Don't Miss!
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತ್ನಿ ಮೇಲೆ ಹಲ್ಲೆ ಪ್ರಕರಣ; ದರ್ಶನ್ ಗೆ ಕ್ಲೀನ್ ಚಿಟ್
ಸೆಪ್ಟೆಂಬರ್ 8, 2011ರಲ್ಲಿ ದರ್ಶನ್ ಅವರು ಪತ್ನಿಯ ಮೇಲೆ ಮಾರಾಣಾಂತಿಕ ಹಲ್ಲೆ ಮಾಡಿದ್ದರು. ಪತ್ನಿಯನ್ನು ಸಿಗರೇಟ್ ನಿಂದ ಗಾಯಗೊಳಿಸಿದ್ದರು. ತಮ್ಮ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದರು ಎಂದು ಆರೋಪಿಸಿ ವಿಜಯನಗರ ಪೊಲೀಸ್ ಠಾಣೆಗೆ ಸೆಪ್ಟಂಬರ್ 9, 2011ರಲ್ಲಿ ದೂರು ನೀಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾಕ್ಷ್ಮಿಗಳನ್ನು ನ್ಯಾಯಾಲಯ ಪರಿಗಣನೆಗೆ ತೆಗೆದುಕೊಂಡಿತ್ತು. ದರ್ಶನ್ ಪತ್ನಿ ವಿಜಯಲಕ್ಷ್ಮಿ, ಅವರ ಅತ್ತೆ ಸುಮತಿ ಹಾಗೂ ಕಾರಿನ ಚಾಲಕ ಲಕ್ಷ್ಮಣ್ ಈ ಪ್ರಕರಣ ಪ್ರಮುಖ ಸಾಕ್ಷಿಗಳಾಗಿದ್ದರು.
ವಿಚಾರಣೆ ವೇಳೆಯಲ್ಲಿ ವಿಜಲಕ್ಷ್ಮಿ ಅವರು, "ತಮ್ಮ ಪತಿ ಸಿಗರೇಟ್ ಸೇದುತ್ತಿರಬೇಕಾದರೆ ಆಕಸ್ಮಿಕವಾಗಿ ಅದು ತಮ್ಮ ಮುಖಕ್ಕೆ ತಗುಲಿ ಸುಟ್ಟ ಗಾಯವಾಯಿತು. ಹಾಗೆಯೇ ಅವರು ಕಾರಿನ ಬಾಗಿಲು ತೆಗೆಯಬೇಕಾದರೆ ಆಕಸ್ಮಿಕವಾಗಿ ಅದರ ಬಾಗಿಲು ಮಗುವಿಗೆ ತಗುಲಿತು" ಎಂದು ಹೇಳಿದ್ದಾರೆ.
ಇನ್ನು ದರ್ಶನ್ ಅವರ ಅತ್ತೆ ಸುಮತಿ ಅವರು, "ನಾನು ಪೊಲೀಸರ ಮುಂದೆ ಯಾವುದೇ ಹೇಳಿಕೆ ಕೊಟ್ಟಿಲ್ಲ. ದರ್ಶನ್ ಅವರು ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ" ಎಂದಿದ್ದಾರೆ.
ದರ್ಶನ್ ಅವರ ಕಾರು ಚಾಲಕ ಲಕ್ಷ್ಮಣ್, "ಆ ದಿನ ಏನು ನಡೆಯಿತೋ ನನಗೆ ಗೊತ್ತಾಗಲಿಲ್ಲ. ಯಾಕೆಂದರೆ ನಾನು ಕಾರಿನಿಂದ ಹೊರಗಿದ್ದೆ. ಕಾರಿನ ಒಳಗಡೆ ಏನು ನಡೆಯಿತು ಎಂದು ತಿಳಿಯಲಿಲ್ಲ" ಎಂದು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೂವರು ಕೊಟ್ಟಂತಹ ಹೇಳಿಕೆಗಳನ್ನು ಆಧರಿಸಿ ಕೋರ್ಟ್ ದರ್ಶನ್ ಅವರನ್ನು ಖುಲಾಸೆಗೊಳಿಸಿದೆ. ಮೊನ್ನೆಯಷ್ಟೇ (ಫೆ.16) 36ನೇ ಹುಟ್ಟುಹಬ್ಬ ಆಚರಿಸಿಕೊಂಡ ದರ್ಶನ್ ಅವರಿಗೆ ಬರ್ತ್ ಡೇ ಗಿಫ್ಟ್ ಸಿಕ್ಕಂತಾಗಿದೆ. ಮುಟ್ಟುಗೋಲು ಹಾಕಿಕೊಂಡಿರುವ ಅವರ ಗನ್ನನ್ನು 30 ದಿನಗಳ ಒಳಗಾಗಿ ಹಿಂತಿರುಗಿಸುವಂತೆ ವಿಜಯನಗರ ಪೊಲೀಸರಿಗೆ ಕೋರ್ಟ್ ಅದೇಶಿಸಿದೆ.
ಸೆಪ್ಟಂಬರ್ 9, 2011ರಂದು ಪತ್ನಿ ವಿಜಯಲಕ್ಷ್ಮಿ ಮೇಲೆ ಮಾರಣಾಂತಿಕ ಹಲ್ಲೆ ಆರೋಪದಡಿ ವಿಜಯನಗರ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದರು. ಅಕ್ಟೋಬರ್ 7, 2011ರಂದು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ಘಟನೆ ನಡೆದ 16 ತಿಂಗಳ ನಂತರ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. (ಏಜೆನ್ಸೀಸ್)