Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಸಾವನ್ನಪ್ಪಿದ ಅಭಿಮಾನಿಗೆ ಸಂತಾಪ ಸೂಚಿಸಿದ ದಾಸ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೊಬ್ಬ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ. ಆ ಅಭಿಮಾನಿ ಸಾವಿಗೆ ಈಗ ಡಿ ಬಾಸ್ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತಪಡಿಸಿರುವ ದರ್ಶನ್, ವಾಹನ ಚಲಾಯಿಸವಾಗ ಜಾಗೃತೆಯಿಂದ ಹೋಗಿ ಎಂದು ಮನವಿ ಮಾಡಿಕೊಂಡಿದ್ದಾರೆ.
'ಬಾಸ್' ಆಸ್ಪತ್ರೆಯಿಂದ ಬಂದಿದ್ದಕ್ಕೆ ಸಂಭ್ರಮಿಸಿದ 'ಭೀಮ'
'ನಿನ್ನೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಕೇಳಿ ತುಂಬಾ ಬೇಸರವಾಗಿದೆ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಅವರ ಕುಟುಂಬಕ್ಕೆ ನೀಡಲಿ ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ' ಎಂದು ಟ್ವೀಟ್ ಮಾಡಿದ್ದಾರೆ.
ಅಪಘಾತದ ಗೊಂದಲಗಳಿಗೆ ತೆರೆ ಎಳೆದ 'ಡಿ ಬಾಸ್': ಅಂದು ರಾತ್ರಿ ನಿಜಕ್ಕೂ ಆಗಿದ್ದೇನು.?
ಕಳೆದ ತಿಂಗಳಲ್ಲಿ ಸ್ವತಃ ದರ್ಶನ್ ಅವರೇ ಅಪಘಾತಕ್ಕೆ ಒಳಗಾಗಿದ್ದರು. ಮೈಸೂರಿನ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಆಕ್ಸಿಡೆಂಟ್ ಆಗಿತ್ತು. ಈ ಕಾರಿನಲ್ಲಿ ದರ್ಶನ್, ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಸ್ನೇಹಿತ ರಾಯ್ ಆಂಟೋನಿ ಇದ್ದರು.
ಅದೃಷ್ಟವಶಾತ್ ಈ ಅಪಘಾತದಿಂದ ದರ್ಶನ್ ಅವರಿಗೆ ಬಲಗೈ ಪೆಟ್ಟಾಗಿದ್ದು ಬಿಟ್ಟರೇ ಗಂಭೀರ ಗಾಯಗಳು ಆಗಿಲ್ಲ. ಹೀಗಾಗಿ, ದರ್ಶನ್ ಅವರು ಕೂಡ ತಮ್ಮ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ ವಿನಂತಿ ಮಾಡಿದ್ದಾರೆ.