Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ'ದ ಬಗ್ಗೆ ಟ್ವೀಟ್ ಮಾಡಿ ಸುದ್ದಿ ಮುಟ್ಟಿಸಿದ ದರ್ಶನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕುರುಕ್ಷೇತ್ರ' ಯಾವಾಗ, ಆ ಸಿನಿಮಾ ಎಲ್ಲಿಗೆ ಬಂದಿದೆ, ಏನ್ ನಡಿತಿದೆ ಎಂಬ ಹತ್ತು ಹಲವು ಪ್ರಶ್ನೆಗಳು ಅಭಿಮಾನಿಗಳನ್ನ ಕಾಡುತ್ತಿದೆ. ಆದ್ರೆ, ಈ ಬಗ್ಗೆ ಯಾರೊಬ್ಬರು ಸುಳಿವು ಕೂಡ ಕೊಟ್ಟಿರಲಿಲ್ಲ.
ಇದೀಗ, ಸ್ವತಃ ದರ್ಶನ್ ಅವರೇ ಈ ಚಿತ್ರದ ಅಪ್ ಡೇಟ್ ನೀಡಿದ್ದಾರೆ. 'ಕುರುಕ್ಷೇತ್ರ' ಸಿನಿಮಾ ಯಾವ ಹಂತದಲ್ಲಿ ಇದೆ ಎಂಬುದರ ಬಗ್ಗೆ ಟ್ವೀಟ್ಟರ್ ಮೂಲಕ ಉತ್ತರಿಸಿದ್ದಾರೆ.
'ಕುರುಕ್ಷೇತ್ರ' ನಂತರ ಮತ್ತೊಂದು ಪೌರಾಣಿಕ ಸಿನಿಮಾದಲ್ಲಿ ದರ್ಶನ್.!
''ಕುರುಕ್ಷೇತ್ರ ಚಿತ್ರದ ನನ್ನ ಡಬ್ಬಿಂಗ್ ಭಾಗ ಇಂದು ಸಂಪೂರ್ಣವಾಗಿ ಮುಗಿದಿದೆ. ಇನ್ನೇನು ಚಿತ್ರದ ಮುಂದಿನ ಚಟುವಟಿಕೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ'' ಎಂದು ದಾಸ ಬಹಿರಂಗಪಡಿಸಿದ್ದಾರೆ.
ಕುರುಕ್ಷೇತ್ರ ಚಿತ್ರದ ನನ್ನ ಡಬ್ಬಿಂಗ್ ಭಾಗ ಇಂದು ಸಂಪೂರ್ಣವಾಗಿ ಮುಗಿದಿದೆ. ಇನ್ನೇನು ಚಿತ್ರದ ಮುಂದಿನ ಚಟುವಟಿಕೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ pic.twitter.com/iHDVBaRxEf
— Darshan Thoogudeepa (@dasadarshan) June 6, 2018
ಸದ್ಯ, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಕೊಂಡಿರುವ 'ಕುರುಕ್ಷೇತ್ರ' ಸಿನಿಮಾ ಅಂತಿಮ ಹಂತದ ಕೆಲಸ ಮಾಡುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಇದೇ ತಿಂಗಳು ಚಿತ್ರದ ಆಡಿಯೋ ಬಿಡುಗಡೆ ಮಾಡುವ ಯೋಚನೆಯಲ್ಲಿದೆ.
ಇನ್ನುಳಿದಂತೆ ನಾಗಣ್ಣ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ದರ್ಶನ್ 'ದುಯೋರ್ಧನ', ರವಿಚಂದ್ರನ್ 'ಶ್ರೀಕಷ್ಣ', ಅರ್ಜುನ್ ಸರ್ಜಾ 'ಕರ್ಣ', ಸೋನು ಸೂದ್ 'ಅರ್ಜುನ' ಸೇರಿದಂತೆ ಅಂಬರೀಶ್, ಸ್ನೇಹಾ, ಮೇಘನಾ ರಾಜ್, ಶ್ರೀನಾಥ್ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಮುನಿರತ್ನ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.