Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಕಾರು ಅಪಘಾತ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ
Recommended Video
ಮೈಸೂರು, ನವೆಂಬರ್ 3 : ಕಳೆದ ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿ.ವಿ.ಪುರಂ ಸಂಚಾರ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈ ಅಪಘಾತ ಪ್ರಕರಣ ಸಂಬಂಧ ಮೈಸೂರಿನ 4ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಕುರಿತು ವಿವಿ ಪುರಂ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಎಲ್ಲಾ ವಿಧದಲ್ಲೂ ತನಿಖೆ ನಡೆಸಿದ್ದು, ಇಂಚಿಂಚೂ ಮಾಹಿತಿ ಕಲೆ ಹಾಕಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ದರ್ಶನ್ ಕಾರು ಅಪಘಾತ: 'ಡಿ-ಬಾಸ್'ಗೆ ಆಘಾತ ನೀಡಿದ ವೈದ್ಯರ ಸಲಹೆ
ಪೊಲೀಸರು ಅಪಘಾತದ ಮಾಹಿತಿಯನ್ನು ಚಾರ್ಜ್ ಶೀಟ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಆ ಕಾರನ್ನು ಅವರ ಗೆಳೆಯ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದನ್ನು ಉಲ್ಲೇಖಿಸಲಾಗಿದೆ.
ಮೈಸೂರಿನಲ್ಲಿ ತಡರಾತ್ರಿ ಖಾಸಗಿ ಹೋಟೆಲ್ ನಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ರಿಂಗ್ ರಸ್ತೆಯ ಜಂಕ್ಷನ್ ಬಳಿ ಆಂಟೋನಿ ರಾಯ್ ಅವರ ನಿರ್ಲಕ್ಷ್ಯತನದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು. ನಂತರ ಕಾರಿನಲ್ಲಿದ್ದ ಐವರಿಗೆ ಗಾಯವಾಗಿ ಚಿಕಿತ್ಸೆ ಪಡೆದಿದ್ದರು.
ದರ್ಶನ್ ಅಪಘಾತದ ಕಾರಿನಲ್ಲಿ ಇದ್ದದ್ದು 4 ಜನ ಅಲ್ಲ, 6 ಜನ.! ಯಾರವರು.?
ಈ ಸಮಯದಲ್ಲಿ ನಟ ದರ್ಶನ್ ಅವರಿಗೆ ಸಹಾಯ ಮಾಡಲು ಬಂದ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಅವರಿಗೂ ಗಾಯಗಳಾಗಿತ್ತು. ಅವರೂ ಸಹ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಕಾರನ್ನು ಸರ್ಕಾರಿ ಆರ್.ಟಿ.ಓ ಅಧಿಕಾರಿಗಳು ಪರಿಶೀಲಿಸಿದ್ದು, ಯಾವುದೇ ತಾಂತ್ರಿಕ ಕಾರಣದಿಂದ ಅಪಾಯ ಆಗಿಲ್ಲ ಎಂದು ವರದಿ ನೀಡಿದ್ದಾರೆ. ಘಟನೆ ಸಂಬಂಧ ನಟರಾದ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್, ಚಾಲಕ ಆಂಟೋನಿ ಕಾರಿನಲ್ಲಿದ್ದ ಪ್ರಕಾಶ್ ಎಂಬುವರ ಹೇಳಿಕೆ ಪಡೆಯಲಾಗಿದೆ. ಎಲ್ಲರ ಹೇಳಿಕೆಯಲ್ಲೂ ಆಂಟೋನಿ ಅವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಸಹಜ ಅಭಿಪ್ರಾಯ ಬಂದಿದೆ.
ಅಪಘಾತ ಪ್ರಕರಣಕ್ಕೆ ತಿರುವು: ದರ್ಶನ್ ಜೊತೆಗಿದ್ದ ರಾಯ್ ಅಂಟೋನಿಗೆ ಈಗ ಕಂಟಕ
ತಪ್ಪಿತಸ್ಥ ಚಾಲಕ ಆಂಟೋನಿ ರಾಯ್ ವಿರುದ್ಧ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕು ಎಂದು ಸಂಚಾರಿ ಠಾಣಾ ಪೊಲೀಸರು ಮನವಿ ಮಾಡಿದ್ದಾರೆ.