Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಸ್ಕ್ ಹಾಕದೆ ಪ್ರಚಾರ ಮಾಡಿದ ನಟ ದರ್ಶನ್ಗೆ ದಂಡ
ಆರ್ಆರ್ ನಗರ ಉಪಚುನಾವಣೆ ಬಿಜೆಪಿ ಅಭ್ಯರ್ಥಿ, ಸಿನಿಮಾ ನಿರ್ಮಾಪಕ ಮುನಿರತ್ನ ಪರವಾಗಿ ನಟ ದರ್ಶನ್ ಪ್ರಚಾರ ಮಾಡಿದ್ದರು. ದರ್ಶನ್ ಮಾಡಿದ ಪ್ರಚಾರ ಸಭೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.
Recommended Video
ದರ್ಶನ್ ನಡೆಸಿದ ಪ್ರಚಾರ ಸಭೆ ಯಶಸ್ವಿಯೇನೋ ಆಯಿತು, ಆದರೆ ಪ್ರಚಾರ ರ್ಯಾಲಿ ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು. ಇದನ್ನು ಪ್ರಶ್ನಿಸಿ ವಕೀಲರಿಬ್ಬರು ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಆರ್ ಆರ್ ನಗರದಲ್ಲಿ ಮತದಾನ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಅರ್ಜಿ ವಿಚಾರಣೆ ನಡೆದು ಹೈಕೋರ್ಟ್, ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿತು. ಇದರ ಬೆನ್ನಲ್ಲೇ ಸರ್ಕಾರದ ಪರ ವಕೀಲರು ಇಂದು (ನವೆಂಬರ್ 9) ಹೈಕೋರ್ಟ್ಗೆ ಮಾಹಿತಿ ನೀಡಿದ್ದು, ದರ್ಶನ್ಗೆ ದಂಡ ವಿಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾಸ್ಕ್ ಧರಿಸದಿದ್ದಿದ್ದಕ್ಕೆ ನಟ ದರ್ಶನ್ ಗೆ ದಂಡ
ಪ್ರಚಾರ ರ್ಯಾಲಿ ವೇಳೆ ಮಾಸ್ಕ್ ಧರಿಸದೇ ಇದ್ದಿದ್ದಕ್ಕೆ ನಟ ದರ್ಶನ್ಗೆ 250 ರು ದಂಡ ವಿಧಿಸಲಾಗಿದೆಯಂತೆ. ಹೀಗೆಂದು ಸರ್ಕಾರಿ ಪರ ವಕೀಲರು ಹೈಕೋರ್ಟ್ಗೆ ಇಂದು ಮಾಹಿತಿ ನೀಡಿದ್ದಾರೆ. ಜೊತೆಗೆ ಸಂಸದ ತೇಜಸ್ವಿ ಸೂರ್ಯ ಅವರಿಗೂ 250 ರು ದಂಡ ವಿಧಿಸಲಾಗಿದೆಯಂತೆ.
ಬಿಜೆಪಿ ಯುವ ಮೋರ್ಚಾ ವಿರುದ್ಧವೂ ಪ್ರಕರಣ
ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದಕ್ಕೆ 18 ಎನ್ಸಿಆರ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಪ್ರಚಾರ ರ್ಯಾಲಿ ಆಯೋಜಿಸಿದ್ದ ಬಿಜೆಪಿ ಯುವ ಮೋರ್ಚಾ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಚುನಾವಣಾ ಪ್ರಚಾರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ದೂರು ದಾಖಲು
ನವೆಂಬರ್ 11 ಕ್ಕೆ ವಿಚಾರಣೆ
ಪ್ರಚಾರ ರ್ಯಾಲಿ ವೇಳೆ ನಟ ದರ್ಶನ್ ಹಾಗೂ ಇತರರು ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಕೀಲರಾದ ಪುತ್ತಿಗೆ ರಮೇಶ್ ಹಾಗೂ ಜಿ.ಆರ್.ಮೋಹನ್ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ನವೆಂಬರ್ 11 ಕ್ಕೆ ಮುಂದೂಡಲಾಗಿದೆ.
ನವೆಂಬರ್ 10 ಕ್ಕೆ ಫಲಿತಾಂಶ
ಆರ್ಆರ್ ನಗರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ದರ್ಶನ್, ನಟಿ ಅಮೂಲ್ಯ ಹಾಗೂ ಇನ್ನಿತರ ಬಿಜೆಪಿ ಮುಖಂಡರು ಪ್ರಚಾರ ನಡೆಸಿದ್ದರು. ನಾಳೆ (ನವೆಂಬರ್ 10) ರಂದು ಆರ್ಆರ್ ನಗರ ಹಾಗೂ ಶಿರಾ ಉಪಚುನಾವಣೆ ಫಲಿತಾಂಶ ಹೊರಬೀಳಲಿದೆ.