Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶ್ರೀಗಳ ಅಂತಿಮ ದರ್ಶನ ಪಡೆದ ನಟ ದರ್ಶನ್
ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮಿಗಳ ಅಂತಿಮ ದರ್ಶನವನ್ನು ನಟ ದರ್ಶನ್ ಪಡೆದಿದ್ದಾರೆ. ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ ದರ್ಶನ್ ಶ್ರೀಗಳ ದರ್ಶನ ಪಡೆದರು.
ಶ್ರೀಗಳ ಅಂತಿಮ ದರ್ಶನ ಪಡೆಯಲು ಶಿವಣ್ಣನಿಗೆ ಸಾಧ್ಯ ಆಗಲಿಲ್ಲ
ಶ್ರೀಗಳ ಅಂತಿಮ ದರ್ಶನ ಪಡೆದು ಅಲ್ಲಿದ್ದ ಹಿರಿಯ ಸ್ವಾಮಿಜಿಗಳ ಕಾಲಿಗೆ ಬಿದ್ದು ಆಶೀರ್ವಾದ ತೆಗೆದುಕೊಂಡರು. ಕಿರಿಯ ಸ್ವಾಮಿಗಳ ಜೊತೆ ಕೆಲ ಕಾಲ ದರ್ಶನ್ ಮಾತನಾಡಿದರು. ನಿನ್ನೆ ಶ್ರೀಗಳ ಸುದ್ದಿ ತಿಳಿದ ತಕ್ಷಣ ಟ್ವಿಟ್ಟರ್ ಖಾತೆಯ ಮೂಲಕ ಸಂತಾಪ ಸೂಚಿಸಿದ್ದರು.
''ನಡೆದಾಡುವ ದೇವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಇಹಲೋಕ ತ್ಯಜಿಸಿರುವುದು ಬಹಳ ನೋವಿನ ಸಂಗತಿ. ಇಷ್ಟು ದಿನ ಭಕ್ತರ ದರ್ಶನಕ್ಕೆ ಅವರಿದ್ದರು, ಈಗ ದೈಹಿಕವಾಗಿ ನಮ್ಮನ್ನು ಅಗಲಿದರೂ ಎಲ್ಲರ ಮನೆ ಮನಗಳಲ್ಲಿ ಅವರು ಭದ್ರವಾಗಿ ನೆಲೆಸಿದ್ದಾರೆ.'' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ಸಿದ್ದಗಂಗಾ LIVE: ವಾರಣಾಸಿಯಲ್ಲಿ ಶ್ರೀಗಳನ್ನು ನೆನೆದ ಮೋದಿ
ಅಂದಹಾಗೆ, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ, ನಿರ್ದೇಶಕ ಸಾಯಿ ಪ್ರಕಾಶ್, ನಟಿ ಲೀಲಾವತಿ, ವಿನೋದ್ ರಾಜ್ ಸೇರಿದಂತೆ ಚಿತ್ರರಂಗ ಅನೇಕ ಗಣ್ಯರು ಸಿದ್ದಗಂಗಾ ಮಠಕ್ಕೆ ಹೋಗಿ ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ.