Don't Miss!
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- News ಬೆಂಗಳೂರಿನಲ್ಲಿ ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಚ್ಚಿನ ನಿರ್ಮಾಪಕರ ಹುಟ್ಟುಹಬ್ಬ ಆಚರಿಸಿದ ದರ್ಶನ್
ನಟ ದರ್ಶನ್ ಅವರು ತಮ್ಮ ನೆಚ್ಚಿನ ನಿರ್ಮಾಪಕರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಹುಟ್ಟುಹಬ್ಬ ಆಚರಿಸಲೆಂದು ಮೈಸೂರಿಗೆ ಬಂದಿದ್ದಾರೆ ದರ್ಶನ್.
ಹೌದು, ನಿನ್ನೆ ಧಾರವಾಡಕ್ಕೆ ಭೇಟಿ ನೀಡಿದ್ದ ದರ್ಶನ್, ಇಂದು ಮೈಸೂರಿಗೆ ಬಂದಿದ್ದು, ತಮ್ಮ ಆತ್ಮೀಯ, ನೆಚ್ಚಿನ ನಿರ್ಮಾಪಕರಾದ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬ ಇಂದು. ಅದಕ್ಕಾಗಿಯೇ ಮೈಸೂರಿಗೆ ಆಗಮಿಸಿರುವ ದರ್ಶನ್ ಹಿರಿಯ ನಿರ್ಮಾಪಕರಿಗೆ ಹಾರ ಹಾಕಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ಪ್ರತಿಹುಟ್ಟುಹಬ್ಬಕ್ಕೂ ಮೈಸೂರಿಗೆ ಬರುತ್ತಾರೆ
ಸಂದೇಶ್ ನಾಗರಾಜ್ ಅವರ ಪ್ರತಿ ಹುಟ್ಟುಹಬ್ಬಕ್ಕೆ ದರ್ಶನ್ ಮೈಸೂರಿಗೆ ಬಂದು ಸಂದೇಶ್ ಅವರಿಗೆ ವಿಶ್ ಮಾಡುವ ಪರಿಪಾಠ ಇಟ್ಟುಕೊಂಡಿದ್ದಾರೆ. ಹಾಗಾಗಿ ಈ ಬಾರಿಯೂ ಮೈಸೂರಿಗೆ ಬಂದು ವಿಶ್ ಮಾಡಿದ್ದಾರೆ ದರ್ಶನ್.
ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ
ಸಂದೇಶ್ ನಾಗರಾಜ್ ಅವರು ದರ್ಶನ್ ಅವರ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಪ್ರಮಖವಾಗಿ ಪ್ರಿನ್ಸ್, ವಿರಾಟ್, ಅಂಬರೀಶ, ಐರಾವತ ಇನ್ನೂ ಕೆಲವು ದರ್ಶನ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ ಸಂದೇಶ್ ನಾಗರಾಜ್.
ಆಪ್ತ ನಿರ್ಮಾಪಕ ಸಂದೇಶ್ ನಾಗರಾಜ್
ಸಂದೇಶ್ ನಾಗರಾಜ್ ದರ್ಶನ್ ಗೆ ಅತ್ಯಾಪ್ತ ನಿರ್ಮಾಪಕರಾಗಿದ್ದಾರೆ. ದರ್ಶನ್ ಅವರು ಬೆಳೆವ ಹಂತದಲ್ಲಿ ಸಂದೇಶ್ ನಾಗರಾಜ್ ಹಲವು ವಿಧದಲ್ಲಿ ನೆರವಾಗಿದ್ದಾರೆ ಎನ್ನಲಾಗಿದೆ.
ದರ್ಶನ್ ಎತ್ತಿನ ಬಂಡಿ ಸವಾರಿ
ದರ್ಶನ್ ನಿನ್ನೆಯಷ್ಟೆ ಧಾರವಾಡಕ್ಕೆ ಭೇಟಿ ನೀಡಿದ್ದರು. ಅಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಡೈರಿಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಜೊತೆಗೆ ವಿನಯ್ ಕುಲಕರ್ಣಿ ಅವರೊಟ್ಟಿಗೆ ಸೇರಿ ಎತ್ತಿನ ಬಂಡಿ ಸವಾರಿ ಸಹ ಮಾಡಿದ್ದಾರೆ.