Don't Miss!
- News Lok Sabha election: ಬೆಂಗಳೂರಿನಲ್ಲಿ ಒಂದು ಕೋಟಿ ದಾಟಿದ ಮತದಾರರ ಸಂಖ್ಯೆ
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Automobiles ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮ್ಮ ಸಿನಿಮಾ ಮಾಡಲು ಬರುವ ನಿರ್ಮಾಪಕರಿಗೆ ಷರತ್ತು ಹಾಕಿದ ದರ್ಶನ್
'ರಾಬರ್ಟ್' ಸಿನಿಮಾದ ಗೆಲುವನ್ನು ಸಂಭ್ರಮಿಸಲು ಚಿತ್ರತಂಡ ಇಂದು (ಮಾರ್ಚ್ 16) ಒಟ್ಟಾಗಿತ್ತು. ಸಿನಿಮಾದ ಗೆಲುವಿನ ಹಿಂದೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಲಾಯಿತು.
Recommended Video
ನಿರ್ದೇಶಕ ತರುಣ್ ಸುಧೀರ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್, ನಟರಾದ ವಿನೋದ್ ರಾಜ್ಕುಮಾರ್, ಆಶಾ ಭಟ್, ಚಿಕ್ಕಣ್ಣ, ಶಿವರಾಜ್ ಕೆ.ಆರ್.ಪೇಟೆ ಇನ್ನೂ ಹಲವರು ಸಿನಿಮಾ ಪಯಣದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಮಾತನಾಡಿದ ನಟ ದರ್ಶನ್ ಎಂದಿನಂತೆ ಮನಬಿಚ್ಚಿ ಮಾತನಾಡಿದರು. 'ನನ್ನ ಸಿನಿಮಾ ಮಲ್ಟಿಫ್ಲೆಕ್ಸ್ಗಳಲ್ಲಿ ಓಡಲ್ಲ ಅಂತಿದ್ರು. ಆದರೆ ನಾಲ್ಕು ದಿನದಲ್ಲಿ 55 ಲಕ್ಷ ಹಣವನ್ನು ನಮ್ಮ ಸಿನಿಮಾ ಗಳಿಸಿದೆ' ಎಂದರು ದರ್ಶನ್.
'ರಾಬರ್ಟ್' ಸಿನಿಮಾವನ್ನು ಚೆನ್ನಾಗಿ ವಿತರಣೆ ಮಾಡಿದೆವು. ಹಲವು ಚಿತ್ರಮಂದಿರಗಳ ಜೊತೆ ಎದುರು ಕೂತು ಮಾತನಾಡಿ ಹಂಚಿಕೆ ಮಾಡಲಾಗಿದೆ. ಚೆನ್ನಾಗಿ ಯೋಜನೆ ಹಾಕಿ ವಿತರಣೆ ಮಾಡಿದ್ದರಿಂದ ನಮ್ಮ ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡುತ್ತಿದೆ ಎಂದರು ದರ್ಶನ್.
'ನನ್ನ ಸಿನಿಮಾ ನಿರ್ಮಾಣ ಮಾಡಲು ಬರುವ ನಿರ್ಮಾಪಕರು ಮೊದಲು ವಿತರಣೆ ಮಾಡುವುದು ಹೇಗೆ ಎಂದು ಚೆನ್ನಾಗಿ ಕಲಿತುಕೊಂಡು ಬನ್ನಿ. ಇಲ್ಲದಿದ್ದರೆ ಬರಬೇಡಿ. ಸುಮ್ಮನೆ ಹಣ ಹಾಕಿ ನಂತರ ವಿತರಕರಿಗೆ ಮಾತ್ರ ಲಾಭ ಕೊಟ್ಟು, ನಿರ್ಮಾಪಕರು ಕೈಸುಟ್ಟುಕೊಳ್ಳುವಂತಾಗುವುದು ಬೇಡ' ಎಂದರು ದರ್ಶನ್.
'ಯಜಮಾನ, ಒಡೆಯ ಇನ್ನೂ ಕೆಲವು ಸಿನಿಮಾಗಳಿಂದ ನಾನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇನೆ. ಸಿನಿಮಾ ವ್ಯವಹಾರ ನನಗೆ ಈಗ ಅರ್ಥವಾಗುತ್ತಿದೆ. ಲೈಟ್ ಬಾಯ್ಗೆ 500 ಕೊಡಲು ಒದ್ದಾಡುತ್ತೇವೆ. ಆದರೆ ಕೆಲವು ವಿತರಕರು ಮಾತ್ರ ಕೋಟ್ಯಂತರ ಹಣ ಮಾಡಿಕೊಳ್ಳುತ್ತಾರೆ' ಎಂದರು ದರ್ಶನ್.