Just In
Don't Miss!
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 18ರ ಚಿನ್ನ, ಬೆಳ್ಳಿ ದರ
- Education
KTIL Recruitment 2021: 38 ಡಿಟಿಸಿ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ
- News
ಸಮುದ್ರದಲ್ಲಿ 12 ಕಿ.ಮೀ ಒಬ್ಬಂಟಿಯಾಗಿ ಕಯಾಕ್ ಮಾಡಿ ಸಾಹಸ ಮೆರೆದ ಪತ್ರಕರ್ತ!
- Automobiles
ಕಾಡುತ್ತಿರುವ ಬಿಡಿಭಾಗದ ಕೊರತೆ, ಉತ್ಪಾದನಾ ಘಟಕವನ್ನು ಮುಚ್ಚಿದ ಕಾರು ತಯಾರಕ ಕಂಪನಿ
- Sports
ಜೋ ರೂಟ್ ದ್ವಿಶತಕ, ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ಗೆ 7 ವಿಕೆಟ್ ಗೆಲುವು
- Lifestyle
ಬಂಜೆತನಕ್ಕೆ ಕಾರಣವಾಗುವ ಥೈರಾಯ್ಡ್ ಲಕ್ಷಣಗಳು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಾಳಿ ಸುದ್ದಿ ಹಬ್ಬಿಸಬೇಡಿ, ಎಲ್ಲ ವದಂತಿಗಳಿಗೆ ಬ್ರೇಕ್ ಹಾಕಿದ ಡಿ-ಬಾಸ್.!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಚಿತ್ರ 'ಕುರುಕ್ಷೇತ್ರ' ಘೋಷಣೆ ಆದಾಗನಿಂದಲೂ, ತಮ್ಮ ಮುಂದಿನ ಚಿತ್ರಗಳ ಬಗ್ಗೆ ಗೊಂದಲ ಹೆಚ್ಚಾಗಿದೆ.
50ನೇ ಚಿತ್ರದ ನಂತರ 51 ಮತ್ತು 52ನೇ ಚಿತ್ರ ಯಾರು ನಿರ್ಮಾಣ ಮಾಡಲಿದ್ದಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಹೀಗಿರುವಾಗ, ಈ ಚರ್ಚೆಗೆ ಮತ್ತೊಂದು ಚಿತ್ರ ಸೇರಿಕೊಂಡಿದೆ.
ಇದನ್ನೆಲ್ಲಾ ಗಮನಿಸಿರುವ ದಾಸ ಈಗ ಎಲ್ಲರಿಗೂ ಖಡಕ್ ಸೂಚನೆ ಕೊಟ್ಟಿದ್ದಾರೆ. ಯಾವ ಚಿತ್ರ ಮೊದಲು, ಯಾವ ಚಿತ್ರ ನೆಕ್ಸ್ಟ್ ಎಂಬುದರ ಬಗ್ಗೆ ಗಾಳಿ ಸುದ್ದಿ ಹಬ್ಬಿಸುತ್ತಿರುವರಿಗೆ ದರ್ಶನ್ ಉತ್ತರಿಸಿದ್ದಾರೆ. ಮುಂದೆ ಓದಿ....

'ತಾರಕ್' ಯಶಸ್ಸಿಗೆ ಚಿರಋಣಿ
''ತಾರಕ್ ಚಿತ್ರವನ್ನು ಇಷ್ಟು ಪ್ರೀತಿಯಿಂದ ದೊಡ್ಡ ಮಟ್ಟದ ಯಶಸ್ಸು ನೀಡಿ ಒಪ್ಪಿಕೊಂಡಿರುವುದಕ್ಕೆ ಎಲ್ಲರಿಗೂ ನಮ್ಮ ತಂಡದಿಂದ ಕೃತಜ್ಞತೆಗಳು. ನಿಮ್ಮ ಪ್ರೀತಿ-ಪ್ರೋತ್ಸಾಹ ನಮ್ಮಂಥ ಚಿಕ್ಕ ಕಲಾವಿದರ ಮೇಲೆ ಸದಾ ಇರಲಿ'' - ದರ್ಶನ್, ನಟ
'ತಾರಕ್' ಸಿನಿಮಾ ಗೆದ್ದ ಖುಷಿಯನ್ನು ಹಂಚಿಕೊಂಡ ದಾಸ ದರ್ಶನ್

ಸದ್ಯಕ್ಕೆ 'ಕುರುಕ್ಷೇತ್ರ' ಮಾತ್ರ
''ತಾರಕ್' ಆದಮೇಲೆ ನನ್ನ 50ನೇ ಚಿತ್ರ 'ಕುರುಕ್ಷೇತ್ರ'. ಅದರ ವಿವರ ಕೆಲ ತಿಂಗಳ ನಂತರ ನಾನೇ ತಿಳಿಸುವೆ'' ಎಂದು ಹೇಳುವ ಮೂಲಕ ಮುಂದಿನ ಚಿತ್ರಗಳ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.
ತಮಿಳು ನಟ ಅಜಿತ್ ಚಿತ್ರದ ರೀಮೇಕ್ ನಲ್ಲಿ ದರ್ಶನ್ ನಟನೆ.!

ಎಲ್ಲ ಗಾಳಿ ಸುದ್ದಿಗಳು
''ನಾನು ಕಂಡ ಹಾಗೆ ಮೀಡಿಯಾದಲ್ಲಿ, ಸಾಮಾಜಿಕ ತಾಣಗಳಲ್ಲಿ ನನ್ನ 51, 52, 53ನೇ ಚಿತ್ರಗಳ ಬಗ್ಗೆ ಅನವಶ್ಯಕ ಚರ್ಚೆಗಳು ಮತ್ತು ಗಾಳಿ ಸುದ್ದಿಗಳು ಸದ್ಯಕ್ಕೆ ಬೇಡ'' ಎಂದು ದಾಸ ಎಲ್ಲ ವದಂತಿಗಳಿಗೆ ಬ್ರೇಕ್ ಹಾಕಿದ್ದಾರೆ

ಎಲ್ಲ ವಿವರ ನಾನೇ ಕೊಡ್ತೀನಿ
ಇನ್ನು ಉಳಿದಂತೆ 'ಕುರುಕ್ಷೇತ್ರ' ಚಿತ್ರದ ನಂತರ ಮುಂದಿನ ಚಿತ್ರಗಳ ಬಗ್ಗೆ ಎಲ್ಲ ವಿವರಗಳನ್ನ ನಾನೇ ಕೊಡ್ತೀನಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಪಷ್ಟಪಡಿಸಿದ್ದಾರೆ.

3 ಚಿತ್ರಗಳು ಕಾಯುತ್ತೀವೆ
'ಕುರುಕ್ಷೇತ್ರ' ಚಿತ್ರದ ನಂತರ ದರ್ಶನ್ ಮೂರು ಸಿನಿಮಾಗಳನ್ನ ಒಪ್ಪಿಕೊಂಡಿದ್ದಾರೆ. ಶೈಲಜಾ ನಾಗ್ ನಿರ್ಮಾಣದ ಸಿನಿಮಾ ಮತ್ತು ಸಂದೇಶ್ ನಾಗರಾಜ್ ಅವರ ನಿರ್ಮಾಣದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ. ಇದರ ಮಧ್ಯೆ ಎಂ.ಡಿ.ಶ್ರೀಧರ್ ನಿರ್ದೇಶನದ ಚಿತ್ರ ಕೂಡ ಟೇಕ್ ಆನ್ ಆಗಲಿದೆ. ಹೀಗಾಗಿ, ಈ ಮೂರು ಚಿತ್ರಗಳಲ್ಲಿ ಯಾವುದು ಮೊದಲು, ಯಾವುದು ನೆಕ್ಸ್ಟ್ ಎಂಬುದು ದೊಡ್ಡ ಚರ್ಚೆಯಾಗಿದೆ.