Don't Miss!
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Sports Hardik Pandya: ಹಾರ್ದಿಕ್ ಪಾಂಡ್ಯರಲ್ಲಿನ ನಾಯಕತ್ವದ ಗುಣಗಳು ಕಾಣೆಯಾಗಿವೆಯಾ?
- Finance ಕಳೆದ 5 ವರ್ಷಗಳಲ್ಲಿ ಸಂಸದ ಡಿಕೆ ಸುರೇಶ್ ಅವರ ಆಸ್ತಿ 75% ರಷ್ಟು ಹೆಚ್ಚಳ, ವಿವರ
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉರ್ದು ನಂತರ ತಮಿಳು ಭಾಷೆಯಲ್ಲಿ ಮತಯಾಚಿಸಿದ ನಟ ದರ್ಶನ್
Recommended Video
ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತಭೇಟೆ ಮುಂದುವರಿಸಿದ್ದು, ವೇಷಭೂಷಣ, ನಡೆ, ನುಡಿ ಮೂಲಕ ಸುದ್ದಿಯಾಗುತ್ತಿದ್ದಾರೆ.
ರಸ್ತೆಯಲ್ಲಿ ಅಡ್ಡ ಬಂದ ಗೂಳಿಯನ್ನ ಪಳಗಿಸಿ ಗಮನ ಸೆಳೆದ ದರ್ಶನ್, ಸಾರ್ವಜನಿಕವಾಗಿ ಹಸುವಿನ ಹಾಲು ಕರೆದು ಜೈಕಾರ ಹಾಕಿಸಿಕೊಂಡಿದ್ದರು.
ಇನ್ನು ಪ್ರಚಾರದ ವೇಳೆ ತಲೆಗೆ ಮುಸ್ಲಿಂ ಟೋಪಿ ಹಾಕಿ ಮತ ಕೇಳಿದ್ದ ದರ್ಶನ್, ಉರ್ದು ಭಾಷೆಯಲ್ಲಿ ಭಾಷಣ ಮಾಡಿದ್ದರು. ಇದೀಗ ತಮಿಳಿನಲ್ಲಿ ಪ್ರಚಾರ ಮಾಡಿ ಮತ್ತೆ ಸುದ್ದಿಯಾಗಿದ್ದಾರೆ.
ಹಸುವಿನ ಹಾಲು ಕರೆದು 'ರೈತ' ಎಂದು ಸಾಬೀತು ಮಾಡಿದ ದರ್ಶನ್
ಹೌದು, ಮಂಡ್ಯದ ನಗರದಲ್ಲಿ ಪ್ರಚಾರ ಮಾಡುತ್ತಿದ್ದ ದರ್ಶನ್, ತಮಿಳು ಜನ ಹೆಚ್ಚು ಪ್ರದೇಶದಲ್ಲಿ ತಮಿಳಿನಲ್ಲೇ ಮಾತನಾಡಿದ ಮತಯಾಚನೆ ಮಾಡಿದ್ದಾರೆ. 'ಅಂಬರೀಶ್ ಅವರಿದ್ದಾಗ ನೀವು ಹೇಗೆ ಪ್ರೀತಿಯಿಂದ ಬರಮಾಡಿಕೊಂಡಿದ್ದರೋ ಅದೇ ರೀತಿ ಸುಮಲತಾ ಅವರಿಗೂ ನಿಮ್ಮ ಮತ ನೀಡಿ' ಎಂದು ಕೇಳಿಕೊಂಡಿದ್ದಾರೆ.
ಮಂಡ್ಯ ಪ್ರಚಾರದ ವೇಳೆ ಡೈಲಾಗ್ ಅರ್ಧಕ್ಕೆ ನಿಲ್ಲಿಸಿದ ದರ್ಶನ್, ಕಾರಣವೇನು?
ದರ್ಶನ್ ತಮಿಳಿನಲ್ಲಿ ಮಾತನಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಟೀಕೆ ಮಾಡುತ್ತಿದ್ದಾರೆ. ಅಪಾರ ಅಭಿಮಾನಿಗಳನ್ನ ಹೊಂದಿರುವ ನಟ ದರ್ಶನ್, ವೋಟಿಗಾಗಿ ಈ ಮಟ್ಟಕ್ಕೆ ಇಳಿಯಬಾರದು, ಕನ್ನಡಿಗರ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಕಿಡಿಕಾರುತ್ತಿದ್ದಾರೆ.
ಆದ್ರೆ, ಸ್ಥಳಿಯ ಜನರಿಗೆ ಅವರ ಭಾಷೆಯಲ್ಲಿ ಹೇಳಿದಾಗ ಬೇಗ ಅರ್ಥವಾಗುತ್ತೆ ಎಂಬ ಕಾರಣದಿಂದ ಅವರ ಭಾಷೆಯಲ್ಲಿ ಮಾತನಾಡುವ ಪ್ರಯತ್ನ ಮಾಡುತ್ತೇನೆ ಎಂದು ದರ್ಶನ್ ನಿನ್ನೆಯೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.