Don't Miss!
- Sports
Asia Cup 2023: ಎಸಿಸಿ ಸಭೆಯಲ್ಲಿ ತೀರ್ಮಾನ: ಏಷ್ಯಾಕಪ್ ಟೂರ್ನಿ ಪಾಕಿಸ್ತಾನದಿಂದ ಸ್ಥಳಾಂತರ!
- Lifestyle
Horoscope Today 6 Feb 2023: ಸೋಮವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- News
ರಾಜ್ಯ ರಾಜಕೀಯದ ಮುಂದಿನ ರಹಸ್ಯವೊಂದನ್ನು ಬೇಧಿಸಿದ ಎಚ್ಡಿಕೆ
- Finance
ಆಧಾರ್ ಕಾರ್ಡ್ ಸಂಖ್ಯೆಯಿಂದ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲಿಸಿ, ಹೇಗೆ ಇಲ್ಲಿ ತಿಳಿಯಿರಿ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Technology
ಇನ್ಮುಂದೆ ಟ್ವಿಟ್ಟರ್ನಲ್ಲೂ ಹಣ ಗಳಿಸಬಹುದು; ಮಸ್ಕ್ರ ಹೊಸ ನಿರ್ಧಾರ ಏನು!?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
"ತಲೆಗೆ ಹಾಕೊಳಲ್ಲ.. ನೊಂದುಕೊಳ್ಳಲ್ಲ.. ಬೇಜಾರು ಮಾಡಿಕೊಳ್ಳಲ್ಲ.. ಕಾಲರ್ ಎತ್ಕೊಂಡೇ ಓಡಾಡೋಣ"- ದರ್ಶನ್!
ಇದೂವರೆಗೂ ಬಿಡುಗಡೆಯಾದ 'ಕ್ರಾಂತಿ' ಸಿನಿಮಾದ ಎಲ್ಲಾ ಹಾಡುಗಳು ಸಂಗೀತ ಪ್ರಿಯರಿಗೆ ಕಿಕ್ ಕೊಡುತ್ತಿದೆ. ಮೈಸೂರು, ಹೊಸಪೇಟೆ, ಹುಬ್ಬಳ್ಳಿಯಲ್ಲಿ ಒಂದೊಂದು ಹಾಡನ್ನು ರಿಲೀಸ್ ಮಾಡಲಾಗಿದೆ.
ಆದರೆ, ಹೊಸಪೇಟೆಯಲ್ಲಿ ಹಾಡನ್ನು ರಿಲೀಸ್ ಮಾಡುವ ವೇಳೆ ಕಿಡಿಗೇಡಿಗಳು ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದರು. ಈ ಘಟನೆ ನಡೆದ ಬಳಿಕವೂ ದರ್ಶನ್ ಒಂದೇ ಒಂದು ಮಾತಾಡಿರಲಿಲ್ಲ. ಈಗ ಹುಬ್ಬಳ್ಳಿಯಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ದರ್ಶನ್ ನೋಡಲು ಜನರು ಕಿಕ್ಕಿರಿದು ಸೇರಿದ್ದರು. ಇವರ ಮಧ್ಯದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

'ನಾವು ತಲೆಗೂ ಹಾಕಿಕೊಳ್ಳುವುದಿಲ್ಲ'
ಹೊಸಪೇಟೆಯ ಘಟನೆಗೆ ಸಂಬಂಧಿಸಿದಂತೆ ಬೆಂಬಲ ನೀಡಿದವರಿಗೆ ದರ್ಶನ್ ಧನ್ಯವಾದಗಳನ್ನು ಅರ್ಪಿಸಿದ್ದರು. ಅದು ಬಿಟ್ಟರೆ, ದರ್ಶನ್ ಚಪ್ಪಲಿ ಎಸೆತದ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗಿರಲಿಲ್ಲ. ಆದ್ರೀಗ ಹುಬ್ಬಳ್ಳಿಯಲ್ಲಿ ಶಾರ್ಟ್ ಅಂಡ್ ಸ್ವೀಟ್ ಆಗಿ ರಿಯಾಕ್ಷನ್ ನೀಡಿದ್ದಾರೆ. "ಯಾರು ಏನೇ ಮಾಡಲಿ. ಹಾಳು ಮಾಡೋಕೆ ಒಂದು ಜನ ಇದ್ರೂ, ಕಾಪಾಡುವುದಕ್ಕೆ ನಿಮ್ಮಂತಹ ಸಾವಿರಾರು ಜನ ಇದ್ದಾರೆ. ಇದರ ಮೇಲೆ ನೋಡಿಕೊಳ್ಳೋಣ. ನಿನ್ನೆ ಬಿದ್ದಿರೋದಕ್ಕೆ ಇವತ್ತು ಹೂವಿನಲ್ಲಿ ಮುಳುಗಿಸಿದ್ರಾ? ಇದಕ್ಕಿಂತ ಬೇಕಾ? ಇದಕ್ಕಿಂತ ಬೇಕೆನಪ್ಪಾ? ಅದ್ಯಾವುದು ನಾವು ತಲೆಗೂ ಹಾಕಿಕೊಳ್ಳೋದಿಲ್ಲ. " ಎಂದು ಹೇಳಿದ್ದಾರೆ.

'ಕಾಲರ್ ಎತ್ಕೊಂಡು ಓಡಾಡೋಣ'
" ನೀವು ಏನೇ ಮಾಡಿದ್ರೂ ನಾವು ತಲೆಗೂ ಹಾಕಿಕೊಳ್ಳಲ್ಲ. ನೊಂದುಕೊಳ್ಳಲ್ಲ. ಬೇಜಾರು ಮಾಡಿಕೊಳ್ಳಲ್ಲ. ಹಿಂಗೆ (ಕಾಲರ್) ಅಂದ್ಕೊಂಡೇ ಓಡಾಡೋಣ. ಇನ್ನೂ ಒಂದು ಸ್ಟೆಪ್ ಮುಂದಕ್ಕೆ ಹೋಗಿ ಉರಿಸಬೇಕು ಅಂದ್ರೆ, ಇನ್ನೂ ಜಾಸ್ತಿ ಉರಿಸೋಣ. ನಾವು ಮಾತಾಡೋದು ಬೇಡ. ನಮ್ಮ ಕೆಲಸ ಮಾತಾಡಲಿ ಅಂತಾನೇ ನಾನು ಬಯಸೋದು." ಎಂದು ದರ್ಶನ್ ಪರೋಕ್ಷವಾಗಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ಧನ್ಯವಾದ
ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಸ್ಯಾಂಡಲ್ವುಡ್ ಅವರ ಪರವಾಗಿ ನಿಂತಿತ್ತು. ಕಿಚ್ಚ ಸುದೀಪ್, ಶಿವರಾಜ್ಕುಮಾರ್ ಸೇರಿದಂತೆ ದಿಗ್ಗಜರೆಲ್ಲಾ ದರ್ಶನ್ ಬೆಂಬಲಕ್ಕೆ ನಿಂತಿದ್ದರು. ಅವರೆಲ್ಲರಿಗೂ ದರ್ಶನ್ ಧನ್ಯವಾದಗಳನ್ನು ಅರ್ಪಿಸಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ದರ್ಶನ್ ನಟಿ ಕಿಚ್ಚ ಸುದೀಪ್ಗೆ ಧನ್ಯವಾದಗಳನ್ನು ಹೇಳಿದ್ದು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಚರ್ಚೆಯಾಗಿತ್ತು.

ಬೆಂಗಳೂರಿನಲ್ಲಿ 'ಕ್ರಾಂತಿ' ಟ್ರೈಲರ್
ಹೊಸಪೇಟೆ ಪ್ರಕರಣದ 'ಕ್ರಾಂತಿ' ಸಿನಿಮಾದ ಟ್ರೈಲರ್ ಅನ್ನು ಅಲ್ಲೇ ರಿಲೀಸ್ ಮಾಡುವಂತೆ ಒತ್ತಡ ಹಾಕಿದ್ದರು. ಆದರೆ, ದರ್ಶನ್ ಟ್ರೈಲರ್ ರಿಲೀಸ್ ಬಗ್ಗೆ ಹುಬ್ಬಳ್ಳಿಯಲ್ಲೇ ಮಾಹಿತಿಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿಯೇ ಸಿನಿಮಾದ ಟ್ರೈಲರ್ ರಿಲೀಸ್ ಆಗುತ್ತೆ ಅಂತ ಹೇಳಿದ್ದಾರೆ. ಅಂದು ಇಡೀ ಚಿತ್ರತಂಡ ಇರಲಿದ್ದು, ಅವರಿಗಾಗಿಯೇ ಬೆಂಗಳೂರಿನಲ್ಲಿ ಟ್ರೈಲರ್ ರಿಲೀಸ್ ಆಗುತ್ತೆ ಎಂದು ಮಾಹಿತಿ ನೀಡಿದ್ದಾರೆ.