Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೀನಾ ತೂಗುದೀಪ ಕಾಲಿಗೆ ಬೀಳಲು ಫ್ಯಾನ್ಸ್ ಆಗ್ರಹ
ಶ್ರೀಮತಿ ಮೀನಾ ತೂಗುದೀಪ ಶ್ರೀನಿವಾಸ್ ಅವರ ಕಾಲಿಗೆ ಬಿದ್ದು ಸೂರಪ್ಪ ಬಾಬು ಕ್ಷಮೆಯಾಚಿಸಬೇಕು ಎಂದು ಅಖಿಲ ಕರ್ನಾಟಕ ದರ್ಶನ್ ಅಭಿಮಾನಿಗಳ ಸಂಘ ಭಾನುವಾರ (ಜು.8) ಸಂಜೆ ಆಗ್ರಹಿಸಿತು. ಗ್ರೀನ್ ಹೌಸ್ ರಾಜ್ ಮಿಲನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯಕರ್ತರು ಮಾತನಾಡುತ್ತಿದ್ದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು, ದರ್ಶನ್ ಅಭಿಮಾನಿಗಳು ಹಾಗೂ ಮಾಧ್ಯಮದವರ ಮುಂದೆ ಮೀನಾ ಅವರ ಕಾಲಿಗೆ ಬಿದ್ದು ಸೂರಪ್ಪ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ದರ್ಶನ್ ಅಭಿಮಾನಿಗಳು ಎಚ್ಚರಿಸಿದ್ದಾರೆ. ಕ್ಷಮೆ ಕೋರಲು ಸೂರಪ್ಪ ಬಾಬುಗೆ ಮಂಗಳವಾರದ (ಜು.10)ತನಕ ಗಡುವು ನೀಡಲಾಗಿದೆ. (ಯೂಟ್ಯೂಬ್ ವಿಡಿಯೋ)
ಕನ್ನಡ ಚಿತ್ರರಂಗಕ್ಕೆ ಆದರ್ಶಪ್ರಾಯರಾಗಿದ್ದ ಕಲಾವಿದರ ಬಗ್ಗೆ ಈ ರೀತಿ ಮಾತನಾಡುವುದು ತಪ್ಪು. ವರನಟ ಡಾ.ರಾಜ್ ಕುಮಾರ್ ಅವರಂತಹ ಮೇರುನಟರೇ ತೂಗುದೀಪ ಶ್ರೀನಿವಾಸ್ ಅವರಿಗೆ ಗೌರವ ಕೊಡುತ್ತಿದ್ದರು. ಮದ್ಯದ ಅಮಲಿನಲ್ಲಿ ಸೂರಪ್ಪ ಬಾಬು ಬಾಯಿಗೆ ಬಂದಂತೆ ಮಾತನಾಡಿರುವುದು ನಿಜಕ್ಕೂ ನೋವಿನ ಸಂಗತಿ ಎಂದಿದ್ದಾರೆ.
ಈ ವಿಷಯವನ್ನು ಇಲ್ಲಿಗೆ ಬಿಡಲ್ಲ. ಸೂರಪ್ಪ ಬಾಬು ವಿರುದ್ಧ ಪ್ರತಿಭಟನೆ ಕೂರಲು ನಿರ್ಧರಿಸಿದ್ದೇವೆ. ಸೋಮವಾರ (ಜು.9) ಮಧ್ಯಾಹ್ನ 3 ಗಂಟೆಗೆ ಆನಂದರಾವ್ ವೃತ್ತದ ಬಳಿಯ ಗಾಂಧಿಚೌಕದಿಂದ ಚಲನಚಿತ್ರ ವಾಣಿಜ್ಯ ಮಂಡಳಿವರೆಗೆ ಮೌನ ಪ್ರತಿಭಟನೆ ನಡೆಸಲಿರುವುದಾಗಿ ತಿಳಿಸಿದರು.
ಈ ಪ್ರತಿಭಟನಾ ರ್ಯಾಲಿಗೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ದರ್ಶನ್ ಅಭಿಮಾನಿಗಳು ಆಗಮಿಸಲಿದ್ದಾರೆ. ಇವರೆಲ್ಲರ ಒಕ್ಕೊರಲಿನ ಒತ್ತಾಯ ಇಷ್ಟೇ; ಮೀನಾ ತೂಗುದೀಪ ಅವರ ಕಾಲಿಗೆ ಬಿದ್ದು ಸೂರಪ್ಪ ಬಾಬು ಕ್ಷಮೆಯಾಚಿಸಬೇಕು. ಇದು ಫಿಲಂ ಚೇಂಬರ್ ನಲ್ಲೇ ನಡೆಯಬೇಕು. ಅದೂ ದರ್ಶನ್ ಅಭಿಮಾನಿಗಳು ಹಾಗೂ ಮಾಧ್ಯಮದವರ ಸಮ್ಮುಖದಲ್ಲಿ ಎಂಬುದು.
ಅಭಿಮಾನಿಗಳೇನೋ ಪ್ರತಿಭಟನೆಗೆ ಇಳಿದಿದ್ದಾರೆ. ಆದರೆ ಈ ವಿಷಯವನ್ನು ಅವರು ದರ್ಶನ್ ಗೆ ತಿಳಿಸಿಲ್ಲವಂತೆ. ಆದರೆ ದರ್ಶನ್ ಅವರಿಗೆ ಕಳಂಕ ತರುವ ಪ್ರತಿಭಟನೆ ಮಾತ್ರ ಇದಲ್ಲ. ಕಲಾವಿದರ ಆತ್ಮಾಭಿಮಾನವನ್ನು ಎತ್ತಿಹಿಡಿಯುವ ಮೌನ ಪ್ರತಿಭಟನೆ ಇದು ಎನ್ನುತ್ತದೆ ದರ್ಶನ್ ಅಭಿಮಾನಿಗಳ ಸಂಘ.
ಎಣ್ಣೆ ಏಟಿನಲ್ಲಿ ಸೂರಪ್ಪ ಬಾಬು ಏನೋನೋ ಮಾತನಾಡಿದ್ದರ ವಿರುದ್ಧ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ತಕ್ಷಣ ಪ್ರತಿಕ್ರಿಯಿಸಿದ್ದರು. "ಬೀದಿಯಲ್ಲಿ ಬೊಗಳುವ ನಾಯಿಗಳಿಗೆಲ್ಲಾ ಪ್ರತಿಕ್ರಿಯಿಸಲ್ಲ. ಅವನಿಗೆ ಸಿನಿಮಾ ಮಾಡಲು ಯೋಗ್ಯತೆ ಇಲ್ಲ. ಇಂತಹವರನ್ನು ಇಂಡಸ್ಟ್ರಿಯಿಂದ ಕತ್ತುಹಿಡಿದು ಹೊರತಳ್ಳಬೇಕು" ಎಂದು ತಮ್ಮ ಸಿಟ್ಟನ್ನು ಹೊರಹಾಕಿದ್ದರು. ಆದರೆ ದರ್ಶನ್ ಮಾತ್ರ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. (ಏಜೆನ್ಸೀಸ್)