Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಫೋಟೋ ಹಾಕಿದ್ದ ಆಟೋ ಚಾಲಕನಿಗೆ ಈ ಸ್ಥಿತಿ ಬರಬಾರದಿತ್ತು!
ಮಂಡ್ಯ ಚುನಾವಣಾ ಬಿಸಿ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸುಮಲತಾ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಇಬ್ಬರು ಬೆಂಬಲ ನೀಡುತ್ತಿದ್ದಂತೆ ಮಂಡ್ಯ ರಾಜಕೀಯ ಮತ್ತಷ್ಟು ಸದ್ದು ಮಾಡ್ತಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಮತ್ತು ಸಿಎಂ ಕುಮಾರಸ್ವಾಮಿ ನಡುವಿನ ರಾಜಕೀಯ ವಾಗ್ವಾದಗಳು ನಾನಾ ರೂಪಗಳನ್ನು ಪಡೆದುಕೊಳ್ಳುತ್ತಿದೆ.
ಈ ಕಡೆ ಸುಮಲತಾ ಅವರನ್ನು ಸೋಲಿಸಲೇಬೇಕೆಂದು ನಿಖಿಲ್ ಬೆಂಬಲಿಗರು ಪಣ ತೊಟ್ಟಿದ್ದರೆ, ಅತ್ತ ಸುಮಲತಾ ಅವರನ್ನು ಗೆಲ್ಲಿಸಲೇಬೇಕೆಂದು ದರ್ಶನ್ ಮತ್ತು ಯಶ್ ತೊಡೆತಟ್ಟಿನಿಂತಿದ್ದಾರೆ. ಇದರ ನಡುವೆ ಸುಮಲತಾ ವಿರುದ್ಧ ಎದುರಾಳಿಗಳಿಂದ ವಾಗ್ಬಾಣಗಳು ಒಂದರ ಮೇಲೊಂದು ತೂರಿ ಬರುತ್ತಿವೆ.
ಸುಮಲತಾ ಅವರ ಬೆನ್ನಿಗೆ ನಿಂತ ಯಶ್ ಮತ್ತು ದರ್ಶನ್ ವಿರುದ್ಧವೇ ಹೆಚ್ಚು ಮಾತುಗಳು ಕೇಳಿಬರುತ್ತಿವೆ. ಅದು ಎಷ್ಟರ ಮಟ್ಟಿಗೆ ದರ್ಶನ್ ವಿರುದ್ಧ ದ್ವೇಷ ರಾಜಕಾರಣ ನಡೆಯುತ್ತಿದೆ ಅಂದರೆ, ಅಮಾಯಕ ಆಟೋ ಚಾಲಕನೊಬ್ಬ ದರ್ಶನ್ ಫೋಟೋ ಹಾಕಿದ್ದಕ್ಕೆ ಕಿಡಿಗೇಡಿಗಳು ಆಟೋ ಹಿಂಬದಿಯ ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿದ್ದಾರೆ. ಮುಂದೆ ಓದಿ....
ನಿರ್ಮಾಪಕ ಮುನಿರತ್ನ ಹೇಳಿಕೆ ವಿರುದ್ಧ ತಿರುಗಿಬಿದ್ದ ದರ್ಶನ್-ಅಂಬಿ ಫ್ಯಾನ್ಸ್
ಡಿ ಬಾಸ್ ಎಂದು ಬರೆಸಿಕೊಂಡಿದ್ದೇ ತಪ್ಪಾಯಿತಾ?
ದರ್ಶನ್ ಅಪ್ಪಟ ಅಭಿಮಾನಿಯಾಗಿರುವ ಕೆ ಆರ್ ಪೇಟೆ ಹೇಮಾವತಿ ಬಡಾವಣೆಯ ಸಂತೋಷ್ ಎಂಬಾತ ಆಟೋ ಹಿಂಭಾಗದಲ್ಲಿ ದರ್ಶನ್ ಅವರ ಭಾವಚಿತ್ರ ಹಾಕಿಕೊಂಡು ಡಿ ಬಾಸ್ ಎಂದು ಬರೆಸಿಕೊಂಡಿದ್ದರು. ಇದನ್ನ ನೋಡಿದ ಯಾರೋ ಕಿಡಿಗೇಡಿಗಳು ರಾತ್ರೋ ರಾತ್ರಿ ಚಕ್ರಗಳನ್ನು ಬಿಚ್ಚಿಕೊಂಡು ಹೋಗಿದ್ದಾರೆ. ಹಿಂಭಾಗದ ಎರಡು ಚಕ್ರಗಳು ಕಾಣೆಯಾಗಿದ್ದನ್ನು ನೋಡಿ ಆಟೋ ಚಾಲಕ ಕಂಗಾಲಾಗಿದ್ದಾರೆ.
ಬಂಧಿಸುವಂತೆ ಪೊಲೀಸರ ಬಳಿ ಆಟೋ ಚಾಲಕರ ಒತ್ತಾಯ
ಎರಡು ಚಕ್ರಗಳನ್ನು ಬಿಚ್ಚುಕೊಂಡು ಪರಾರಿಯಾಗಿರುವವರನ್ನ ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ಆಟೋ ಚಾಲಕ ಮತ್ತು ಮಾಲಿಕರ ಸಂಘದ ಅಧ್ಯಕ್ಷ ಕೆ.ಎನ್ ವಾಸುದೇವ್ ನೇತೃತ್ವದಲ್ಲಿ ಐವತ್ತಕ್ಕೂ ಹೆಚ್ಚು ಸದಸ್ಯರು ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿ ಮನವಿ ಮಾಡಿಕೊಂಡರು.
ಜೋಡೆತ್ತುಗಳ ವಿರುದ್ಧ ಸಿಎಂ ಕುಮಾರಸ್ವಾಮಿ ಗರಂ: ಯಾರದು ಡಿ ಬಾಸ್?
ಪೊಲೀಸ್ ಅಧಿಕಾರಿಗಳ ವಿರುದ್ಧವೇ ಆರೋಪ
ಆಟೋದ ಎರಡು ಚಕ್ರಗಳನ್ನು ಕಳೆದುಕೊಂಡ ಸಂತೋಷ್ ಮತ್ತು ಇತರ ಆಟೋ ಚಾಲಕರು ಮನವಿ ಸಲ್ಲಿಸಲು ಹೋದರೆ ಪೊಲೀಸ್ ಅಧಿಕಾರಿಗಳು ಮನವಿಯನ್ನು ಸ್ವೀಕರಿಸಿಲ್ಲ. ''ತಾಲ್ಲೂಕಿನಲ್ಲಿ ರಾಜಕೀಯ ತಿರುವು ಪಡೆದುಕೊಂಡರೇ ನಮಗೆ ತೊಂದರೆ ಆಗುತ್ತೆ. ಒಂದು ವೇಳೆ ಮನವಿಯನ್ನು ಸ್ವೀಕರಿಸಲು ಒತ್ತಾಯ ಮಾಡಿದರೆ ನಿಮ್ಮ ಆಟೋಗಳನ್ನ ವಿರುದ್ಧ ಪ್ರಕರಣ ದಾಖಲು ಮಾಡಬೇಕಾಗುತ್ತೆ'' ಎಂದು ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಶಾಂತಿಯುತ ಪ್ರತಿಭಟನೆಗೆ ಮುಂದಾದ ಆಟೋ ಚಾಲಕರು
ಪೊಲೀಸ್ ಅಧಿಕಾರಿಗಳ ಧೋರಣೆ ಖಂಡಿಸಿ ಮತ್ತು ಚಕ್ರಗಳನ್ನು ಬಿಚ್ಚಿಕೊಂಡು ಹೋಗಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಬುಧವಾರ ಕೆ ಆರ್ ಪೇಟೆಯಲ್ಲಿ ಆಟೋ ಚಾಲಕ ಮತ್ತು ಮಾಲಿಕರ ಸಂಘದ ವತಿಯಿಂದ ಶಾಂತಿಯುತ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಂಡಿದ್ದಾರಂತೆ. ರಾಜಕೀಯ ವ್ಯಕ್ತಿಗಳ ಮಾತಿನ ಬಾಣಗಳಿಂದ ಅಮಾಯಕರು ಬಲಿಯಾಗುತ್ತಿದ್ದಾರೆ. ದರ್ಶನ್ ಪೋಟೋ ಹಾಕಿದ್ದೆ ಆಟೋ ಚಾಲಕನ ದೊಡ್ಡ ತಪ್ಪು ಆದಂತೆ ಆಗಿದೆ.