Don't Miss!
- News Karnataka rain: ಗುಡುಗು, ಸಿಡಿಲು ಬಡಿತದಿಂದ ರಕ್ಷಣೆ ಪಡೆಯಲು ಏನೇನು ಮಾಡಬೇಕು? ಸಲಹೆಗಳು ಇಲ್ಲಿವೆ
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Technology ನಿಮ್ಮ ಬಳಿ ರೆಡ್ಮಿಯ ಈ ಫೋನ್ ಇದ್ರೆ, ಇಲ್ಲಿದೆ ನಿಮಗೆ ಗುಡ್ನ್ಯೂಸ್!
- Automobiles Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಂಗಪಟ್ಟಣ' ಸೇರಿದ ದರ್ಶನ್ ಗೆಳೆಯ ಯಶಸ್ ಸೂರ್ಯ
ನಟ ಯಶಸ್ ಸೂರ್ಯ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸ್ನೇಹಿತರ ಬಳಗದಲ್ಲಿ ಗುರುತಿಸಿಕೊಂಡವರು. ಚಂದನವನದಲ್ಲಿ ನಾಯಕನಾಗಿ, ಸಹ ನಟನಾಗಿ ಬಣ್ಣ ಹಚ್ಚುತ್ತಿರುವ ಯಶಸ್, ದರ್ಶನ್ ಅವರ 'ಚಿಂಗಾರಿ', 'ಚಕ್ರವರ್ತಿ' ಚಿತ್ರಗಳಲ್ಲಿ ದಚ್ಚು ಜೊತೆ ಅಭಿನಯಿಸಿದ್ದಾರೆ. ವಿಶೇಷ ಅಂದ್ರೆ ದರ್ಶನ್ ಅಭಿನಯದ 'ಒಡೆಯ' ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ.
ಸಾಕಷ್ಟು ಸಿನಿಮಾಗಳನ್ನು ಮಾಡಿರುವ ಯಶಸ್ ಈಗ ಹೊಸ ಸಿನಿಮಾವೊಂದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೌದು, ಯಶಸ್ ಸೂರ್ಯ ಅಭಿನಯದ ಹೊಸ ಸಿನಿಮಾ 'ರಂಗಪಟ್ಟಣ'. ಯಶಸ್ ಹುಟ್ಟುಹಬ್ಬದ ಪ್ರಯುಕ್ತ ಈ ಸಿನಿಮಾ ಪೋಸ್ಟರ್ ಕೂಡ ರಿಲೀಸ್ ಮಾಡಲಾಗಿದೆ.
ದರ್ಶನ್ ಅಭಿನಯದ 'ಗಂಡುಗಲಿ ಮದಕರಿ ನಾಯಕ' ಸಿನಿಮಾ ಆಗಸ್ಟ್ ನಿಂದ ಪ್ರಾರಂಭ
ಅಂದ್ಹಾಗೆ ಚಿತ್ರಕ್ಕೆ ಸುಪ್ರಿತ್ ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ಚಂದ್ರಶೇಖರ್ ಬಂಡವಾಳ ಹೂಡುತ್ತಿದ್ದಾರೆ. 'ರಂಗಪಟ್ಟಣ' ಪೋಸ್ಟರ್ ಸಖತ್ ಕಲರ್ ಫುಲ್ ಆಗಿದ್ದು ಯಶಸ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ರಿಲೀಸ್ ಮಾಡಿರುವ ಚಿತ್ರತಂಡ ಸಧ್ಯದಲ್ಲೇ ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಲಿದೆ.