Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡಿ ಬ್ರದರ್ಸ್' ಪ್ರೀಮಿಯರ್ ಲೀಗ್ ನ ಉದ್ದೇಶವೇನು?
Recommended Video
ಸಿನಿಮಾರಂಗ ಅಂದ ಮೇಲೆ ಅಲ್ಲಿ ಅಭಿಮಾನಿಗಳಿಂದ ಒಳ್ಳೆಯ ಕೆಲಸಗಳು ಆಗುತ್ತಿರುತ್ತವೆ. ಇತ್ತೀಚಿಗಷ್ಟೆ ಕೆಸಿಸಿ ಕಪ್ ಕ್ರಿಕೆಟ್ ಪಂದ್ಯಾವಳಿಯನ್ನ ಯಶಸ್ವಿಯಾಗಿ ನಡೆದಿದೆ. ಈಗ ಡಿಪಿಎಲ್ ಸಮಯ. ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ಅನ್ನು ಆಯೋಜನೆ ಮಾಡಲಾಗಿದೆ.
ಸಾಮಾನ್ಯವಾಗಿ ಒಗ್ಗಟ್ಟು ಪ್ರದರ್ಶನ ಮಾಡಲು ಅಥವಾ ಬ್ಯುಸಿ ಲೈಫ್ ನಲ್ಲಿ ಒಂದಿಷ್ಟು ಸಮಯ ಒಟ್ಟಿಗೆ ಕಳೆಯುವ ಉದ್ದೆಶದಿಂದ ಅಥವಾ ಸ್ಟಾರ್ ಗಳ ಹುಟ್ಟುಹಬ್ಬದ ಸಲುವಾಗಿ ಕ್ರಿಕೆಟ್ ಪಂದ್ಯಾವಳಿಗಳನ್ನು ಮಾಡುತ್ತಾರೆ. ಆದರೆ ಡಿ ಬಾಸ್ ಅಭಿಮಾನಿಗಳು ಒಂದು ಒಳ್ಳೆ ಉದ್ದೇಶವನ್ನಿಟ್ಟುಕೊಂಡು ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ನಡೆಸುತ್ತಿದ್ದಾರೆ.
ರಾಧಿಕಾ ಪಂಡಿತ್ ಅವರಿಗೆ ದರ್ಶನ್ ಅಭಿಮಾನಿಗಳ ಮನವಿ
ಹಾಗಾದರೆ ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ನಡೆಯುವುದು ಯಾವಾಗ? ಎಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತದೆ? ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ಹಿಂದಿನ ಉದ್ದೇಶವೇನು? ಈ ಎಲ್ಲಾ ವಿಚಾರಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಮುಂದೆ ಓದಿ
ಶುರುವಾಯ್ತು ಡಿ ಬ್ರದರ್ಸ್ ಪ್ರೀಮಿಯರ್ ಲೀಗ್
ಚಾಲೆಂಜಿಂಗ್ ಸ್ಟಾರ್ ಅಭಿಮಾನಿ ಬಳಗ 'ಡಿ ಕಂಪನಿ' ವತಿಯಿಂದ ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಶುರುವಾಗಲಿದೆ. ಇದೇ ತಿಂಗಳ ಏರ್ಪಿಲ್ 14 ಮತ್ತು 15 ರಂದು ಬೆಂಗಳೂರಿನಲ್ಲಿ ನಡೆಯುತ್ತಿದೆ.
ಅಭಿಮಾನಿಗಳಿಗಾಗಿ ಕ್ರಿಕೆಟ್ ಪಂದ್ಯಾವಳಿ
ಕಳೆದ ನಾಲ್ಕು ವರ್ಷದಿಂದ ದರ್ಶನ್ ಅಭಿಮಾನಿ ಬಳಗವಾದ ಡಿ ಕಂಪನಿಯಿಂದ ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ನಡೆಸಿಕೊಂಡು ಬರಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲಾ ದರ್ಶನ್ ಅಭಿಮಾನಿಗಳನ್ನ ತಂಡವನ್ನಾಗಿ ಮಾಡಿ ಕ್ರಿಕೆಟ್ ನಲ್ಲಿ ಭಾಗಿ ಮಾಡಿಕೊಳ್ಳಲಾಗುತ್ತದೆ.
ಜಿಲ್ಲೆಗಳಿಂದ ಬರಲಿದೆ ತಂಡಗಳು
ದಾವಣಗೆರೆ, ಮೈಸೂರು, ಹಾಸನ್, ಕುಣಿಗಲ್, ಮಂಡ್ಯ, ಶಿವಮೊಗ್ಗ, ಕೆಂಗೇರಿ, ನೆಲಮಂಗಲ, ಹುಬ್ಬಳಿ, ತಿಪಟೂರು ಹೀಗೆ ಹತ್ತು ತಂಡಗಳಾಗಿ ಮಾಡಿಕೊಂಡು ಎರಡು ದಿನಗಳು ಅಭಿಮಾನಿಗಳು ಮೈದಾನಕ್ಕೆ ಇಳಿದು ಕ್ರಿಕೆಟ್ ಆಡಲಿದ್ದಾರೆ.
ಬಂದ ಹಣ ಅನಾಥಾಶ್ರಮಕ್ಕೆ ಕೊಡುಗೆ
ಡಿ ಬ್ರದರ್ಸ್ ಪ್ರೀಮಿಯರ್ ಲೀಗ್ ನಿಂದ ಬಂದ ಹಣದಲ್ಲಿ ಒಂದಿಷ್ಟು ಭಾಗ ಆಯ್ಕೆ ಮಾಡಿದ ಅನಾಥಾಶ್ರಮಕ್ಕೆ ನೀಡುತ್ತಾ ಬಂದಿದ್ದಾರೆ ದರ್ಶನ್ ಅಭಿಮಾನಿಗಳು. ಇದಕ್ಕೆ ಯಾವುದೇ ಫ್ಯಾನ್ಸ್ ವಾರ್ ಹಣಪಟ್ಟಿ ಕಟ್ಟುವುದು ಬೇಡ ಎನ್ನುವುದು ಅಭಿಮಾನಿಗಳ ಮನವಿ .
ಇನ್ಮುಂದೆ ದರ್ಶನ್ ಕಾಲ್ ಶೀಟ್ ನಲ್ಲಿ ಮೊದಲ ಆದ್ಯತೆ ಇವರಿಗೆ