Don't Miss!
- News ಆರ್ಥಿಕ ಸಾಮರ್ಥ್ಯ ಆಧರಿಸಿ ಮಗು ಸುಪರ್ದಿ ನಿರ್ಧರಿಸಲಾಗುವುದಿಲ್ಲ-ಹೈಕೋರ್ಟ್ ಆದೇಶ
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ಹೋರಾಟಕ್ಕೆ ಧುಮುಕಿದ ನಟ ದರ್ಶನ್
ಸದ್ಯಕ್ಕೆ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ವಿಜಯೋತ್ಸವದಲ್ಲಿದ್ದಾರೆ. ಈಗ ಕಾವೇರಿ ಜಲವಿವಾದ ಮತ್ತೆ ಭುಗಿಲೆದ್ದಿರುವ ಕಾರಣ ಅವರು ತಮ್ಮ ವಿಜಯಯಾತ್ರೆಯನ್ನು ಅರ್ಧಕ್ಕೆ ನಿಲ್ಲಿಸಿ ಕಾವೇರಿ ಹೋರಾಟಕ್ಕೆ ಧುಮುಕಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, "ಮೊದಲು ನಮ್ಮ ರೈತರಿಗೆ ನೀರು ಸಿಗಲಿ. ಆಮೇಲೆ ಬೇರೆಯವರ ಬಗ್ಗೆ ಯೋಚಿಸೋಣ. ನಮಗೇ ನೀರಿಲ್ಲ ಎಂದ ಮೇಲೆ ಅವರಿಗೆ ಎಲ್ಲಿಂದ ತರುವುದು. ಮೊದಲು ನಮ್ಮ ಪರಿಸ್ಥಿತಿಯನ್ನು ಅವರು ಅರ್ಥಮಾಡಿಕೊಳ್ಳಬೇಕು" ಎಂದರು.
ಕಾನೂನಿಗೆ ಗೌರವ ಕೊಡಬೇಕಾಗುತ್ತದೆ. ಆದರೆ ಅವರು ನಮ್ಮ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು ಎಂದರು. ಕಾವೇರಿ ಹೋರಾಟಕ್ಕೆ ತಮ್ಮ ರಾಯಣ್ಣ ಚಿತ್ರತಂಡ ಸಂಪೂರ್ಣ ಬೆಂಬಲ ಸೂಚಿಸುತ್ತಿದೆ. ಹಾಗಾಗಿ ರಾಯಣ್ಣ ವಿಜಯಯಾತ್ರೆಯನ್ನು ತಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೇವೆ ಎಂದಿದ್ದಾರೆ.
ಡಿಸೆಂಬರ್ 2ರಂದು ಬೆಂಗಳೂರಿನಿಂದ ಹೊರಟ ರಾಯಣ್ಣ ವಿಜಯಯಾತ್ರೆ ಶಿವಮೊಗ್ಗ, ಮೈಸೂರು ಜಿಲ್ಲೆಗಳನ್ನು ತಲುಪಿದೆ. ಅಲ್ಲಿಂದ ಚಾಮರಾಜನಗರ, ಮೈಸೂರು, ಮಂಡ್ಯ, ಮದ್ದೂರು, ರಾಮನಗರ, ಬೆಂಗಳೂರಿಗೆ ವಾಪಸಾಗಬೇಕಿತ್ತು. (ಒನ್ಇಂಡಿಯಾ ಕನ್ನಡ)