Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮ್ಮ ಸಿನಿಮಾ ಮಾಡಲು ಬರುವ ನಿರ್ಮಾಪಕರಿಗೆ ಷರತ್ತು ಹಾಕಿದ ದರ್ಶನ್
'ರಾಬರ್ಟ್' ಸಿನಿಮಾದ ಗೆಲುವನ್ನು ಸಂಭ್ರಮಿಸಲು ಚಿತ್ರತಂಡ ಇಂದು (ಮಾರ್ಚ್ 16) ಒಟ್ಟಾಗಿತ್ತು. ಸಿನಿಮಾದ ಗೆಲುವಿನ ಹಿಂದೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಲಾಯಿತು.
Recommended Video
ನಿರ್ದೇಶಕ ತರುಣ್ ಸುಧೀರ್, ನಿರ್ಮಾಪಕ ಉಮಾಪತಿ ಶ್ರೀನಿವಾಸ್, ನಟರಾದ ವಿನೋದ್ ರಾಜ್ಕುಮಾರ್, ಆಶಾ ಭಟ್, ಚಿಕ್ಕಣ್ಣ, ಶಿವರಾಜ್ ಕೆ.ಆರ್.ಪೇಟೆ ಇನ್ನೂ ಹಲವರು ಸಿನಿಮಾ ಪಯಣದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಂತ್ಯದಲ್ಲಿ ಮಾತನಾಡಿದ ನಟ ದರ್ಶನ್ ಎಂದಿನಂತೆ ಮನಬಿಚ್ಚಿ ಮಾತನಾಡಿದರು. 'ನನ್ನ ಸಿನಿಮಾ ಮಲ್ಟಿಫ್ಲೆಕ್ಸ್ಗಳಲ್ಲಿ ಓಡಲ್ಲ ಅಂತಿದ್ರು. ಆದರೆ ನಾಲ್ಕು ದಿನದಲ್ಲಿ 55 ಲಕ್ಷ ಹಣವನ್ನು ನಮ್ಮ ಸಿನಿಮಾ ಗಳಿಸಿದೆ' ಎಂದರು ದರ್ಶನ್.
'ರಾಬರ್ಟ್' ಸಿನಿಮಾವನ್ನು ಚೆನ್ನಾಗಿ ವಿತರಣೆ ಮಾಡಿದೆವು. ಹಲವು ಚಿತ್ರಮಂದಿರಗಳ ಜೊತೆ ಎದುರು ಕೂತು ಮಾತನಾಡಿ ಹಂಚಿಕೆ ಮಾಡಲಾಗಿದೆ. ಚೆನ್ನಾಗಿ ಯೋಜನೆ ಹಾಕಿ ವಿತರಣೆ ಮಾಡಿದ್ದರಿಂದ ನಮ್ಮ ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡುತ್ತಿದೆ ಎಂದರು ದರ್ಶನ್.
'ನನ್ನ ಸಿನಿಮಾ ನಿರ್ಮಾಣ ಮಾಡಲು ಬರುವ ನಿರ್ಮಾಪಕರು ಮೊದಲು ವಿತರಣೆ ಮಾಡುವುದು ಹೇಗೆ ಎಂದು ಚೆನ್ನಾಗಿ ಕಲಿತುಕೊಂಡು ಬನ್ನಿ. ಇಲ್ಲದಿದ್ದರೆ ಬರಬೇಡಿ. ಸುಮ್ಮನೆ ಹಣ ಹಾಕಿ ನಂತರ ವಿತರಕರಿಗೆ ಮಾತ್ರ ಲಾಭ ಕೊಟ್ಟು, ನಿರ್ಮಾಪಕರು ಕೈಸುಟ್ಟುಕೊಳ್ಳುವಂತಾಗುವುದು ಬೇಡ' ಎಂದರು ದರ್ಶನ್.
'ಯಜಮಾನ, ಒಡೆಯ ಇನ್ನೂ ಕೆಲವು ಸಿನಿಮಾಗಳಿಂದ ನಾನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದೇನೆ. ಸಿನಿಮಾ ವ್ಯವಹಾರ ನನಗೆ ಈಗ ಅರ್ಥವಾಗುತ್ತಿದೆ. ಲೈಟ್ ಬಾಯ್ಗೆ 500 ಕೊಡಲು ಒದ್ದಾಡುತ್ತೇವೆ. ಆದರೆ ಕೆಲವು ವಿತರಕರು ಮಾತ್ರ ಕೋಟ್ಯಂತರ ಹಣ ಮಾಡಿಕೊಳ್ಳುತ್ತಾರೆ' ಎಂದರು ದರ್ಶನ್.