Don't Miss!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Automobiles ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ಹಿಂಬಾಲಕರು, ರೌಡಿಗಳಿಂದ ಕೊಲೆ ಬೆದರಿಕೆ: ಇಂದ್ರಜಿತ್ ದೂರು
ನಟ ದರ್ಶನ್ ಹಿಂಬಾಲಕರು ಹಾಗೂ ರೌಡಿಗಳು ತಮಗೆ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್, ''ನನಗೆ ಕಳೆದ 24 ಗಂಟೆಗಳಲ್ಲಿ ಸತತವಾಗಿ ಬೆದರಿಕೆ ಕರೆಗಳು, ವಾಟ್ಸ್ಆಪ್ ಸಂದೇಶಗಳು ಬರುತ್ತಲೇ ಇವೆ. 20-30 ಮೊಬೈಲ್ ಸಂಖ್ಯೆಗಳಿಂದ ಕೊಲೆ ಬೆದರಿಕೆಗಳು ಬಂದಿವೆ. ಹಾಗಾಗಿ ಸೈಬರ್ ಕ್ರೈಂಗೆ ದೂರು ನೀಡಲಿದ್ದೇನೆ'' ಎಂದಿದ್ದಾರೆ ಇಂದ್ರಜಿತ್.
''ವಾಟ್ಸ್ಆಪ್ ಮೂಲಕ ಅಶ್ಲೀಲ ಚಿತ್ರಗಳನ್ನು ಕಳಿಸುವುದು, ಅಶ್ಲೀಲ ಸಂದೇಶಗಳು, ಕೆಟ್ಟ ಪದಗಳನ್ನು ಬಳಸಿ ಬೈಯ್ಯುವುದು, ಕರೆ ಮಾಡಿ ಬೆದರಿಕೆ ಹಾಕುವುದು ಮಾಡುತ್ತಿದ್ದಾರೆ'' ಎಂದು ಇಂದ್ರಜಿತ್ ಆರೋಪ ಮಾಡಿದ್ದಾರೆ.
''ಕಾಲ್ ಮಾಡ್ತಾರೆ, ಪಿಕ್ ಮಾಡಿ ಮಾತನಾಡಿದ್ರೆ ಅವರು ಮಾತನಾಡಲ್ಲ. ಬಹಳ ಕೆಟ್ಟದಾಗಿ, ಅಶ್ಲೀಲವಾಗಿ ಸಂದೇಶ ಕಳಿಸುತ್ತಾರೆ. ಇವರ ಅಭಿರುಚಿ ಹೇಗಿದೆ ನೋಡಿ ಎಂದು ಕೆಲವು ಸಂದೇಶಗಳನ್ನು ಮಾಧ್ಯಮದವರಿಗೆ ತೋರಿಸಿದರು ಇಂದ್ರಜಿತ್ ಲಂಕೇಶ್.
ನನಗೆ ಕಾಲ್ ಮಾಡುತ್ತಿರುವವರಿಗೆ, ಅವಾಚ್ಯ ಶಬ್ದಗಳಿಂದ ಬೈಯ್ಯುತ್ತಿರುವವರಿಗೆ ಪಾಠ ಕಲಿಸದೇ ಬಿಡಲ್ಲ. ಇಂಥಹಾ ಬೆದರಿಕೆಗಳು ನನಗೆ ಹೊಸದೇನೂ ಅಲ್ಲ. ಇಂಥಹಾ ಬೆದರಿಕೆಗಳನ್ನು ಹಲವು ವರ್ಷಗಳಿಂದಲೂ ನೋಡುತ್ತಾ ಬಂದಿದ್ದೇನೆ. ಇವರನ್ನು ಸುಮ್ಮನೆ ಬಿಡಲ್ಲ. ಸೈಬರ್ ಠಾಣೆಗೆ ದೂರು ನೀಡುತ್ತೇನೆ'' ಎಂದಿದ್ದಾರೆ ಇಂದ್ರಜಿತ್ ಲಂಕೇಶ್.
Recommended Video
ನಟ ದರ್ಶನ್, ಮೈಸೂರಿನ ಸಂದೇಶ್ ಪ್ರಿನ್ಸ್ ಹೋಟೆಲ್ನಲ್ಲಿ ಕೆಲ ದಿನಗಳ ಹಿಂದೆ ಹೋಟೆಲ್ ಸಪ್ಲೈಯರ್ ಒಬ್ಬರ ಮೇಲೆ ತೀವ್ರ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ದರ್ಶನ್ ತಮ್ಮ ಮೇಲೆ ಬಂದ ಆರೋಪಗಳಿಗೆ ಅತ್ಯಂತ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, ಇಂದ್ರಜಿತ್ಗೆ ಸವಾಲು ಹಾಕಿದ್ದರು. ದರ್ಶನ್ ಅಭಿಮಾನಿಗಳು ಸಹ ಇಂದ್ರಜಿತ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಇಂದ್ರಜಿತ್ ವಿರುದ್ಧ ಹಲವು ಅವಾಚ್ಯ ಪೋಸ್ಟ್ಗಳನ್ನು ಹಾಕಿದ್ದರು.