Don't Miss!
- News ಮೋದಿ ಬಳಿಕ ರಾಜ್ಯಕ್ಕೆ ರಾಹುಲ್ ಗಾಂಧಿ ಎಂಟ್ರಿ: ಯಾವಾಗ, ಎಲ್ಲಿ ಪ್ರಚಾರ?
- Lifestyle ವರ್ಕೌಟ್ ಮಾಡಿದ ತಕ್ಷಣ ತಣ್ಣೀರ ಸ್ನಾನ ಮಾಡಲೇಬಾರದು, ಏಕೆ?
- Automobiles Mahindra: ಬೊಲೆರೋ ನಿಯೋ ಪ್ಲಸ್ 9-ಸೀಟರ್ ಕಡಿಮೆ ಬೆಲೆಗೆ ಬಿಡುಗಡೆ: ವಿಶೇಷತೆಗಳೇನು?
- Technology Samsung: ಸ್ಯಾಮ್ಸಂಗ್ ಗ್ಯಾಲಕ್ಸಿ ವಾಚ್ 7 ಜುಲೈನಲ್ಲಿ ಲಾಂಚ್ ಆಗುವ ಸಾಧ್ಯತೆ! ಬೆಲೆ, ಫೀಚರ್ಸ್ ಬಗ್ಗೆ ತಿಳಿಯಿರಿ
- Finance ಈ ಎರಡು ದೇಶಗಳಿಗೆ ತಲಾ 10,000 ಟನ್ ಈರುಳ್ಳಿ ರಫ್ತು ಮಾಡಲು ಭಾರತ ಅನುಮತಿ
- Sports ರೋಹಿತ್ ಮಾತನ್ನು ಗಂಭೀರವಾಗಿ ತೆಗೆದುಕೊಂಡ ದಿನೇಶ್ ಕಾರ್ತಿಕ್; ಟಿ20 ವಿಶ್ವಕಪ್ಗೆ ಆಯ್ಕೆ ಪಕ್ಕಾನಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ದರ್ಶನ ಪಡೆದ ಡಿ ಬಾಸ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಆಗಾಗ ಮೈಸೂರಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಮೂಲತಃ ಮೈಸೂರಿನವರೇ ಆಗಿರುವ ದರ್ಶನ್ ಅವರ ಆರಾಧ್ಯ ದೈವ ಚಾಮುಂಡೇಶ್ವರಿ. ಯಾವುದೇ ಶುಭ ಕೆಲಸಗಳನ್ನು ಮಾಡುವ ಮುನ್ನ ಬೆಟ್ಟದ ಅರಸಿಗೆ ನಮಿಸಿ ಮುಂದಿನ ಕೆಲಸಗಳನ್ನು ಮಾಡುವುದು ಡಿ ಬಾಸ್ ಹಿಂದಿನಿಂದಲೂ ನಡೆಸಿಕೊಂಡು ಬಂದಿದ್ದಾರೆ.
ಸಾಮಾನ್ಯ ದಿನಗಳು ಮಾತ್ರವಲ್ಲದೆ ಆಷಾಢ ಶುಕ್ರವಾರ, ವರ್ಧಂತಿ, ಶ್ರಾವಣ ಮಾಸದಲ್ಲಿ ಎಷ್ಟೇ ಕೆಲಸವಿದ್ದರೂ ಅದಕ್ಕೊಂದು ಸಣ್ಣ ಬ್ರೇಕ್ ಕೊಟ್ಟು ದರ್ಶನ್ ತಪ್ಪದೇ ಚಾಮುಂಡಿಯ ದರ್ಶನ ಪಡೆದುಕೊಳ್ಳುತ್ತಾರೆ.
'ನಾಗರಹಾವು' ಚಿತ್ರಕ್ಕೆ ಶುಭಕೋರಿದ ಚಾಲೆಂಜಿಂಗ್ ಸ್ಟಾರ್
ಇಂದು ಆಷಾಡ ಶುಕ್ರವಾರ ಈ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ. ಪ್ರತಿ ವರ್ಷ ಆಷಾಢ ಶುಕ್ರವಾರ ಬೆಟ್ಟಕ್ಕೆ ಭೇಟಿ ನೀಡುವ ಡಿ ಬಾಸ್ ಈ ಸಲವು ಸ್ನೇಹಿತರೊಂದಿಗೆ ಆಗಮಿಸಿ ಚಾಮುಂಡಿಯ ದರ್ಶನ ಪಡೆದಿದ್ದಾರೆ.
ಮೈಸೂರಿನಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಿದ್ದಂತೆ, ಅಭಿಮಾನಿಗಳು ಹರ್ಷೋದ್ಗಾರ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನರ ಮಧ್ಯೆ ಹರಸಾಹಸ ಪಟ್ಟು ದಾಸ ದೇವಾಲಯ ಪ್ರವೇಶಿಸಿದ್ದಾರೆ.
ನಟ ದರ್ಶನ್ ಒಳ ಬಿಡಲು ಪೊಲೀಸರ ಹರಸಾಹಸ ಮಾಡಿದ್ದು ಇದೇ ವೇಳೆ ಅಭಿಮಾನಿಗಳನ್ನ ನಿಯಂತ್ರಿಸುವಾಗ ಸ್ವಲ್ಪ ಹೊತ್ತು ನೂಕುನುಗ್ಗಲು ಉಂಟಾಗಿದೆ. ಇವುಗಳ ಮಧ್ಯೆ ಚಾಲೆಂಜಿಂಗ್ ಸ್ಟಾರ್ ಚಾಮುಂಡಿ ದೇವಿಯ ದರ್ಶನ ಪಡೆದು ಹಿಂದಿರುಗಿದ್ದಾರೆ.