Don't Miss!
- Lifestyle ಹೋಳಿ ದಿನ ಸ್ಕೂಟಿಯಲ್ಲಿ ಟೈಟಾನಿಕ್ ಪೋಸ್ ನೀಡಿ ದೊಪ್ಪೆಂದು ಬಿದ್ದ ಹುಡುಗಿಗೆ ಬಿತ್ತು ದುಬಾರಿ ಫೈನ್
- News ಮಳೆ ಬರದೇ ಇದ್ದರೆ ಮುಗೀತು ಕಥೆ!
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಪ್ಲೈಯರ್ ಮಾತ್ರವಲ್ಲ ಇನ್ನೊಬ್ಬ ವ್ಯಕ್ತಿಗೂ ಹಲ್ಲೆ, ಆತ ಕೋಮಾದಲ್ಲಿದ್ದ': ಇಂದ್ರಜಿತ್
25 ಕೋಟಿ ವಂಚನೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತವಾಗಿ ಮೂರ್ನಾಲ್ಕು ದಿನದಿಂದ ಸುದ್ದಿಯಲ್ಲಿದ್ದ ನಟ ದರ್ಶನ್ ವಿರುದ್ಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ಗುರುವಾರ ಬೆಳಗ್ಗೆ ಗಂಭೀರ ಆರೋಪ ಮಾಡಿದರು. ಮೈಸೂರು ಸಂದೇಶ್ ಹೋಟೆಲ್ನಲ್ಲಿ ಸಪ್ಲೈಯರ್ ಮೇಲೆ ಹಲ್ಲೆ ಮಾಡಿದ್ದು, ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ ಎಂದು ದೂರಿದರು. ಈ ಸಂಬಂಧ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಕ್ರಮ ಜರುಗಿಸುವಂತೆ ಮನವಿ ಮಾಡಿದರು.
ಇದಾದ ಕೆಲವು ಗಂಟೆಗಳ ಬಳಿಕ ತಮ್ಮ ಮನೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ ಲಂಕೇಶ್ ಮತ್ತೊಂದು ಹಲ್ಲೆ ಘಟನೆ ಬಿಚ್ಚಿಟ್ಟರು. ಹೋಟೆಲ್ ಸಪ್ಲೈಯರ್ ಮಾತ್ರವಲ್ಲ ಗೋಪಾಲ್ ರಾಜ್ ಎಂಬ ಸ್ನೇಹಿತನನ್ನು ಥಳಿಸಿದ್ದು, ಆತ ಕೋಮಾಗೆ ಹೋಗಿದ್ದ ಎಂದು ಬಾಂಬ್ ಸಿಡಿಸಿದರು. ಮುಂದೆ ಓದಿ....
ಇಂದ್ರಜಿತ್ ಕೊಟ್ಟ ದೂರಿನಲ್ಲಿ ದರ್ಶನ್ ಹೆಸರೇ ಇಲ್ಲ: ಮನವಿ ಪತ್ರದಲ್ಲಿ ಏನಿದೆ?
ಗೋಪಾಲ್ ರಾಜ್ ಮೇಲೆ ಡಿ ಬಾಸ್ ಹಲ್ಲೆ?
ಜುಲೈ 3 ರಂದು ಮೈಸೂರಿನಲ್ಲಿ ತಮ್ಮದೇ ಬಳಗದಲ್ಲಿದ್ದ ಗೋಪಾಲ್ ರಾಜ್ ಎಂಬ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದರು. ಅದರ ಪರಿಣಾಮ ಅವರು ಕೋಮಾಗೆ ಹೋಗಿದ್ದರು ಎಂದು ಇಂದ್ರಜಿತ್ ಲಂಕೇಶ್ ಪ್ರೆಸ್ಮೀಟ್ನಲ್ಲಿ ಆರೋಪಿಸಿದರು.
ಹಲ್ಲೆ ನಿರಾಕರಿಸಿದರ ಗೋಪಾಲ್
ಗೋಪಾಲ್ ರಾಜ್ ಕೋಮಾದಲ್ಲಿದ್ದರು ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ ಕೆಲವೇ ಗಂಟೆಗಳಲ್ಲಿ ಆ ವ್ಯಕ್ತಿ ಟಿವಿ 9 ಸುದ್ದಿ ಮಾಧ್ಯಮದ ಎದುರು ಪ್ರತ್ಯಕ್ಷವಾದರು. ''ಇಂದ್ರಜಿತ್ ಹೇಳುವಂತೆ ಯಾವ ಘಟನೆಯೂ ನಡೆದಿಲ್ಲ, ನಾನು ಕೋಮಾಗೂ ಹೋಗಲಿಲ್ಲ. ಅದೆಲ್ಲ ಸುಳ್ಳು. ನಾವಿಬ್ಬರು ಚೆನ್ನಾಗಿಯೇ ಇದ್ದೇವೆ'' ಎಂದು ಸ್ಪಷ್ಟನೆ ಕೊಟ್ಟರು.
ಅರುಣಾಕುಮಾರಿ ಪ್ರಕರಣ: ದರ್ಶನ್ ಮತ್ತು ಸ್ನೇಹಿತರ ವಿರುದ್ಧ ಸಿಡಿದೆದ್ದ ಇಂದ್ರಜಿತ್
ತೋಟದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ
ಮೈಸೂರಿನಲ್ಲಿರುವ ತಮ್ಮದೇ ತೋಟದಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯೂ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದರು ಎಂದು ಇಂದ್ರಜಿತ್ ಪ್ರೆಸ್ಮೀಟ್ ನಲ್ಲಿ ದೂರಿದ್ದಾರೆ. ನಂತರ ಆ ವ್ಯಕ್ತಿಯನ್ನು ಕೆಲಸದಿಂದ ತೆಗೆದು ಹಾಕಿದರು ಎಂದು ಹೇಳಿದ್ದಾರೆ.
Recommended Video
ಸಂದೇಶ್ ಹೋಟೆಲ್ ಸಪ್ಲೈಯರ್ ಪಂಜಾಬಿ ಅಲ್ಲ
ದರ್ಶನ್ ಗಲಾಟೆ ಮಾಡಿದ ಸಂದರ್ಭದಲ್ಲಿದ್ದ ವೇಟರ್ ಕನ್ನಡದವನ್ನಲ್ಲ, ಆತನ ಪಂಜಾಬಿ ಮೂಲದವನು ಎಂದು ಮಾಲೀಕ ಸಂದೇಶ್ ತಿಳಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿರುವ ಇಂದ್ರಜಿತ್ ಲಂಕೇಶ್ ''ಆತ ಪಂಜಾಬಿಯಲ್ಲ, ಗಂಗಾಧರ್ ಎನ್ನುವ ಕನ್ನಡದವನೇ, ಆತನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ'' ಎಂದು ತಿರುಗೇಟು ಕೊಟ್ಟು ತನಿಖೆ ಮಾಡಲಿ ಸತ್ಯ ಹೊರಬರುತ್ತದೆ ಎಂದಿದ್ದಾರೆ.