟುಗೋಲು ಹಾಕಿಕೊಂಡಿರುವ ಅವರ ಗನ್ನನ್ನು 30 ದಿನಗಳ ಒಳಗಾಗಿ ಹಿಂತಿರುಗಿಸುವಂತೆ ವಿಜಯನಗರ ಪೊಲೀಸರಿಗೆ ಕೋರ್ಟ್ ಅದೇಶಿಸಿದೆ.
ಸೆಪ್ಟಂಬರ್ 9, 2011ರಂದು ಪತ್ನಿ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕ ಹಲ್ಲೆ ಆರೋಪದಡಿ ವಿಜಯನಗರ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಅಕ್ಟೋಬರ್ 7, 2011ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಘಟನೆ ನಡೆದ 16 ತಿಂಗಳ ನಂತರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. (ಏಜೆನ್ಸೀಸ್)